ಸರಕು ಸಾಗಾಣಿಕೆ ವಾಹನಕ್ಕಿಲ್ಲ ನಿರ್ಬಂಧ


Team Udayavani, Apr 1, 2020, 4:44 PM IST

ಸರಕು ಸಾಗಾಣಿಕೆ ವಾಹನಕ್ಕಿಲ್ಲ ನಿರ್ಬಂಧ

ಹಾವೇರಿ: ದಿನಸಿ, ತರಕಾರಿ ಸೇರಿದಂತೆ ಯಾವುದೇ ತರಹದ ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ನಿರ್ಬಂಧವಿಲ್ಲ. ಆದರೆ, ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರ ಸಾಗಾಣಿಕೆಗೆ ಮಾತ್ರ ನಿರ್ಬಂಧವಿದೆ.

ದಿನಸಿ, ತರಕಾರಿಗಳನ್ನು ಹೊರರಾಜ್ಯ, ಹೊರ ಜಿಲ್ಲೆಯಿಂದ ತರಿಸಿಕೊಳ್ಳಲು ಹಾಗೂ ತೆಗೆದುಕೊಂಡು ಹೋಗಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸ್ಪಷ್ಟಪಡಿಸಿದರು.

ಜಿಲ್ಲೆಯ ವಿವಿಧ ತಾಲೂಕುಗಳ ಅಧಿಕಾರಿಗಳು ಹಾಗೂ ವರ್ತಕಕರೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ವರ್ತಕರ ಸಮಸ್ಯೆಯನ್ನು ಆಲಿಸಿದ ಅವರು, ಜಿಲ್ಲೆಯಿಂದ ಹೊರಗಡೆ ಸಾಮಾಗ್ರಿಗಳ ಸಾಗಾಣಿಕೆಗೆ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯಬೇಕು ಹಾಗೂ ಜಿಲ್ಲೆಯ ಒಳಗೆ ಅಗತ್ಯ ವಸ್ತುಗಳ ಸಾಗಾಣಿಕೆಗೆ ವಾಹನಗಳಿಗೆ ಆಯಾ ತಾಲೂಕು ತಹಶೀಲ್ದಾರಗಳಿಂದ ಪರವಾನಗಿ ಪಡೆಯುವಂತೆ ಸಲಹೆ ನೀಡಿದರು. ಹೊರ ಜಿಲ್ಲೆಯಿಂದ ಸಾಮಗ್ರಿ ತರಲು ಯಾವುದೇ ನಿರ್ಬಂಧವಿಲ್ಲ. ವರ್ತಕರಿಗೆ ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಲಾಗುವುದು ಎಂದರು.

ಹೆದ್ದಾರಿಯಲ್ಲಿ ರಾಜ್ಯದಿಂದ ರಾಜ್ಯಕ್ಕೆ, ಜಿಲ್ಲೆಯಿಂದ ಜಿಲ್ಲೆಗೆ ಸರಕು ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ವಾಹನಗಳು ಸರಾಗವಾಗಿ ಸಾಗಲು ಸರ್ಕಾರ ಅನುಮತಿ ನೀಡಿದೆ. ಕಾರಣ ದಾವಣಗೆರೆ, ಹುಬ್ಬಳ್ಳಿ ಸೇರಿದಂತೆ ಜಿಲ್ಲೆಗೆ ದಿನಸಿ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ತರಸಿಕೊಳ್ಳಬಹುದು. ದಿನಸಿಗಳ ಕೊರತೆಯಾಗದಂತೆ ದಾಸ್ತಾನಿಗೆ ಜಿಲ್ಲಾಡಳಿತ ಮುಕ್ತ ಅವಕಾಶ ಕಲ್ಪಿಸುತ್ತದೆ ಎಂದು ವರ್ತಕರಿಗೆ ತಿಳಿಸಿದರು.

ದಿನಸಿ ಮಾರಾಟ ಮಾಡಲು ಜಿಲ್ಲಾಡಳಿತ ಯಾವುದೇ ಸಮಯವನ್ನು ನಿಗದಿಪಡಿಸಿಲ್ಲ.ಜನರಿಗೆ ತೊಂದರೆಯಾಗಂತೆ ದಿನದ 24 ತಾಸು ಅಂಗಡಿಗಳನ್ನು ತೆರೆದು ದಿನಸಿಗಳನ್ನು ಮಾರಾಟ ಮಾಡಬಹುದು. ಮನೆ ಬಾಗಿಲಿಗೆ ಸಾಮಗ್ರಿ ತಲುಪಿಸಲು ಜಿಲ್ಲಾಡಳಿತ ಪ್ರೋತ್ಸಾಹ ನೀಡುತ್ತದೆ. ಗ್ರಾಹಕರು ದೂರವಾಣಿ ಕರೆ ಮಾಡಿದರೆ ಅವರ ಮನೆಗೆ ದಿನಬಳಕೆ ಸಾಮಗ್ರಿ ತಲುