ಮಠಗಳು ಜಾತಿಗೆ ಸೀಮಿತವಲ್ಲ


Team Udayavani, Jan 12, 2020, 2:22 PM IST

hv-tdy-1

ಗುತ್ತಲ: ಸಮಾಜಕ್ಕಾಗಿ, ಭಕ್ತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹಾತ್ಮರನ್ನು ನೆನೆದರೆ ಮುಕ್ತಿ ಪ್ರಾಪ್ತಿಯಾಗುವುದು. ಅದರಂತೆ ಅವರ ಪುಣ್ಯ ಸ್ಮರಣೋತ್ಸವ ಆಚರಣೆ ಮಾಡಲಾಗುವುದು ಎಂದು ಶಿರಹಟ್ಟಿ ಫಕ್ಕಿರೇಶ್ವರ ಸಂಸ್ಥಾನಮಠದ ಜಗದ್ಗುರು ಫಕ್ಕೀರ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಸಮೀಪದ ಅಗಡಿಯ ರುದ್ರಮುನಿ ಶಿವಯೋಗಿಗಳ 60ನೇ ಪುಣ್ಯ ಸ್ಮರಣೋತ್ಸವ ಹಾಗೂ ಲಿಂ| ಸಂಗನಬಸವ ಸ್ವಾಮೀಜಿ ಸ್ಮರಣೋತ್ಸವ ಅಂಗವಾಗಿ ಶುಕ್ರವಾರ ಸಂಜೆ ಜನಪದ ಸಂಗೀತ ಹಾಗೂ ಧರ್ಮಸಭೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಶ್ರೀಗಳು, ಮಠದಲ್ಲಿನ ಪುರಾಣ ಪ್ರವಚನಗಳು ಭಕ್ತಿ ಹೆಚ್ಚಿಸುವ ಮೂಲಕ ಸಮಾಜವನ್ನು ಬದಲಾವಣೆ ಕಡೆಗೆ ಸಾಗಿಸುತ್ತವೆ. ಅದರಂತೆ ಮಠಗಳು ಯಾವುದೇ ಜಾತಿಗೆ ಸೀಮಿತವಾಗಿರದೆ ಜಾತ್ಯಾತೀತತೆಯ ಮಠಗಳಾಗಿ ಪರಿವರ್ತನೆ ಆಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಹತ್ತಿಮತ್ತೂರ ವಿರಕ್ತಮಠದ ನಿಜಗುಣ ಸ್ವಾಮೀಜಿ ಮಾತನಾಡಿ, ಸಮಾಜ ಹಾಗೂ ಮಠಗಳ ಮಧ್ಯೆ ಸಹಕಾರದ ಅವಿನಾಭಾವ ಸಂಬಂಧ ಹೊಂದಿರುವ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೇ ಸಾಂಗವಾಗಿ ನೆರವೇರುತ್ತವೆ. ಲಿಂಗಪೂಜಾ ನಿಷ್ಠರಾದ ಸಂಗನಬಸವ ಶ್ರೀಗಳು ಲಿಂಗೈಕ್ಯರಾಗಿದ್ದರೂ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಕಲ್ಮಠ ಹಾಗೂ ಪ್ರಭುಸ್ವಾಮಿಮಠವನ್ನು ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಮೂಲಕ ಗುರುಸಿದ್ಧ ಸ್ವಾಮೀಜಿ ಕಾಯಕಯೋಗಿ ಆಗಿದ್ದಾರೆ ಎಂದರು.

