ಮಾರುಕಟ್ಟೆಯಲ್ಲಿ ಮಾಸ್ಕ್ ಮಾಫಿಯಾ ಶಂಕೆ!


Team Udayavani, Mar 14, 2020, 2:40 PM IST

ಮಾರುಕಟ್ಟೆಯಲ್ಲಿ ಮಾಸ್ಕ್ ಮಾಫಿಯಾ ಶಂಕೆ!

ಸಾಂದರ್ಭಿಕ ಚಿತ್ರ

ಹಾವೇರಿ: ಕೊರೊನಾ ಸೋಂಕಿನ ಭೀತಿಯಿಂದ ಜನರು ಆತಂಕಗೊಂಡು ಎಲ್ಲೆಡೆ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಗೆ ಮೊರೆ ಹೋಗುತ್ತಿದ್ದಾರೆ. ಆದರೆ, ಜಿಲ್ಲೆಯ ಔಷಧ ಅಂಗಡಿಗಳಲ್ಲಿ ಮಾತ್ರ ಮಾಸ್ಕ್ ಸಿಗದೆ ಜನರು ಮತ್ತಷ್ಟು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಯಾವುದೇ ಕಂಡು ಬಾರದೆ ಇದ್ದರೂ ಕೆಮ್ಮು, ಶೀತದಿಂದ ವೈರಾಣುಗಳು ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದನ್ನು ತಡೆಯಲು ಜನರು ಮಾಸ್ಕ್ ಗಳಿಗೆ ಮೊರೆ ಹೋಗುತ್ತಿದ್ದಾರೆ.

ಇನ್ನು ಶಾಲಾ- ಕಾಲೇಜುಗಳಲ್ಲಿಯೂ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸಲು ವಿದ್ಯಾರ್ಥಿಗಳಿಗೆ ಸೂಚಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಮಾಸ್ಕ್ಗೆ ಎಲ್ಲಿಲ್ಲದ ಬೇಡಿಕೆ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ಮಾಸ್ಕ್ಗಳು ದೊರೆಯದೇ ಇರುವ ಹಿಂದೆ ಮಾಸ್ಕ್ ಮಾಫಿಯಾದ ಶಂಕೆ ವ್ಯಕ್ತವಾಗಿದೆ.

ನೋ ಸ್ಟಾಕ್‌: ಮಾರುಕಟ್ಟೆಯಲ್ಲಿ ಮಾಸ್ಕ್ ಲಭ್ಯತೆಯ ಸತ್ಯಾಸತ್ಯತೆ ಅರಿಯಲು “ಉದಯವಾಣಿ’ ಜನೌಷಧಿ ಅಂಗಡಿ ಸೇರಿದಂತೆ 30ಕ್ಕೂ ಹೆಚ್ಚು ಪ್ರಮುಖ ಔಷ ಧ ಅಂಗಡಿಗಳಲ್ಲಿ ವಿಚಾರಿಸಿದಾಗ ಎಲ್ಲೆಡೆ “ಮಾಸ್ಕ್ ಇಲ್ಲ’, “ಮಾಸ್ಕ್ ಸ್ಟಾಕ್‌ ಇಲ್ಲ’, “ಮಾಸ್ಕ್ ಸಪ್ಲೈ ಇಲ್ಲ’ ಎಂಬ ಉತ್ತರಗಳೇ ಕೇಳಿ ಬಂದವು.

ಕಳೆದ ಒಂದೆರಡು ವಾರಗಳಿಂದ ಮಾಸ್ಕ್ ಗಳು ಸರಬರಾಜು ಆಗಿಲ್ಲ ಎಂದು ಹಲವು ಔಷಧ ಅಂಗಡಿಗಳ ಮಾಲೀಕರು ಗ್ರಾಹಕರಿಗೆ ಹೇಳುತ್ತಿದ್ದು, ಇದು ಎಷ್ಟರ ಮಟ್ಟಿಗೆ ನಿಜ ಎಂಬುದನ್ನು ಆರೋಗ್ಯ ಇಲಾಖೆಯೇ ಖಚಿತ ಪಡಿಸಬೇಕಾಗಿದೆ.

ಅತ್ಯಧಿಕ ದರಕ್ಕೆ ಮಾರಾಟ: ಮಾಸ್ಕ್ಗಳು ವಾಸ್ತವದಲ್ಲಿ ಸರಬರಾಜು ಇಲ್ಲ ಎಂಬ ಉತ್ತರ ಔಷಧ ಅಂಗಡಿಗಳಿಂದ ಕೇಳಿ ಬರುತ್ತಿದೆಯಾದರೂ ಕೆಲವು ಅಂಗಡಿಗಳಲ್ಲಿ ಮಾಸ್ಕ್ಗಳನ್ನು 150ರಿಂದ 200ರೂ. ಗಳಿಗೆ ಮಾರಾಟ ಮಾಡುತ್ತಿದ್ದಾರೆಂಬ ವದಂತಿಯೂ ವ್ಯಾಪಕವಾಗಿ ಹಬ್ಬಿದೆ. ಹೀಗಾಗಿ “ಮಾಸ್ಕ್ ದಾಸ್ತಾನು ಇಲ್ಲ’ ಎಂಬುದರ ಹಿಂದೆ ಕಾಣದ ಕೈಗಳ ಕೈವಾಡ ಇರಬಹುದೇ ಎಂಬ ಸಂಶಯ ದಟ್ಟವಾಗಿದೆ.

