ಬೇಡ ಜಂಗಮರಿಗೆ ಎಸ್‌ಸಿ ಪ್ರಮಾಣ ಪತ್ರ ನೀಡಿ; ಸಾಹಿತಿ ಎ.ಕೆ.ಆದವಾನಿಮಠ

ಜಂಗಮರು ಬ್ರಿಟಿಷರ ಕಾಲದಿಂದಲೂ ಬೇಡಿ ತಿನ್ನುವ ಕಾಯಕದಿಂದ ಬಂದವರಾಗಿದ್ದಾರೆ.

Team Udayavani, Mar 30, 2022, 6:17 PM IST

ಬೇಡ ಜಂಗಮರಿಗೆ ಎಸ್‌ಸಿ ಪ್ರಮಾಣ ಪತ್ರ ನೀಡಿ; ಸಾಹಿತಿ ಎ.ಕೆ.ಆದವಾನಿಮಠ

ಬಂಕಾಪುರ: ಸರ್ಕಾರದಿಂದ ನೇಮಕಗೊಂಡಿದ್ದ ಅಧಿಕಾರಿ ಸೂರ್ಯನಾಥ ಕಾಮತ್‌ ವರದಿ ಆಧಾರದ ಮೇಲೆ ಸಂವಿಧಾನಬದ್ಧವಾಗಿ ಬೇಡ ಜಂಗಮರಿಗೆ ಸಿಗಬೇಕಾದ ಎಸ್‌ಸಿ ಪ್ರಮಾಣ ಪತ್ರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕೆಂದು ಹಿರಿಯ ಸಾಹಿತಿ ಎ.ಕೆ. ಆದವಾನಿಮಠ ಅವರು ಸರ್ಕಾರವನ್ನು ಒತ್ತಾಯಿಸಿದರು.

ಪಟ್ಟಣದ ಅರಳೆಲೆಮಠದ ಆವರಣದಲ್ಲಿ ನಡೆದ ಬೇಡ ಜಂಗಮರ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಜಂಗಮರು ಸರ್ವ ಸಮಾಜದವರ ಏಳ್ಗೆಗಾಗಿ ಅನಾದಿ ಕಾಲದಿಂದಲೂ ಶ್ರಮಿಸುತ್ತಿದ್ದಾರೆ. ಎಲ್ಲ ಸಮಾಜಗಳ ಶುಭ, ಅಶುಭ ಕಾರ್ಯಗಳಲ್ಲಿ ತಮ್ಮನ್ನು ತಾವು ಸಮರ್ಪಿಸಿಕೊಂಡು ಬಂದಿದ್ದಾರೆ. ಆದರೆ, ಜಂಗಮರ ಕುಟುಂಬ ಈಗ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿದೆ.ಹಾಗಾಗಿ, ಅವರಿಗೆ ಲಭಿಸಬೇಕಾದ ನ್ಯಾಯಯುತ ಹಕ್ಕನ್ನು ನೀಡಬೇಕು. ಇಲ್ಲದೇ ಹೋದರೆ, ಹೋರಾಟದ ಹಾದಿ ಹಿಡಿಬೇಕಾಗುತ್ತದೆ ಎಂದು ಎಚ್ಚರಿಸಿದರು.

ಡಾ|ಆರ್‌.ಎಸ್‌.ಅರಳೆಲೆಮಠ ಮಾತನಾಡಿ, ಬೇಡ ಜಂಗಮರ ಸಭೆ ಕೇವಲ ಪ್ರಮಾಣ ಪತ್ರ ಪಡೆಯುವುದಕ್ಕೆ ಸೀಮಿತವಾಗಿರದೇ ಜಂಗಮ ಕುಟುಂಬಗಳ ಸಮಸ್ಯೆ, ಪರಿಹಾರ, ಮಕ್ಕಳ ಶೈಕ್ಷಣಿಕ ಚಿಂತನೆ ಸೇರಿದಂತೆ ಸಮುದಾಯದ ಏಳ್ಗೆಗಾಗಿ ಸಂಘಟನಾತ್ಮಕ ಸಭೆ ನಡೆಸಲಾಗುತ್ತಿದೆ ಎಂದರು.