ನೆಗಳೂರ ಹಿರೇಮಠದ ಗುರುಶಾಂತೇಶ್ವರ ಸ್ವಾಮೀಜಿ ಮಾತನಾಡಿ, ಧರ್ಮ ಜಾಗೃತಿಗಾಗಿ ಮಠಗಳಲ್ಲಿ ಧಾರ್ಮಿಕಕಾರ್ಯಕ್ರಮಗಳು ಜರುಗುತ್ತವೆ. ಧರ್ಮದ ಉಳಿವಿನಲ್ಲಿ ಮಾತೃ ಸ್ವರೂಪ ಮಹಿಳೆಯರ ಪಾತ್ರ ಹಿರಿದು. ತಮ್ಮ ಮಕ್ಕಳಿಗೆ ಮನೆಯಲ್ಲಿ ಧರ್ಮದ ಬಗ್ಗೆ ತಿಳಿವಳಿಕೆ ನೀಡುವ ಮೂಲಕ ಮನೆಯಿಂದಲೇ ಧರ್ಮ ಶಿಕ್ಷಣ ನೀಡಬೇಕು ಎಂದರು.

ಕಾರ್ಯಕ್ರಮ ಪೂರ್ವದಲ್ಲಿ ಪ್ರಭುಸ್ವಾಮಿಮಠದ ಗುರುಸಿದ್ಧ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಧಾರವಾಡದ ಹಾಸ್ಯ ಮತ್ತು ಜನಪದ ಕಲಾತಂಡದ ಇಮಾಮಸಾಬ್‌ ವಲ್ಲಪ್ಪನವರ ಹಾಗೂ ವಾಗೀಶ ಭಿಕ್ಷಾವರ್ತಿಮಠ ತಂಡ ಸಂಗೀತ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮದಲ್ಲಿ ಕಂಪ್ಲಿಯ ಅಭಿನವ ಪ್ರಭು ಸ್ವಾಮೀಜಿ, ಬಸವಕಲ್ಯಾಣದ ಶ್ರೀ ಸಂಗಮೇಶ್ವರ ದೇವರು, ಶಾಸಕ ನೆಹರು ಓಲೇಕಾರ, ಮುಖಂಡರಾದ ಕೋಟ್ರಯ್ಯ ಕೋವಳ್ಳಿಮಠ, ನಾಗರಾಜ ಎರಿಮನಿ, ಶಂಭಣ್ಣ ಬಸೇಗೆಣ್ಣಿ, ನಾಗರಾಜ ಬಸೆಗೇಣ್ಣಿ, ಪ್ರಭು ಮರಗೂರ, ನೀಲಪ್ಪ ಚಾವಡಿ ಸೇರಿದಂತೆ ಅನೇಕರಿದ್ದರು. ಶಿಕ್ಷಕಿಯರಾದ ರೇಣುಕಾ ಕಮ್ಮಾರ ಹಾಗೂ ದಾಕ್ಷಾಯಣಿ ಮಠದ ನಿರೂಪಿಸಿ ವಂದಿಸಿದರು.

Ad

ಟಾಪ್ ನ್ಯೂಸ್

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Andhra-CM-Nara-Lokesh

ದೇವನಹಳ್ಳಿ ಭೂಸ್ವಾಧೀನ ರದ್ದು ಬೆನ್ನಲ್ಲೇ ಉದ್ಯಮಿಗಳಿಗೆ ಆಂಧ್ರ ಪ್ರದೇಶ ಗಾಳ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Hangal: ನಿರಂತರ ಮಳೆಗೆ ಬಿತ್ತನೆಯಾಗದೆ ರೈತ ಕಂಗಾಲು

14

Haveri: ರೇಷ್ಮೆ ಕೃಷಿ ಮಾಡಿ ಮಾದರಿಯಾದ ರೈತ

12

Rattihalli : ಅಂಧ ವೃದ್ಧನ ಬದುಕಿಗೆ ನರೇಗಾ ಬೆಳಕು!

14(1

Ranebennur: ಹತ್ತಿ ಬಿಟ್ಟು ಮೆಕ್ಕೆಜೋಳದತ್ತ ರೈತರ ಒಲವು

17

Haveri: ಅಳಿದುಳಿದ ಬೆಳೆಗೆ ವನ್ಯಜೀವಿ ಕಾಟ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Tax-Collect

ಸಣ್ಣ ಉದ್ದಿಮೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ವಿರುದ್ಧ ಜು.23ರಿಂದ 2 ದಿನ ಬಂದ್‌

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.