ಮಹಾತ್ಮಗಾಂಧಿ ನರೇಗಾ ಯೋಜನೆ; ಜಿಲ್ಲಾ ಪಂಚಾಯತ್‌, ಹಾವೇರಿ


Team Udayavani, Aug 31, 2022, 9:00 AM IST

thumb news advertise haveri

ಮಿಷನ್‌ ಅಮೃತ ಸರೋವರ ಕಾರ್ಯಕ್ರಮ
ಜಿಲ್ಲೆಯ 1 ಎಕರೆಗಿಂತ ಹೆಚ್ಚಿನ ವಿಸ್ತೀರ್ಣ, ಕನಿಷ್ಠ 10,000 ಕ್ಯೂಬಿಕ್‌ ಮೀಟರ್‌ ಸಾರ್ಮಥ್ಯ ಹೊಂದಿರುವ 75 ಕೆರೆಗಳನ್ನು ಗುರುತಿಸಿ ಅವುಗಳನ್ನು ಆಗಸ್ಟ್‌- 2023ರೊಳಗೆ ಸಂಪೂರ್ಣವಾಗಿ ಅಭಿವೃದ್ಧಿ ಪಡಿಸುವ ಗುರಿ ಹೊಂದಲಾಗಿದೆ. ಈಗಾಗಲೇ 86 ಕೆರೆಗಳನ್ನು ಆಯ್ಕೆ ಮಾಡಿ ಅನುಷ್ಠಾನಕ್ಕೆ ಸಿದ್ಧತೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಈಗಾಗಲೇ ಹಲವಾರು ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದ್ದು, ರಾಜ್ಯದಲ್ಲಿಯೇ ಮಾದರಿ ಕೆರೆಗಳಾಗಿ ಹೊರ ಹೊಮ್ಮಿವೆ. 2022-23ನೇ ಸಾಲಿಗೆ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಒಂದರಂತೆ 223 ಕೆರೆಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ.

ನರ್ಸರಿ ನಿರ್ವಹಣೆ, ಸಸಿಗಳ ಬೆಳೆಸುವುದು
ಗ್ರಾಮೀಣ ಭಾಗದ ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘಗಳಿಗೆ ನರೇಗಾ ಯೋಜನೆಯಡಿ ನರ್ಸರಿ ನಿರ್ವಹಣೆ ಮತ್ತು ನರ್ಸರಿಗಳಲ್ಲಿ ಸಸಿಗಳನ್ನು ಬೆಳೆಸಿ ಅವುಗಳನ್ನು ಸರ್ಕಾರಿ ಕಾರ್ಯಕ್ರಮಗಳಿಗೆ ಅಥವಾ ಖಾಸಗಿಯಾಗಿ ಸಸಿಗಳನ್ನು ಮಾರಾಟ ಮಾಡಿ ಬಂದ ಲಾಭವನ್ನು ಮಹಿಳಾ ಸಂಘಗಳು ಪಡೆಯಬಹುದು. ಗ್ರಾಮೀಣ ಭಾಗದ ಮಹಿಳಾ ಒಕ್ಕೂಟಗಳಿಗೆ ಈಗಾಗಲೇ ತರಬೇತಿ ನೀಡಿ ನರ್ಸರಿಗಳಲ್ಲಿ ಸಸಿ ಬೆಳೆಸುವ ಕಾರ್ಯ ನಡೆದಿದೆ. ಜಿಲ್ಲೆಯ 8 ತಾಲೂಕುಗಳಲ್ಲಿ ಪ್ರತಿ ತಾಲೂಕಿಗೆ 2 ರಂತೆ ಒಟ್ಟಾರೆ 16 ಕಾಮಗಾರಿಗಳನ್ನು ಆರಂಭಿಸಲಾಗಿದೆ.

ಜಲಶಕ್ತಿ ಅಭಿಯಾನ
ಜಲಶಕ್ತಿ ಅಭಿಯಾನದಡಿ ಜಿಲ್ಲೆಯಲ್ಲಿ ನೀರು ಮತ್ತು ಮಣ್ಣು ಸಂರಕ್ಷಣೆ ಕಾಮಗಾರಿಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಜಲಸಂರಕ್ಷಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರೆ ಜಲಮೂಲಗಳ ಪುನಶ್ಚೇತನಗೊಳಿಸುವುದು, ನೀರಿನ ಪುನರ್‌ ಬಳಕೆ ಮತ್ತು ರೀಚಾರ್ಜ್‌ ಸಂರಚನೆ, ಜಲಾನಯನ ಅಭಿವೃದ್ಧಿ-ದಿಬ್ಬದಿಂದ ಕಣಿವೆ (Ridge to End Valley) ಇನ್‌ಟೆನ್ಸಿವ್‌ ಅರಣ್ಯೀಕರಣ ಆದ್ಯತೆ ನೀಡುವ ಮೂಲಕ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ನೀರು ಸಂರಕ್ಷಣಾ ಕಾಮಗಾರಿಗಳು ಸಮಗ್ರ ಅಭಿವೃದ್ಧಿ ಪಡಿಸಲಾಗುತ್ತಿದೆ.