ಬಟ್ಟೆ ಮಾಸ್ಕ್ ಗೆ ದರ ಹೆಚ್ಚಳ: ಔಷಧ ಅಂಗಡಿಗಳಲ್ಲಿ ಮಾಸ್ಕ್ ಸಿಗುತ್ತಿಲ್ಲ. ಸಾದಾ ಬಟ್ಟೆಯಿಂದ ತಯಾರಿಸಿದ ಮಾಸ್ಕ್ಗಳನ್ನಾದರೂ ಖರೀದಿಸೋಣ ಎಂದರೆ ಅಲ್ಲಿಯೂ ದರ ಹೆಚ್ಚಳದ ಭೂತ ಜನರನ್ನು ಕಾಡುತ್ತಿದೆ. ಸಾಮಾನ್ಯ ದಿನಗಳಲ್ಲಿ 10-15ರೂ. ಗಳಿಗೆ ಒಂದರಂತೆ ಮಾರಾಟವಾಗುತ್ತಿದ್ದ ಬಟ್ಟೆಯ ಮಾಸ್ಕ್ ಗಳನ್ನು 50ರಿಂದ 100ರೂ.ವರೆಗೂ ಮಾರಾಟ ಮಾಡಲಾಗುತ್ತಿದೆ. ಒಟ್ಟಾರೆ ಕೊರೊನಾ ಸೋಂಕಿನ ಭೀತಿಯ ದುರ್ಲಾಭ ಪಡೆಯಲು ಕೆಲವು ಕುಹಕಿಗಳು ಮುಂದಾಗಿದ್ದು ಜನರು ಸುರಕ್ಷತಾ ಕ್ರಮ ಕೈಗೊಳ್ಳಲು ಸಹ ಪರದಾಡುವಂತಾಗಿದೆ.

ಮಾಸ್ಕ್ ಸರಬರಾಜು ಸಮರ್ಪಕವಾಗಿಲ್ಲ. ಕೆಲ ಸಗಟು ವ್ಯಾಪಾರಸ್ಥರು ಮಾರಾಟ ಮಾಡುತ್ತಿದ್ದರೂ ಅವರ ದರ ಅತಿ ಹೆಚ್ಚಾಗಿದೆ. 100-150ರೂ.ಗಳಿಗೆ ಒಂದರಂತೆ ಮಾರುತ್ತಿದ್ದಾರೆ. ನಾವು ಅಂಗಡಿಯವರು ಅಷ್ಟೊಂದು ಅ ಧಿಕ ದರ ಕೊಟ್ಟು ತಂದು ನಾವು ಅದರಲ್ಲಿ ನಾವೂ ಲಾಭ ಇಟ್ಟುಕೊಂಡು

ಎಷ್ಟಕ್ಕೆ ಮಾರಬೇಕು ಎಂಬುದು ತಿಳಿಯುತ್ತಿಲ್ಲ. ಇನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಲಕ್ಷಾಂತರ ರೂ. ದಂಡ ತುಂಬಬೇಕು. ಹಾಗಾಗಿ ನಾವು ಮಾಸ್ಕ್ ತರಿಸುತ್ತಿಲ್ಲ.  –ಹೆಸರು ಹೇಳಲಿಚ್ಛಿಸದ ಔಷಧಿ ಅಂಗಡಿ ಮಾಲೀಕ

ಜಿಲ್ಲಾಸ್ಪತ್ರೆಯಲ್ಲಿ 24000 ಮಾಸ್ಕ್ ದಾಸ್ತಾನು ಇದೆ. ಇನ್ನು ತಾಲೂಕಾಸ್ಪತ್ರೆಗಳಲ್ಲಿಯೂ ಸಾಕಷ್ಟು ದಾಸ್ತಾನು ಇದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಷ್ಟು ಬೇಕಾಗಿದೆ ಎಂಬುದನ್ನು ಪರಿಶೀಲಿಸಿ ಶೀಘ್ರವೇ ತರಿಸುವ ವ್ಯವಸ್ಥೆ ಮಾಡುತ್ತೇನೆ. ಇನ್ನು ಖಾಸಗಿ ಔಷಧಿ ಅಂಗಡಿಯವರಿಗೆ ಮಾಸ್ಕ್ ಗಳನ್ನು ಕಡ್ಡಾಯವಾಗಿ ತರಿಸಿಕೊಳ್ಳಲು ಆದೇಶಿಸಲಾಗಿದೆ.- ರಾಜೇಂದ್ರ ದೊಡ್ಡಮನಿ, ಜಿಲ್ಲಾ ಆರೋಗ್ಯಾಧಿಕಾರಿ

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.