ಗ್ರಾಪಂ ಸದಸ್ಯರ ಆಯ್ಕೆ ಚುನಾವಣೆ ಮೂಲಕವೇ ನಡೆಸಲು ಒತ್ತಾಯ


Team Udayavani, May 29, 2020, 6:26 AM IST

ಗ್ರಾಪಂ ಸದಸ್ಯರ ಆಯ್ಕೆ ಚುನಾವಣೆ ಮೂಲಕವೇ ನಡೆಸಲು ಒತ್ತಾಯ

ಹಾನಗಲ್ಲ: ಗ್ರಾಪಂ ಸದಸ್ಯರ ಅಧಿಕಾರಾವಧಿ ಪೂರ್ಣಗೊಂಡ ಸಂದರ್ಭದಲ್ಲಿ ನಾಮ ನಿರ್ದೇಶನದ ಮೂಲಕ ಅಧಿಕಾರ ನೀಡದೆ ಮತ್ತೆ ಚುನಾವಣೆ ಮೂಲಕವೇ ಸದಸ್ಯರ ಆಯ್ಕೆಯಾಗಬೇಕು ಎಂದು ಜನಹಿತ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಕೆ. ಮೋಹನಕುಮಾರ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೋವಿಡ್ ಆತಂಕಗಳ ಹೆಸರಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಡೆಗಣಿಸಿ ಗ್ರಾಪಂಗಳಿಗೆ ಚುನಾವಣೆ ನಡೆಸದೆ ನಾಮ ನಿರ್ದೇಶನದ ಮೂಲಕ ಆಡಳಿತ ವ್ಯವಸ್ಥೆಗೆ ಹೊಸರೂಪ ನೀಡುವುದು ಸರಿಯಲ್ಲ. ಕೂಡಲೆ ಗ್ರಾಪಂಗಳಿಗೆ ಚುನಾವಣೆ ನಡೆಸಿ ಸದಸ್ಯರ ನೇಮಕ ಮಾಡಬೇಕು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಗೌರವಕ್ಕೆ ಪಾತ್ರವಾಗುತ್ತದೆ.

2015ರಲ್ಲಿ ಚುನಾವಣೆ ಮೂಲಕ ಆಯ್ಕೆಯಾದ ಗ್ರಾಪಂ ಸದಸ್ಯರ ಅವಧಿ  5 ವರ್ಷ ಪೂರ್ಣಗೊಂಡಿದೆ. ಪಂಚಾಯತ್‌ ರಾಜ್‌ ವ್ಯವಸ್ಥೆ ಪ್ರಕಾರ ಅವಧಿ ಪೂರ್ಣಗೊಳ್ಳುವುದರ ಒಳಗಾಗಿ ನೂತನ ಸದಸ್ಯರ ಸ್ಥಾನಕ್ಕೆ ಚುನಾವಣೆ ನಡೆಯಬೇಕು. ಆದರೆ ರಾಜ್ಯ ಸರ್ಕಾರ ಕೊರೊನಾ ಲಾಕ್‌ ಡೌನ್‌ ಪ್ರಕ್ರಿಯೆ ಮುಂದಿಟ್ಟುಕೊಂಡು ಅವಧಿ ಮುಗಿದಿರುವ ಗ್ರಾಪಂಗೆ ಮನಬಂದಂತೆ ನಾಮನಿರ್ದೇಶನ ಮಾಡಲು ಹೊರಟಿರುವ ನಡೆ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವಂತಿದೆ. ಬಡವರ ಮತ್ತು ಸಾಮಾನ್ಯ ವರ್ಗಗಳ ಗ್ರಾಮೀಣ ಜನರಿಗೆ ಗ್ರಾಪಂಗಳಿಂದಲೆ ಸೌಲಭ್ಯ ಕಾರ್ಯಕ್ರಮಗಳು ಅನುಷ್ಠಾನ ಆಗುವುದರಿಂದ ಶೀಘ್ರವೇ ಚುನಾವಣೆಗಳ ಮೂಲಕವೇ ಗ್ರಾಪಂ ಸದಸ್ಯರ ನೇಮಕ ಮಾಡಬೇಕು. ಇಲ್ಲವೆ, ಕೋವಿಡ್  ಸಮಸ್ಯೆ ಮುಗಿಯುವರೆಗೂ ಆಡಳಿತಾಧಿಕಾರಿಗಳ ನೇಮಕವಾಗಬೇಕು. ಜನತೆಯ ತೀರ್ಪು ಪ್ರಜಾಪ್ರಭುತ್ವದಲ್ಲಿ ಮಾನ್ಯತೆ ಪಡೆಯುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.