ಜಂಗಮರು ಬ್ರಿಟಿಷರ ಕಾಲದಿಂದಲೂ ಬೇಡಿ ತಿನ್ನುವ ಕಾಯಕದಿಂದ ಬಂದವರಾಗಿದ್ದಾರೆ. ನಿಜಾಮರ ಕಾಲದಲ್ಲಿಯೇ ಬೇಡ ಜಂಗಮರ ಜಾತಿಯನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಹೀಗಿದ್ದರೂ, ಜಾತಿ ಪ್ರಮಾಣ ಪತ್ರ ಪಡೆಯಲು ಬೇಡ ಜಂಗಮರು ಪರದಾಡುವಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರೊ|ಎಲ್‌.ಎ.ಹಿರೇಮಠ ಮಾತನಾಡಿ, ಸೂರ್ಯನಾಥ ಕಾಮತ್‌ ಅವರ ವರದಿಯಲ್ಲಿ ಬೇಡ ಜಂಗಮರ ಆಚಾರ, ವಿಚಾರ, ಕಾಯಕದ ಬಗ್ಗೆ ಹೇಳಲಾಗಿದೆ. ಸರ್ಕಾರ ಹೊರಡಿಸಿರುವ ಮಿಸಲಾತಿ ಪಟ್ಟಿಯಲ್ಲೂ ಬೇಡ ಜಂಗಮರ ಜಾತಿಯನ್ನು ಸೇರಿಸಲಾಗಿದೆ. ಸರ್ಕಾರದ ಆದೇಶವೂ ಇದೆ. ಇಷ್ಟೆಲ್ಲ ಇದ್ದರೂ, ಬೇಡ ಜಂಗಮರಿಗೆ ಅಧಿ ಕಾರಿಗಳು ಎಸ್‌ಸಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕುತ್ತಿರುವುದು ನ್ಯಾಯಾಲಯ ಹಾಗೂ ಸಂವಿಧಾನ ಶಿಲ್ಪಿ  ಡಾ|ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಮಾಡುವ ಅವಮಾನವಾಗಿದೆ ಎಂದರು.

ಇತ್ತೀಚೆಗೆ ವಿಧಾನಸಭೆಯಲ್ಲಿ ಎಂ.ಪಿ. ರೇಣುಕಾಚಾರ್ಯ ಅವರು ತಮ್ಮ ಪುತ್ರಿ ಎಸ್‌ಸಿ ಪ್ರಮಾಣ ಪತ್ರ ಪಡೆದಿರುವುದನ್ನು ವಾಪಸ್‌ ಮಾಡುವುದಾಗಿ ಹೇಳಿಕೆ ನೀಡಿರುವುದನ್ನು ಹಾಗೂ ಪಿ.ರಾಜೀವ್‌ ಅವರ ಹೇಳಿಕೆಯನ್ನು ಸಭೆಯಲ್ಲಿ ಬೇಡ ಜಂಗಮ ಸಮಾಜ ಒಕ್ಕೊರೊಲಿನಿಂದ ಖಂಡಿಸಿತು. ಅರಳೆಲೆಮಠದ ಶ್ರೀ ರೇವಣಸಿದ್ದೇಶ್ವರ ಸ್ವಾಮಿಜಿ ಸಭೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಬೇಡ ಜಂಗಮ ಸಮಾಜದ ತಾಲೂಕು ಅಧ್ಯಕ್ಷ ಎಫ್‌.ಎಸ್‌.ಹಿರೇಮಠ, ಸೋಮಶೇಖರ ಗೌರಿಮಠ, ಚಪ್ಪನಮಠ, ಎಸ್‌.ಬಿ.ಆದವಾನಿಮಠ ಉಳವಯ್ಯ ಹಿರೇಮಠ, ಚನವೀರಯ್ಯ ಹಿರೇಮಠ, ಗದಿಗಯ್ಯ ಹುಣಸಿಕಟ್ಟಿಮಠ, ಬಾಪುಗೌಡ್ರ ಪಾಟೀಲ, ಶೇಖಯ್ಯ ಕಟಗಿಮಠ, ವೀರಯ್ಯ ಹಿರೇಮಠ, ಗದಿಗಯ್ಯ ಮಹಾಂತಿನಮಠ, ಚಂದ್ರಶೇಖರ ಛಬ್ಬಿಮಠ, ಮಣಿಕಂಠ ಕಟಗಿಮಠ  ಇತರರು ಇದ್ದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.