ಮೈಲಾರ ಶುಗರ್ ನಿಂದ ರೈತರಿಗೆ ಅನ್ಯಾಯ


Team Udayavani, Jan 1, 2020, 3:48 PM IST

hv-tdy-2

ರಾಣಿಬೆನ್ನೂರ: ಕಬ್ಬು ನಾಟಿ ಮಾಡುವ ಸಮಯದಲ್ಲಿ ರೈತರನ್ನು ಪ್ರೇರೇಪಿಸಿ ಬೆಳೆದ ಕಬ್ಬನ್ನು ತೆಗೆದುಕೊಳ್ಳುವ ಪರವಾನಗಿ ನೀಡದೆ ಸತಾಯಿಸುತ್ತಿರುವ ಮೈಲಾರದ ದಿ ಮೈಲಾರ ಶುಗರ್ ಕಂಪನಿಯವರು ಆಮೇಗತಿಯಲ್ಲಿ ಪರವಾನಗಿ ನೀಡುವ ಮೂಲಕ ರೈತರನ್ನು ಶೋಷಣೆ ಮಾಡುತ್ತಿದೆ ಎಂದು ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಆರೋಪಿಸಿದರು.

ಮಂಗಳವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬು ನಾಟಿ ಮಾಡುವಾಗ 10 ತಿಂಗಳಿಗೆ ಕಟಾವು ಮಾಡಲು ಪರವಾನಗಿ ನೀಡುತ್ತೇವೆಂದು ಒಪ್ಪಂದ ಮಾಡಿಕೊಂಡಿರುವ ಕಂಪನಿಯವರು, 15 ತಿಂಗಳು ಗತಿಸಿದರೂ ಇನ್ನು ಪರವಾನಗಿ ನೀಡದೇ ವಿಳಂಬ ನೀತಿಯನ್ನು ಅನುಸರಿಸುತ್ತಿವೆ. ಈ ಮೂಲಕ ಕಬ್ಬು ಒಣಗಿ ತೂಕ ಕಡಿಮೆಯಾಗುವಂತೆ ಮಾಡುವ ಮೂಲಕ ತಾಲೂಕಿನ ಅನೇಕ ಗ್ರಾಮದ ರೈತರಿಗೆ ಮೋಸ ಎಸಗುತ್ತಿದ್ದಾರೆ ಎಂದು ದೂರಿದರು.

ಸಮಯಕ್ಕೆ ಸರಿಯಾಗಿ ಕಬ್ಬು ಕಟಾವು ಮಾಡಿ ಸಕ್ಕರೆ ಕಂಪನಿಗೆ ನೀಡಿದಲ್ಲಿ ಪ್ರತೀ ಎಕರೆಗೆ 80 ಟನ್‌ ಬರುವ ಅಂದಾಜು ರೈತರಲ್ಲಿ ಇರುತ್ತಿದ್ದು, ಪ್ರಸ್ತುತ ಅವರ ವಿಳಂಬ ನೀತಿಯಿಂದಾಗಿ 15 ತಿಂಗಳ ನಂತರ ಕಟಾವು ಆದಲ್ಲಿ ಪ್ರತಿ ಎಕರೆಗೆ 30 ರಿಂದ 40 ಟನ್‌ ಬರುತ್ತದೆ. ಇದರಿಂದ ರೈತರ ಲಾಭ ಕುಸಿತಗೊಂಡು ಸಾಲದ ಸುಳಿಯಲ್ಲಿ ಸಿಲುಕುವಂತಾಗುತ್ತಿದೆ ಎಂದರು. ಒಂದೆಡೆ ಪ್ರಕೃತಿಯ ವಿಕೋಪದಿಂದ ರೈತರು ನಷ್ಟ ಅನುಭವಿಸಿದರೆ ಇನ್ನು ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆಯೂ ಸಿಗದೇ ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ನೀತಿಯಿಂದ ಮತ್ತು ಇಂತಹ ಸಕ್ಕರೆ ಕಾರ್ಖಾನೆಗಳು ಸಹ ರೈತರಿಗೆ ಅನ್ಯಾಯ ಮಾಡುವುರಿಂದ ರೈತರ ಕಷ್ಟ ತೊಟ್ಟಿಲಲ್ಲಿ ಅಳುವ ಕೂಸಿನಂತಾಗಿದೆ. ಕೂಸು ಏಕೆ ಅಳುತ್ತಿದೆ ಎಂದು ತಾಯಿ ಅರಿಯದೇ ತೂಗುತ್ತಿರುವುದು ಮತ್ತು ತಾಯಿಗೆ ತೊಟ್ಟಿಲಲ್ಲಿ ಕಡಿಯುವ ತಗಣಿಯ ವಿಚಾರವನ್ನು ತಿಳಿಸಲಾರದೇ ತಾಯಿ ಮತ್ತು ಮಗುವಿನ ಮಧ್ಯ ಕೂಸಿನ ರೋಧನೆಯಂತಾಗಿದೆ ರೈತರ ಬದುಕು ಎಂದು ವಿಷಾಧ ವ್ಯಕ್ತ ಪಡಿಸಿದರು.

ದಿ ಮೈಲಾರ ಶುಗರ್ ಕಂಪನಿಯವರು ತಾಲೂಕಿನ ಎಲ್ಲ ಗ್ರಾಮಗಳ ರೈತರ ಕಬ್ಬುಗಳನ್ನು ಶರವೇಗದ ಗತಿಯಲ್ಲಿ ಕಟಾವು ಮಾಡಲು ಜ.3ರ ಒಳಗೆ ಕಟಾವಿಗೆ ಪರವಾನಗಿ ನೀಡದಿದ್ದಲ್ಲಿ ಜ. 4 ರಂದು ಶುಗರ್ ಕಂಪನಿಯ ಮುಂಭಾಗದಲ್ಲಿ ಅಮರಣ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇಂತಹ ಸಂದರ್ಭಕ್ಕೆ ಅವಕಾಶ ನೀಡದಂತೆ ಹಾವೇರಿ ಜಿಲ್ಲಾಧಿ ಕಾರಿಗಳು ಈ ಸಮಯದೊಳಗೆ ಮಧ್ಯ ಪ್ರವೇಶಿಸಿ ಕಂಪನಿಯವರೊಂದಿಗೆ ಮಾತುಕತೆ ನಡೆಸಬೇಕು. ರೈತರ ಆತ್ಮಹತ್ಯೆ ತಡೆಗೆ ಹಾಗೂ ಅವರ ಸಂಕಷ್ಟಕ್ಕೆ ನೆರವಾಗಬೇಕೆಂದು ರವೀಂದ್ರಗೌಡ ಪಾಟೀಲ ಮನವಿ ಮಾಡಿದರು.

ಚಂದ್ರಣ್ಣ ಬೇಡರ, ಹರಿಹರಗೌಡ ಪಾಟೀಲ, ಬಸವರಡ್ಡಿ ರಡ್ಡೇರ, ಮಾರುತಿ ಕುದರಿಹಾಳ, ಹನುಮಂತಪ್ಪ ಹರನಗಿರಿ, ಯಲ್ಲಪ್ಪ ಬೆಳವಿಗಿ, ಬಾಬು ಕುಪ್ಪೇಲೂರ, ಹನುಮಂತಪ್ಪ ಚಪ್ಪರದ, ಚನ್ನಬಸಪ್ಪ ಗುಗ್ಗರಿ, ಮಂಜಪ್ಪ ಆನ್ವೇರಿ ಸೇರಿದಂತೆ ರೈತರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.