ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಕಾಲುಬಾಯಿ ಬೇನೆ ನಿರ್ಮೂಲನಾ ಅಭಿಯಾನ


Team Udayavani, Oct 5, 2020, 6:40 PM IST

ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಕಾಲುಬಾಯಿ ಬೇನೆ ನಿರ್ಮೂಲನಾ ಅಭಿಯಾನ

ಹಾವೇರಿ: ಜಾನುವಾರುಗಳಿಗೆ ಕಾಲುಬಾಯಿ ಬೇನೆ ರೋಗ ನಿರ್ಮೂಲನೆಗಾಗಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಂಡಿರುವ, ಜಾನುವಾರುಗಳ ಕಾಲುಬಾಯಿ ಬೇನೆ ರೋಗ ನಿವಾರಕ ಲಸಿಕಾ ಕಾರ್ಯಕ್ರಮಕ್ಕೆ ಕರ್ಜಗಿ ಗ್ರಾಮದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಚಾಲನೆ ನೀಡಿದರು.

ತಾಲೂಕಿನ ಕರ್ಜಗಿಯ ಪಶು ಆಸ್ಪತ್ರೆ ಆವರಣದಲ್ಲಿ ಗೋ ಪೂಜೆ ಮಾಡಿ ಜಾನುವಾರುಗಳಿಗೆ ಲಸಿಕೆ ವಿತರಣೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕಾಲುಬಾಯಿ ಬೇನೆ ರೋಗ ವೈರಾಣುವಿನಿಂದ ಬರುವಂತಹ ಕಾಯಿಲೆಯಾಗಿದೆ. ಇದರಿಂದ ಜಾನುವಾರುಗಳಿಗೆ ಹೆಚ್ಚಿನ ಜ್ವರ ಕಾಣಿಸಿಕೊಂಡು ಕಾಲು ಮತ್ತು ಬಾಯಿಯಲ್ಲಿ ಹುಣ್ಣಾಗಿ ಜೊಲ್ಲು ಸುರಿಸುತ್ತವೆ.

ಜಾನುವಾರುಗಳಲ್ಲಿ ಹಾಲಿನ ಇಳುವರಿ ಕಡಿಮೆಯಾಗಿ ಜಾನುವಾರುಗಳ ಉತ್ಪಾದನೆ ಹಾಗೂ ಉತ್ಪಾದಕತೆ ಕಡಿಮೆಯಾಗುತ್ತದೆ ಎಂದು ತಿಳಿಸಿದರು.

ರೋಗ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ರೈತ ಬಾಂಧವರು ಲಸಿಕೆ ಹಾಕಿಸುವಂತೆ ಮನವಿ ಮಾಡಿಕೊಂಡರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ ಮಾತನಾಡಿ, ಲಸಿಕಾ ಕಾರ್ಯಕ್ರಮದ ದೈನಂದಿನ ಪ್ರಗತಿ ವರದಿಗಳನ್ನು ಆನ್‌ಲೈನ್‌ನಲ್ಲಿ ತಾಲೂಕುವಾರು ದಾಖಲಿಸಲು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಡಿಜಿಟಲ್‌ ಇಂಡಿಯಾದಡಿ ಜಿಲ್ಲೆಯ ಎಲ್ಲ ಜಾನುವಾರುಗಳಿಗೆ 12 ಸಂಖ್ಯೆ ವಿಶಿಷ್ಟ ರೀತಿಯ ಕಿವಿಯೋಲೆಗಳನ್ನು ಹಾಕುವ ಕಾರ್ಯಕ್ರಮವನ್ನು ಸಹ ಅನುಷ್ಟಾನಗೊಳಿಸಲಾಗಿತ್ತಿದೆ. ಈ ಕಿವಿಯೋಲೆ ಹಾಕಿದ ಜಾನುವಾರುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹೊಸ ತಂತ್ರಾಂಶವಾದ ಇನಾಫ್‌ ಅಳವಡಿಸಲು ಜಿಲ್ಲೆಗೆ ಒಟ್ಟು 2,46,000 ಕಿವಿಯೋಲೆಗಳು ಸರಬರಾಜಾಗಿವೆ. ಜಾನುವಾರುಗಳಿಗೆ ಕಾಲುಬಾಯಿ ಬೇನೆ ಲಸಿಕೆ ಹಾಕುವುದರ ಜೊತೆಗೆ ಬಾಕಿ ಇರುವ ಕಿವಿಯೋಲೆಗಳನ್ನು ಜಾನುವಾರುಗಳಿಗೆ ಅಳವಡಿಸಲು ಪಶುವೈದ್ಯಕೀಯ ಅಧಿ ಕಾರಿ ಹಾಗೂ ಸಿಬ್ಬಂದಿ ಶ್ರಮಿಸಬೇಕು ಎಂದರು.

ರೈತ ಬಾಂಧವರು ಆಸಕ್ತಿಯಿಂದ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಗೂ ಕಿವಿಯೋಲೆ ಹಾಕಿಸಲು ಮುಂದಾಗಬೇಕೆಂದು ಮನವಿ ಮಾಡಿದರು. ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ರಾಜು ಕೂಲೇರ ಮಾತನಾಡಿ, ಜಿಲ್ಲಾದ್ಯಂತ ಅ.2ರಿಂದ ನವೆಂಬರ್‌ 15ರವರೆಗೆ 45 ದಿನಗಳ ಕಾಲ ಮೊದಲನೇ ಸುತ್ತಿನ ಜಾನುವಾರುಗಳಿಗೆ ಕಾಲುಬಾಯಿ ಬೇನೆ ಲಸಿಕೆ ಅಭಿಯಾನ ಪಶುವೈದ್ಯಕೀಯ ಇಲಾಖೆ ನೇತೃತ್ವದಲ್ಲಿ ನಡೆಯಲಿದೆ ಎಂದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.