ಪರಿಹಾರಕ್ಕಿಲ್ಲ ಅನುದಾನ ಕೊರತೆ

•ಜಿಲ್ಲಾ ವಿಪತ್ತು ನಿಧಿಯಲ್ಲಿದೆ 16 ಕೋಟಿ ರೂ.: ಜಿಲ್ಲಾಧಿಕಾರಿ ಮಾಹಿತಿ

Team Udayavani, Aug 11, 2019, 12:39 PM IST

hv-tdy-3

ಹಾವೇರಿ: ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಾವೇರಿ: ಜಿಲ್ಲೆಯ ಅತಿವೃಷ್ಠಿ ಹಾಗೂ ನೆರೆ ಹಾವಳಿ ಪರಿಹಾರಕ್ಕೆ ಯಾವುದೇ ಅನುದಾನ ಕೊರತೆ ಇಲ್ಲ. ಜಿಲ್ಲಾ ವಿಪತ್ತು ನಿಧಿಯಲ್ಲಿ 16 ಕೋಟಿ ರೂ. ಹಣವಿದೆ. ತಾಲೂಕಾಡಳಿತ ಬಳಿ 15 ರಿಂದ 20 ಲಕ್ಷ ರೂ. ಹಣವಿದೆ. ಸಂತ್ರಸ್ತರ ನೆರವಿಗೆ ಜಿಲ್ಲಾಡಳಿತ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿದೆ. ನೆರೆ ಹಾಗೂ ಅತಿವೃಷ್ಠಿ ಬಾಧಿತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದರು.

ಶನಿವಾರ ತಮ್ಮ ಕಚೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದರು. ನೆರೆ ಸಂತ್ರಸ್ತರಿಗಾಗಿ ಜಿಲ್ಲೆಯಲ್ಲಿ 76 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ. ಮಳೆ ಹಾಗೂ ನೆರೆಯ ಸಂಕಷ್ಟದಲ್ಲಿರುವವರು ಪರಿಹಾರ ಕೇಂದ್ರಕ್ಕೆ ಆಗಮಿಸಿ ಆಶ್ರಯಪಡೆಯಬೇಕು ಎಂದು ಅವರು ಕೋರಿದರು.

