ಅಧಿಕಾರವಿಲ್ಲದೇ ಪುರಸಭೆ ಸದಸ್ಯರ ಪರದಾಟ!

10 ತಿಂಗಳು ಕಳೆದರೂ ಇನ್ನೂ ಸಿಕ್ಕಿಲ್ಲ ಅಧಿಕಾರ ; ಅತಂತ್ರ ಸ್ಥಿತಿಯಲ್ಲಿ ಬಂಕಾಪುರ ಪುರಸಭೆ ಸದಸ್ಯರು

Team Udayavani, Sep 29, 2022, 4:09 PM IST

14

ಬಂಕಾಪುರ: ಪಟ್ಟಣದ ಪುರಸಭೆ ಚುನಾವಣೆ ನಡೆದು ಒಂಬತ್ತು ತಿಂಗಳು ಗತಿಸಿದರೂ 23 ವಾರ್ಡ್‌ಗಳಿಗೆ ವಿವಿಧ ಪಕ್ಷಗಳ ಚಿಹ್ನೆಯಡಿ ಆಯ್ಕೆಯಾದ ಸದಸ್ಯರು ಅಧಿಕಾರ ಸಿಗದೇ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ, ಸಾರ್ವಜನಿಕರ ಸಮಸ್ಯೆಗಳನ್ನು ಕೇಳುವವರೇ ಇಲ್ಲದಂತಾಗಿದೆ ಎಂಬ ಕೂಗು ಕೇಳಿಬರುತ್ತಿದೆ.

ಈ ಹಿಂದೆ ಪುರಸಭೆ ಅಧಿಕಾರದ ಅವಧಿ ಮುಗಿದ ಮೂರು ವರ್ಷಗಳ ನಂತರ ಸರ್ಕಾರ ಕಳೆದ ವರ್ಷ ನ.28 ರಂದು ಚುನಾವಣೆಗೆ ನೋಟಿಫಿಕೇಶನ್‌ ಹೊರಡಿಸಿತ್ತು. ಡಿ. 8 ರಂದು ನೀತಿ ಸಂಹಿತೆ ಜಾರಿ ಮಾಡಿ ಡಿ.16 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಪ್ರಕಟಿಸಿತ್ತು. ಡಿ.7 ರಂದು ಚುನಾವಣೆ ನಡೆದು, ಡಿ.30 ರಂದು ಫಲಿತಾಂಶ ಪ್ರಕಟವಾಗಿ, ಕಾಂಗ್ರೆಸ್‌ 14, ಬಿಜೆಪಿ 7 ಹಾಗೂ 2 ಪಕ್ಷೇತರರು ಆಯ್ಕೆಯಾಗಿದ್ದರು.

ಸಿಎಂ ಬಸವರಾಜ ಬೊಮ್ಮಾಯಿ ಅವರ ಸ್ವ ಕ್ಷೇತ್ರದ ಭಾಗವಾಗಿರುವ ಬಂಕಾಪುರ ಪುರಸಭೆ ಚುನಾವಣೆಯಲ್ಲಿ ಪೈಪೋಟಿ ಚುನಾವಣೆ ನಡೆಸಿದ ಬಿಜೆಪಿ ಮುಖಂಡರು, ಸೂಕ್ತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್‌ ನೀಡುವಲ್ಲಿ ವಿಫಲರಾದ ಕಾರಣ ಕಳೆದ ಬಾರಿಗಿಂತಲೂ ಎರಡು ಸ್ಥಾನ ಕಡಿಮೆ ಪಡೆದು ಕೇವಲ 7 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಪಟ್ಟಣದ 23 ವಾರ್ಡ್‌ಗಳಲ್ಲಿ ಹತ್ತು ಹಲವಾರು ವಿವಿಧ ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸುವ ದೃಷ್ಟಿಯಿಂದ ಸಾರ್ವಜನಿಕರು ಅಭ್ಯರ್ಥಿಗಳನ್ನು ಚುನಾಯಿಸಿ ಕಳುಹಿಸಿದ್ದಾರೆ. ಆದರೆ, ಇದುವರೆಗೂ ಆಯ್ಕೆಯಾದ ಸದಸ್ಯರಿಗೆ ಅಧಿಕಾರ ನೀಡದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರ ಈಗಾಗಲೇ ಚುನಾವಣೆ ನಡೆದ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿ ಸುತ್ತೋಲೆ ಹೊರಡಿಸಿದೆ. ಆದರೆ, ಚುನಾವಣೆಯಲ್ಲಿ ಜನರಿಂದ ಆಯ್ಕೆಯಾದ ಸದಸ್ಯರಿಗೆ ಸದಸ್ಯತ್ವ ನೀಡದೇ ದಿನ ಕಳೆಯುತ್ತಿರುವುದು ಯಾವ ಉದ್ದೇಶಕ್ಕಾಗಿ ಎಂಬುದು ಸಾರ್ವಜನಿಕರಿಗೆ ಯಕ್ಷ ಪ್ರಶ್ನೆಯಾಗಿದೆ. ಆಯ್ಕೆಯಾದ ಸದಸ್ಯರು ತಮ್ಮ, ತಮ್ಮ ವಾರ್ಡ್‌ಗಳ ಸಮಸ್ಯೆಗಳನ್ನು ಬಗೆಹರಿಸಲಾಗದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅಧಿಕಾರ ಇಂದು ಸಿಗಬಹುದು, ನಾಳೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಆಯ್ಕೆಯಾದ ಸದಸ್ಯರು ಕಾಲ ಕಳೆಯುತ್ತಿದ್ದಾರೆ. ಸರ್ಕಾರ ನೀಡಿದ ಕೋಟ್ಯಂತರ ರೂ. ಅನುದಾನವನ್ನು ನಮ್ಮ ವಾರ್ಡ್‌ನ ಸಮಸ್ಯೆಗಳಿಗೆ ಸದ್ಬ ಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸದಸ್ಯರು ಅಸ ಹಾಯಕತೆಯನ್ನು ಪತ್ರಿಕೆ ಎದುರು ತೋಡಿಕೊಂಡಿದ್ದಾರೆ.

