ಸರಕು ಸಾಗಾಣಿಕೆ ವಾಹನಕ್ಕಿಲ್ಲ ನಿರ್ಬಂಧ


Team Udayavani, Apr 1, 2020, 4:44 PM IST

ಸರಕು ಸಾಗಾಣಿಕೆ ವಾಹನಕ್ಕಿಲ್ಲ ನಿರ್ಬಂಧ

ಹಾವೇರಿ: ದಿನಸಿ, ತರಕಾರಿ ಸೇರಿದಂತೆ ಯಾವುದೇ ತರಹದ ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ನಿರ್ಬಂಧವಿಲ್ಲ. ಆದರೆ, ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರ ಸಾಗಾಣಿಕೆಗೆ ಮಾತ್ರ ನಿರ್ಬಂಧವಿದೆ.

ದಿನಸಿ, ತರಕಾರಿಗಳನ್ನು ಹೊರರಾಜ್ಯ, ಹೊರ ಜಿಲ್ಲೆಯಿಂದ ತರಿಸಿಕೊಳ್ಳಲು ಹಾಗೂ ತೆಗೆದುಕೊಂಡು ಹೋಗಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸ್ಪಷ್ಟಪಡಿಸಿದರು.

ಜಿಲ್ಲೆಯ ವಿವಿಧ ತಾಲೂಕುಗಳ ಅಧಿಕಾರಿಗಳು ಹಾಗೂ ವರ್ತಕಕರೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ವರ್ತಕರ ಸಮಸ್ಯೆಯನ್ನು ಆಲಿಸಿದ ಅವರು, ಜಿಲ್ಲೆಯಿಂದ ಹೊರಗಡೆ ಸಾಮಾಗ್ರಿಗಳ ಸಾಗಾಣಿಕೆಗೆ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯಬೇಕು ಹಾಗೂ ಜಿಲ್ಲೆಯ ಒಳಗೆ ಅಗತ್ಯ ವಸ್ತುಗಳ ಸಾಗಾಣಿಕೆಗೆ ವಾಹನಗಳಿಗೆ ಆಯಾ ತಾಲೂಕು ತಹಶೀಲ್ದಾರಗಳಿಂದ ಪರವಾನಗಿ ಪಡೆಯುವಂತೆ ಸಲಹೆ ನೀಡಿದರು. ಹೊರ ಜಿಲ್ಲೆಯಿಂದ ಸಾಮಗ್ರಿ ತರಲು ಯಾವುದೇ ನಿರ್ಬಂಧವಿಲ್ಲ. ವರ್ತಕರಿಗೆ ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಲಾಗುವುದು ಎಂದರು.

ಹೆದ್ದಾರಿಯಲ್ಲಿ ರಾಜ್ಯದಿಂದ ರಾಜ್ಯಕ್ಕೆ, ಜಿಲ್ಲೆಯಿಂದ ಜಿಲ್ಲೆಗೆ ಸರಕು ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ವಾಹನಗಳು ಸರಾಗವಾಗಿ ಸಾಗಲು ಸರ್ಕಾರ ಅನುಮತಿ ನೀಡಿದೆ. ಕಾರಣ ದಾವಣಗೆರೆ, ಹುಬ್ಬಳ್ಳಿ ಸೇರಿದಂತೆ ಜಿಲ್ಲೆಗೆ ದಿನಸಿ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ತರಸಿಕೊಳ್ಳಬಹುದು. ದಿನಸಿಗಳ ಕೊರತೆಯಾಗದಂತೆ ದಾಸ್ತಾನಿಗೆ ಜಿಲ್ಲಾಡಳಿತ ಮುಕ್ತ ಅವಕಾಶ ಕಲ್ಪಿಸುತ್ತದೆ ಎಂದು ವರ್ತಕರಿಗೆ ತಿಳಿಸಿದರು.