ಆಗಸ್ಟ್‌ 8 ಮತ್ತು 9 ರಂದು 591.7 ಎಂಎಂ ಹಾಗೂ 9 ರಿಂದ 10 ರಂದು 224.3 ಎಂ.ಎಂ. ಮಳೆಯಾಗಿದೆ. ತುಂಗಭದ್ರಾ ನದಿಯಿಂದ 1.15 ಲಕ್ಷ ಕ್ಯೂಸೆಕ್‌ ನೀರನ್ನು ಹರಿಬಿಡಲಾಗಿದೆ. ವರದಾ ನದಿಯಿಂದ 32 ಕ್ಯೂಸೆಕ್‌ ಮತ್ತು ಧರ್ಮಾ ನದಿಯಿಂದ ಐದುಸಾವಿರ ಕ್ಯೂಸೆಕ್‌ ನೀರು ಹರಿದುಬಂದಿರುವುದರಿಂದ ನದಿಪಾತ್ರದ ಗ್ರಾಮಗಳಿಗೆ ನೆರೆ ಬಂದು ಹಾನಿಯಾಗಿದೆ. ಹಾನಗಲ್ ತಾಲೂಕಿನ ನಾಲ್ಕು ಗ್ರಾಮಗಳು, ಸವಣೂರ ತಾಲೂಕಿನ ನಾಲ್ಕು ಗ್ರಾಮಗಳು ಸಂಪರ್ಕ ಕಳೆದುಕೊಂಡಿದ್ದವು. ಉಳಿದಂತೆ ಗ್ರಾಮಗಳಲ್ಲಿ ಭಾಗಶಃ ನೀರು ತುಂಬಿ ಹಾನಿ ಸಂಭವಿಸಿದೆ. ಸಂತ್ರಸ್ತ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪರಿಹಾರ ಕೇಂದ್ರ: ಜಿಲ್ಲೆಯಲ್ಲಿ 76 ಗ್ರಾಮಗಳು ಬಾಧಿತವಾಗಿದ್ದು, 6493 ಜನರನ್ನು ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಹಾವೇರಿಯಲ್ಲಿ 53, ರಾಣಿಬೆನ್ನೂರಿನಲ್ಲಿ ಎರಡು, ಬ್ಯಾಡಗಿಯಲ್ಲಿ ಎರಡು, ಸವಣೂರಿನಲ್ಲಿ ನಾಲ್ಕು, ಶಿಗ್ಗಾವಿಯಲ್ಲಿ ನಾಲ್ಕು ಹಾಗೂ ಹಾನಗಲ್ನಲ್ಲಿ 11 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರಿಹಾರ ಕೇಂದ್ರದಲ್ಲಿ ಆಶ್ರಯಪಡೆದಿರುವ ಸಂತ್ರಸ್ತರಿಗೆ ಊಟದ ವ್ಯವಸ್ಥೆ ಹಾಗೂ ಹೊದಿಕೆಗಳನ್ನು ನೀಡಲಾಗಿದೆ. ಅಗತ್ಯ ವೈದ್ಯೋಪಚಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ಪ್ರವಾಹದಲ್ಲಿ ವ್ಯಕ್ತಿಯೊಬ್ಬ ಕೊಚ್ಚಿಹೋಗಿದ್ದು, ಈ ವರೆಗೆ ಪತ್ತೆಯಾಗಿಲ್ಲ ಹಾಗೂ ಐದು ಜನ ಗಾಯಗೊಂಡಿದ್ದಾರೆ ಎಂದು ತಿಳಿಸಿದರು. ಜಿಪಂ ಸಿಇಒ ಕೆ.ಲೀಲಾವತಿ, ಎಸ್ಪಿ ಕೆ.ಜಿ. ದೇವರಾಜು, ಎಡಿಸಿ ಎನ್‌.ತಿಪ್ಪೇಸ್ವಾಮಿ ಇದ್ದರು.

84ಮಿಮೀ ಮಳೆ ದಾಖಲು:

ಕಳೆದ 24 ತಾಸುಗಳಲ್ಲಿ ಜಿಲ್ಲೆಯಾದ್ಯಂತ ಸರಾಸರಿ 32ಮಿಮೀ ಮಳೆಯಾಗಿದೆ. ಹಾವೇರಿ 25ಮಿ.ಮೀ., ರಾಣಿಬೆನ್ನೂರಿನಲ್ಲಿ 14.4ಮಿ.ಮೀ., ಬ್ಯಾಡಗಿಯಲ್ಲಿ 14.4ಮಿ.ಮೀ., ಹಿರೇಕೆರೂರಿನಲ್ಲಿ 35.8ಮಿ.ಮೀ., ಸವಣೂರಿನಲ್ಲಿ 39.5ಮಿ.ಮೀ., ಶಿಗ್ಗಾವಿಯಲ್ಲಿ 57ಮಿ.ಮೀ., ಹಾನಗಲ್ಲನಲ್ಲಿ 38.2ಮಿ.ಮೀ. ಮಳೆ ದಾಖಲಾಗಿದೆ.
ನೆರೆ ಸಂತ್ರಸ್ತರಿಗಾಗಿ ಜಿಲ್ಲೆಯಲ್ಲಿ 127 ಪರಿಹಾರ ಕೇಂದ್ರ ತೆರೆಯಲಾಗಿದೆ. 55 ಗ್ರಾಮಗಳ ಸಂಪರ್ಕ ರಸ್ತೆ¿ಲ್ಲಿ ನೀರು ನುಗ್ಗಿ ಸಂಪರ್ಕ ಸ್ಥಗಿತಗೊಂಡಿವೆ. ಕೆರೆ ದಡ, ಕಾಲುವೆ ಒಡೆದು, ರಸ್ತೆ ಕುಸಿದು 95.50ಲಕ್ಷ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.