ಶಾಲೆಗಳ ಸಮಗ್ರ ಅಭಿವೃದ್ಧಿ
ಮಹಾತ್ಮಗಾಂಧಿ  ನರೇಗಾಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ223 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳನ್ನು ಸಮಗ್ರಅಭಿವೃದ್ಧಿ ಪಡಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಸ್ಪರ್ಶ, ವಾಲಿಬಾಲ್‌, ಶೆಟಲ್‌ ಬ್ಯಾಡ್ಮಿಂಟನ್‌, ಬಾಸ್ಕೆಟ್‌ ಬಾಲ್‌ ಕೋರ್ಟ್‌ಗಳ ನಿರ್ಮಾಣ, ದೇಶಿ ಆಟಗಳಾದ ಖೋಖೋ, ಕಬ್ಬಡ್ಡಿ ಅಂಕಣಗಳನ್ನು ಸಹ ನಿರ್ಮಿಸಲಾಗುತ್ತಿದೆ. ಅಲ್ಲದೇ ಶೌಚಾಲಯ, ಅಡುಗೆ ಕೋಣೆ, ಭೋಜನಾಲಯ, ಮಳೆ ನೀರು ಕೊಯ್ಲು ನಿರ್ಮಾಣ ಇಡೀ ರಾಜ್ಯದಲ್ಲೇ ಮಾದರಿಯಾಗಲಿದೆ.

ನಿರ್ಮಲ ಹಾವೇರಿ ಕಾರ್ಯಕ್ರಮ
ನಿರ್ಮಲ ಹಾವೇರಿ ಕಾರ್ಯಕ್ರಮದಡಿ ಹಾವೇರಿ ಜಿಲ್ಲೆಯ 223 ಗ್ರಾಮ ಪಂಚಾಯಿತಿಗಳಲ್ಲಿ 1 ಕಿಮೀ ಚರಂಡಿ ನಿರ್ಮಿಸಲಾಗುತ್ತಿದ್ದು, ಈಗಾಗಲೇ 240.04 ಕಿಮೀ. ನಿರ್ಮಾಣಗೊಂಡಿದೆ. ಎರಡನೇ ಹಂತದ 1ಕಿಮೀ ಚರಂಡಿ ನಿರ್ಮಾಣ ಈಗಾಗಲೇ ಆರಂಭವಾಗಿದ್ದು, ಮುಕ್ತಾಯ ಹಂತಕ್ಕೆ ತುಲುಪಿದೆ.

ನರೇಗಾ ಯೋಜನೆಯಡಿ..
– ನರೇಗಾ ಯೋಜನೆಯಡಿ ಮಹಿಳೆಯರಿಗೆ ವಿಶೇಷ ಸೌಲಭ್ಯ ಒದಗಿಸಲಾಗುತ್ತಿದೆ.ಕಾಮಗಾರಿಗಳ ಸ್ಥಳದಲ್ಲಿ ಶಿಶುಪಾಲನೆ ಕೇಂದ್ರ, ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣ, ಮಹಿಳಾ ಸ್ನೇಹಿ ಕಾಯಕಬಂಧು ನೇಮಕ. ಪ್ರತಿ ಗ್ರಾಮ ಪಂಚಾಯಿತಿಗೆ ಮಹಿಳಾ ಕಾಯಕ ಮಿತ್ರರ ಆಯ್ಕೆ (ಮೊದಲ ಹಂತದಲ್ಲಿ ಹಾವೇರಿ ಜಿಲ್ಲೆಗೆ-79 ಅನುಮೋದನೆ)
-ಗ್ರಾಮೀಣ ಭಾಗದ ಮಹಿಳೆಯರು ಕನಿಷ್ಟ ಶೇ.50 ಭಾಗವಹಿಸಲು ಮಹಿಳಾ ಕಾಯಕೋತ್ಸವ ಮೂಲಕ ಮಹಿಳೆಯರನ್ನು ಕೂಲಿ ಕೆಲಸಕ್ಕೆ ತೊಡಗುವಂತೆ ಮಾಡಲಾಗುತ್ತಿದೆ. ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಹೆಚ್ಚು ಆದ್ಯತೆ ನೀಡುವುದರೊಂದಿಗೆ ಪುರುಷರಿಗೆ ಸಮಾನ ಕೂಲಿ ಒದಗಿಸಲಾಗುತ್ತಿದೆ.
-ತೋಟಗಾರಿಕೆ ಬೆಳೆಗಳನ್ನು 19 ಕ್ಲಸ್ಟರ್‌ ಮಾದರಿಯಲ್ಲಿ 2500 ಎಕರೆಗಳ ಪ್ರದೇಶದಲ್ಲಿ ವಿಸ್ತರಣೆ ಕಾಮಗಾರಿ ಕೈಗೊಂಡು 1950 ಫಲಾನುಭವಿಗಳಿಗೆ ವೈಯಕ್ತಿಕ ಕಾಮಗಾರಿ ಅನುಷ್ಠಾನಗೊಳಿಸಲಾಗಿದೆ.