ಸರ್ಕಾರ ಈಗಾಗಲೇ ಬಂಕಾಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‌ಸಿ ಮಿಸಲಾತಿ ಪ್ರಕಟಿಸಿದೆ. ಆದರೆ, ಇದುವರೆಗೂ ಆಯ್ಕೆಯಾದ ಸದಸ್ಯರಿಗೆ ಅಧಿಕಾರ ನಿಡದೇ ಇರುವುದನ್ನು ಖಂಡಿಸಿ ಸೆ.29ರ ಬೆಳಿಗ್ಗೆ 10ಕ್ಕೆ ಬಸ್‌ ನಿಲ್ದಾಣದಿಂದ ಪುರಸಭೆ ವರೆಗೆ ಮೌನ ಕಾಲ್ನಡಿಗೆ ಪ್ರತಿಭಟನೆ ನಡೆಸಲಾಗುವುದು. -ಎ.ಕೆ.ಆದವಾನಿ ಮಠ, ಕಸಾಪ ತಾಲೂಕು ಅಧ್ಯಕ್ಷರು

ನಮ್ಮ ಪುರಸಭೆಯೊಂದಿಗೆ ಚುನಾವಣೆ ನಡೆದ ಕೆಲವು ಊರುಗಳಲ್ಲಿ ಅಧಿಕಾರ ವಿಕೇಂದ್ರೀಕರಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದರೆ, ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ ಎಂದು ಉತ್ತರಿಸುತ್ತಾರೆ. ಹಾಗಾದರೆ, ಚುನಾವಣೆ ನಡೆಸಿದ್ಯಾಕೆ?, ಪ್ರಜಾಪ್ರಭುತ್ವದಲ್ಲಿ ಜನತಂತ್ರ ವ್ಯವಸ್ಥೆ ಇದೇನಾ? –ಆಂಜನೇಯ ಗುಡಗೇರಿ, ಪುರಸಭೆ ಸದಸ್ಯ, ಬಂಕಾಪುರ

ಮತದಾರ ಪ್ರಭುಗಳಿಗೆ ಪ್ರಾಮಾಣಿಕ ಸೇವೆ ಮಾಡುವ ಭರವಸೆ ನೀಡಿ ಆಯ್ಕೆಯಾಗಿ ಬಂದಿ ದ್ದೇವೆ. ಸರ್ಕಾರ ಸಾಕಷ್ಟು ಅನುದಾನ ನೀಡಿದೆ ನಿಜ. ಆದರೆ, ಅದನ್ನು ನಮ್ಮ ವಾರ್ಡ್‌ನ ಕೆಲಸಕ್ಕೆ ಸದ್ಬಳಕೆ ಮಾಡಿಕೊಳ್ಳಲಾಗುತ್ತಿಲ್ಲ. ಆದ್ದರಿಂದ, ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧ್ಯಕ್ಷ, ಉಪಾ ಧ್ಯಕ್ಷ ಸ್ಥಾನ ಆಯ್ಕೆ ಮಾಡಲು ಸದಸ್ಯರಿಗೆ ಅವಕಾಶ ಕಲ್ಪಿಸಿಕೊಡಬೇಕು. –ಮಹಮ್ಮದ ತಹಮಿದ ಖಾಜಿ ಪುರಸಭೆ ಸದಸ್ಯ, ಬಂಕಾಪುರ

-ಸದಾಶಿವ ಹಿರೇಮಠ

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.