ಕುಸ್ತಿ ವ್ಯಾಪಾರಕ್ಕೆ ಇಟ್ಟರೆ ನೈತಿಕ ಅಧಃಪತನ; ನಿರಂಜನಾನಂದಪುರಿ ಸ್ವಾಮೀಜಿ

ಅಂದಾಜು 1.5 ಕೋಟಿ ರೂ. ವೆಚ್ಚದಲ್ಲಿ ಪಾಯಿಂಟ್‌ ಕುಸ್ತಿ ಸ್ಪರ್ಧೆ ಏರ್ಪಡಿಸಲಾಗಿದೆ.

Team Udayavani, Feb 15, 2022, 6:28 PM IST

ಕುಸ್ತಿ ವ್ಯಾಪಾರಕ್ಕೆ ಇಟ್ಟರೆ ನೈತಿಕ ಅಧಃಪತನ; ನಿರಂಜನಾನಂದಪುರಿ ಸ್ವಾಮೀಜಿ

ರಾಣಿಬೆನ್ನೂರ: ವ್ಯಕ್ತಿಯ ಶಾರೀರಿಕ ಬೆಳವಣಿಗೆಗೆ ಹಾಗೂ ಮಾನಸಿಕವಾಗಿ ಸದಾ ಚೈತನ್ಯಶೀಲವನ್ನಾಗಿ ಮಾಡುವ ಅಗಾಧವಾದ ದಿವ್ಯಶಕ್ತಿ ಹೊಂದಿರುವ ಕುಸ್ತಿಯನ್ನು ಕ್ರೀಡಾಪಟುಗಳು ಎಂದೂ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡದೇ, ವ್ಯಾಪಾರೀಕರಣಕ್ಕೆ ಇಳಿಯದೇ ನಿಯತ್ತಿನಿಂದ ಮತ್ತು ಪ್ರಾಮಾಣಿಕವಾಗಿ ಸ್ಪರ್ಧೆಗಿಳಿಯಬೇಕು ಎಂದು ಕಾಗಿನೆಲೆ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಸೋಮವಾರ ಇಲ್ಲಿನ ಕುರುಬಗೇರಿಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಹತ್ತಿರವಿರುವ ಪುರಾತನ ಕಾಲದ ಗರಡಿಮನೆ ಜೀರ್ಣೋದ್ಧಾರ ಹಾಗೂ ಶ್ರೀ ಬೀರೇಶ್ವರ ಗರಡಿಮನೆ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕುಸ್ತಿಯನ್ನು ವ್ಯಾಪಾರಕ್ಕೆ ಇಟ್ಟರೆ ಆತನ ಕುಸ್ತಿಯ ನೈತಿಕತೆ ಅಧಃಪತನವಾಗುವುದರ ಮೂಲಕ ಆತನ ವ್ಯಕ್ತಿತ್ವ ಹಾಳಾಗಿ ಅಸ್ತಿತ್ವವನ್ನೇ ಕಳೆದುಕೊಂಡು ಜನಮಾನಸದಲ್ಲಿ ಅವಮಾನಕ್ಕೀಡಾಗಿ ತ್ರಿಶಂಕು ಸ್ಥಿತಿಗೆ ಹೋಗುತ್ತಾನೆ ಎಂದು ಶ್ರೀಗಳು ನುಡಿದರು.

ಕುಸ್ತಿಗೆ ಇನ್ನೊಂದು ಹೆಸರೇ ರಾಣಿಬೆನ್ನೂರ ಆಗಿದೆ. ಅದರಲ್ಲೂ ಕುರುಬಗೇರಿ ಕುಸ್ತಿಗೆ ಕಳಸವಿದ್ದಂತೆ. ಇಲ್ಲಿಯ ಅನೇಕ ಕುಸ್ತಿಪಟುಗಳು, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಹೆಸರು ಮಾಡಿ ನಗರಕ್ಕೆ ಕೀರ್ತಿ ತಂದಿದ್ದಾರೆ. ಅವರುಗಳ ಸಾಧನೆಯಿಂದಲೇ ಇಂದು ದೇಶಾದ್ಯಂತ ಕುಸ್ತಿಗೆ ರಾಣಿಬೆನ್ನೂರ ಪ್ರಸಿದ್ಧಿ ಪಡೆದಿದೆ. ಮೈಸೂರಿನ ದಸರಾದಲ್ಲಿಯೂ ಅತೀ ಹೆಚ್ಚು ಬಾರಿ ಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ಅನೇಕ ಪುರಾವೆಗಳು ಈಗಲೂ ಜೀವಂತವಾಗಿ ಉಳಿದಿವೆ ಎಂದರು.