ದುಡಿಯುವ ಕೈಗಳಿಗೆ ಕೆಲಸ..

ಮಹಾತ್ಮಗಾಂಧಿ ನರೇಗಾ ಯೋಜನೆ ಯಡಿ ಗ್ರಾಮೀಣ ಭಾಗದ ಜನರಿಗೆ 100 ದಿನಗಳ ಉದ್ಯೋಗ ಖಾತರಿ.

ಉದ್ಯೋಗ ಚೀಟಿಯನ್ನು ನಿಮ್ಮ ಗ್ರಾಮದಲ್ಲಿಯೇ ಪಡೆಯಿರಿ.

ಹೆಣ್ಣು ಮತ್ತು ಗಂಡಿಗೆ ಸಮಾನ ಕೂಲಿ ನೀಡಲಾಗುವುದು.

ನೀರು ಮತ್ತು ಮಣ್ಣು ಸಂರಕ್ಷಣೆಗೆ ಹೆಚ್ಚು ಆದ್ಯತೆ ನೀಡಲಾಗುವುದು.

ವಲಸೆ ತಡೆಗಾಗಿ ನರೇಗಾ ಯೋಜನೆಯಡಿ ಗ್ರಾಮಸ್ಥರಿಗೆ ವಾಸಸ್ಥಳದಲ್ಲಿಯೇ ಅಕುಶಲ ಉದ್ಯೋಗ ನೀಡಲಾಗುವುದು.

ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಕೆಲಸದಲ್ಲಿ ಶೇ.50 ರಿಯಾಯತಿ ನೀಡಲಾಗುವುದು.

2021-22ನೇ ಸಾಲಿನಲ್ಲಿ ಜಲಶಕ್ತಿ ಅಭಿಯಾನದಡಿ, ಹಾವೇರಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ 13692 ಕಾಮಗಾರಿ ಕೈಗೊಂಡಿದ್ದು, 10,154 ಕಾಮಗಾರಿಗಳು ಮುಕ್ತಾಯಗೊಂಡಿದ್ದು, 3538 ಕಾಮಗಾರಿಗಳು ಪ್ರಗತಿಯಲ್ಲಿವೆ.

1.ನೀರು ಸಂರಕ್ಷಣೆ ಮತ್ತು ಮಳೆ ನೀರು ಕೊಯ್ಲು ಕಾಮಗಾರಿಗಳು ಗುರಿ-1310, ಸಾಧನೆ-1931

2.ಸಾಂಪ್ರದಾಯಿಕ ಮತ್ತು ಇತರೆ ಜಲ ಮೂಲಗಳು/ತೊಟ್ಟಿಗಳ ನವೀಕರಣ ಕಾಮಗಾರಿಗಳು ಗುರಿ- 324, ಸಾಧನೆ-472

3. ಮರುಪೂರಣ ಘಟಕಗಳ ಕಾಮಗಾರಿಗಳು ಗುರಿ-5610, ಸಾಧನೆ -5138

4. ಜಲಾನಯನ ಅಭಿವೃದ್ಧಿ ಕಾಮಗಾರಿಗಳು ಗುರಿ-2593, ಸಾಧನೆ-2847

5.ಅರಣ್ಯೀಕರಣ ಕಾಮಗಾರಿಗಳು ಗುರಿ-3855, ಸಾಧನೆ -3602

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.