ದಿನಸಿ ಮಾರಾಟ ಮಾಡಲು ಜಿಲ್ಲಾಡಳಿತ ಯಾವುದೇ ಸಮಯವನ್ನು ನಿಗದಿಪಡಿಸಿಲ್ಲ.ಜನರಿಗೆ ತೊಂದರೆಯಾಗಂತೆ ದಿನದ 24 ತಾಸು ಅಂಗಡಿಗಳನ್ನು ತೆರೆದು ದಿನಸಿಗಳನ್ನು ಮಾರಾಟ ಮಾಡಬಹುದು. ಮನೆ ಬಾಗಿಲಿಗೆ ಸಾಮಗ್ರಿ ತಲುಪಿಸಲು ಜಿಲ್ಲಾಡಳಿತ ಪ್ರೋತ್ಸಾಹ ನೀಡುತ್ತದೆ. ಗ್ರಾಹಕರು ದೂರವಾಣಿ ಕರೆ ಮಾಡಿದರೆ ಅವರ ಮನೆಗೆ ದಿನಬಳಕೆ ಸಾಮಗ್ರಿ ತಲುಪಿಸುವ ವ್ಯವಸ್ಥೆ ಕೈಗೊಂಡರೆ ಒಳ್ಳೆಯದು. ಆದರೆ, ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಬಾರದು. ಪ್ರತಿ ಕಿರಾಣಿ ಅಂಗಡಿಯ ಮುಂದೆ ಸಾಮಗ್ರಿಗಳ ದರಪಟ್ಟಿಯನ್ನು ಪ್ರಕಟಿಸಬೇಕು ಎಂದರು.

ತರಕಾರಿ ಮಾರಾಟ, ಎಲೆ, ಶುಂಠಿ ಸೇರಿದಂತೆ ಕೃಷಿ ಉತ್ಪನ್ನಗಳನ್ನು ಹೊರ ಜಿಲ್ಲೆಗೆ ಸಾಗಾಣಿಕೆ ಮಾಡುವುದಾದರೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಿದರು. ಕೃಷಿ ಚಟುವಟಿಕೆಗೆ ಯಾವುದೇ ಅಡೆತಡೆ ಬೇಡ. ಆಹಾರ ಧಾನ್ಯಗಳಿಗೆ ಯಾವುದೇ ಕೊರತೆಯಾಗದಂತೆ ಕ್ರಮವಹಿಸಿ ಸ್ಥಳೀಯವಾಗಿ ತಾಂತ್ರಿಕ ಸಮಸ್ಯೆಗಳನ್ನು ತಹಶೀಲ್ದಾರ್‌ ಮಟ್ಟದಲ್ಲಿ ಬಗೆಹರಿಸಿ ಜನರಿಗೆ ಆಹಾರ, ತರಕಾರಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ದೊರಕಿಸಿಕೊಡಿ ಎಂದು ಸಲಹೆ ನೀಡಿದರು.

ಪೆಟ್ರೋಲ್‌ ಬಂಕ್‌ ಮಾಲೀಕರು, ವರ್ತಕರು, ಸೇಲ್ಸ್‌ ಮ್ಯಾನ್‌ಗಳಿಗೆ, ಹಮಾಲರಿಗೆ ಪಾಸ್‌ ವಿತರಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಎಲ್ಲ ಪಡಿತರ ಅಂಗಡಿಗಳ ಮೂಲಕ ಎರಡು ತಿಂಗಳ ಪಡಿತರ ಪದಾರ್ಥಗಳನ್ನು ವಿತರಿಸಲಾಗುತ್ತಿದೆ. ವ್ಯವಸ್ಥಿತವಾಗಿ ವಿತರಣೆಯಾಗಬೇಕು. ನ್ಯಾಯಬೆಲೆ ಅಂಗಡಿಗಳಿಂದ ಮನೆಗೆ ಎರಡು ತಿಂಗಳ ಪಡಿತರ ಸಾಗಿಸಲು ಅನುಕೂಲವಾಗುವಂತೆ ಆಟೋ ಇತರ ವಾಹನಗಳಿಗೆ ಓಡಾಡಲು ಅನುಮತಿ ನೀಡಬೇಕು. ಪಾಸ್‌ಗಳನ್ನು ವಿತರಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ| ದಿಲೀಷ್‌ ಶಶಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಿ, ವೀರೇಂದ್ರ ಕುಂದಗೋಳ, ತಹಶೀಲ್ದಾರ್‌ ಶಂಕರ ಜಿ.ಎಸ್‌. ಇನ್ನಿತರರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.