ಮನುಷ್ಯನ ವ್ಯಕ್ತಿತ್ವ ಖುಲಾಯಿಸಲು ಈ ಕುಸ್ತಿ ಅನೇಕ ರೀತಿಯ ಅನುಕೂಲತೆಗಳನ್ನು ಮಾಡುತ್ತಿದೆ. ಇಂತಹ ಕುಸ್ತಿಯು ಇಂದು ಯುವಕರು ಮೊಬೈಲಿನ ಅತಿಯಾದ ಬಳಕೆಯಿಂದ ಕ್ಷೀಣಿಸುತ್ತಿದೆ. ಇದನ್ನು ಉಳಿಸಿ ಬೆಳೆಸಲು ಕನಕ ಗುರುಪೀಠ ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಈ ದಿಸೆಯಲ್ಲಿ ಮುಂದಿನ ವರ್ಷ ಹರಿಹರ ತಾಲೂಕಿನಲ್ಲಿ ಅಂದಾಜು 1.5 ಕೋಟಿ ರೂ. ವೆಚ್ಚದಲ್ಲಿ ಪಾಯಿಂಟ್‌ ಕುಸ್ತಿ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಹಿಂದೆ ಡಾವಣಗೇರಿಯಲ್ಲಿ ಕುಸ್ತಿ ಸ್ಪರ್ಧೆ ಏರ್ಪಡಿಸಿ ಸಹಕರಿಸಿದೆ ಎಂದು ಶ್ರೀಗಳು ಹೇಳಿದರು.

ಹಾಲಿ-ಮಾಜಿ ಕುಸ್ತಿಪಟುಗಳನ್ನು, ಮುಖಂಡರನ್ನು ಶ್ರೀಗಳು ಹಾಗೂ ಆಡಳಿತ ಮಂಡಳಿಯವರು ಸನ್ಮಾನಿಸಿ ಗೌರವಿಸಿದರು. ಭರಮಪ್ಪ ಪೂಜಾರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಸವರಾಜ ಶಿವಣ್ಣನವರ, ಪ್ರಾ ಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಸದಸ್ಯರಾದ ಮಲ್ಲಣ್ಣ ಅಂಗಡಿ, ನಿಂಗರಾಜ ಕೋಡಿಹಳ್ಳಿ, ಹುಚ್ಚಪ್ಪ ಮೇಡ್ಲೆರಿ, ಸಿದ್ದಪ್ಪ ಬಾಗಲವರ, ರಮೇಶ ಕರಡೆಣ್ಣನವರ, ಪುಟ್ಟಪ್ಪ ಮರಿಯಮ್ಮನವರ, ನಾಗರಾಜ, ಮುಖಂಡರಾದ ಕೃಷ್ಣಪ್ಪ ಕಂಬಳಿ, ಮೃತ್ಯುಂಜಯ ಗುದಿಗೇರ, ಆನಂದ ಹುಲಬನ್ನಿ, ಹನುಮಂತಪ್ಪ ಮುಳಗುಂದ, ಸೋಮು ಕುರವತ್ತಿ, ಆಂಜನೇಯ ಹುಲಿಹಳ್ಳಿ, ಪರಸಪ್ಪ ಹುಲ್ಲತ್ತಿ, ಬಸವರಾಜ ಕಂಬಳಿ, ಶಿವಮೂರ್ತಿ ಚಳಗೇರಿ, ಷಣ್ಮುಖಪ್ಪ ಕಂಬಳಿ, ವಿನೋಧ, ಗುಡ್ಡಪ್ಪ ಚಿನ್ನಿಕಟ್ಟಿ, ಬಸವರಾಜ ಮುಳಗುಂದ, ನಾಗರಾಜ ಬಾಗಲವರ, ರಾಜು ಮೈಲಾರ, ಕಿರಣ ಗುಳೇದ ಮೊದಲಾದವರಿದ್ದರು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.