ಅನುವಂಶಿಕ ದೇಗುಲ ಸರ್ಕಾರದ ವಶಕ್ಕಿಲ್ಲ: ಸಚಿವ ರುದ್ರಪ್ಪ ಲಮಾಣಿ
Team Udayavani, Dec 22, 2017, 6:55 AM IST
ಹಾವೇರಿ: ಕೌಟುಂಬಿಕ, ಒಂದೇ ಜಾತಿಗೆ ಸೇರಿದ ಹಾಗೂ ಅನುವಂಶಿಕ ದೇವಸ್ಥಾನಗಳನ್ನು ಸರ್ಕಾರ ವಶಪಡಿಸಿಕೊಳ್ಳುವುದಿಲ್ಲ ಎಂದು ಜವಳಿ ಹಾಗೂ ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟಪಡಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಲವು ವರ್ಷಗಳ ಹಿಂದೆ ರಾಜ್ಯದಲ್ಲಿರುವ 34,559 ದೇವಸ್ಥಾನಗಳಿಗೆ ಮುಜರಾಯಿ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆ ಹೊರಡಿಸಿದ ದೇವಸ್ಥಾನಗಳಲ್ಲಿ ಕೌಟುಂಬಿಕ, ಒಂದೇ ಜಾತಿಗೆ ಸೇರಿದ ಹಾಗೂ ಅನುವಂಶಿಕ ದೇವಸ್ಥಾನಗಳು, ಕೆಲವು ಮಠಗಳೂ ಸೇರಿದ್ದವು. ಈ ಅಧಿಸೂಚನೆ ಅನ್ವಯ ಜಿಲ್ಲಾ ಧಾರ್ಮಿಕ ಪರಿಷತ್ಗಳು ಈಗ ಎಲ್ಲ ದೇವಸ್ಥಾನಗಳ ಆಸ್ತಿ ಮಾಹಿತಿ ಸಂಗ್ರಹಿಸಲು, ನಾಮನಿರ್ದೇಶನ ಮಾಡಲು ಮುಂದಾದಾಗ ದೇವಸ್ಥಾನದವರು ಆತಂಕಗೊಂಡಿದ್ದರು.
ರಾಜ್ಯ ಧಾರ್ಮಿಕ ಪರಿಷತ್ನಲ್ಲಿ ಈ ಬಗ್ಗೆ ಚರ್ಚಿಸಿ ಅಧಿಸೂಚನೆಯಲ್ಲಿರುವ ಕೌಟುಂಬಿಕ, ಒಂದೇ ಜಾತಿಗೆ ಸೇರಿದ ಹಾಗೂ ಆನುವಂಶಿಕ ದೇವಸ್ಥಾನಗಳನ್ನು ಹೊರಡಿಸಲು ತೀರ್ಮಾನಿಸಲಾಗಿದೆ ಎಂದರು. ಅಧಿಸೂಚನೆಯಿಂದ ಹೊರಗಿಡುವಂತೆ ಕೋರಿ ಈಗಾಗಲೇ 100 ಅರ್ಜಿಗಳು ಬಂದಿದೆ. ಅವುಗಳಲ್ಲಿ 50 ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ಸರಿಪಡಿಸಲು ಸೂಚಿಸಲಾಗಿದೆ. ಅರ್ಚಕರು, ಮಠದವರು ತಪ್ಪು ತಿಳಿವಳಿಕೆಯಿಂದಾಗಿ ಸರ್ಕಾರ ತಮ್ಮ ಮಠ, ದೇವಸ್ಥಾನಗಳನ್ನು ವಶಪಡಿಸಿಕೊಳ್ಳುತ್ತಿದೆ ಎಂದು ಆತಂಕಗೊಂಡಿದ್ದರು. ಈಗ ಅಧಿಸೂಚನೆಯಿಂದ ಅಂತಹ ದೇವಸ್ಥಾನಗಳನ್ನು ಹೊರಗಿಡಲಾಗಿದೆ ಎಂಬುದನ್ನು ಸ್ಪಷ್ಟಪಡಿಸಿ ಅವರನ್ನು ಆತಂಕ ದೂರ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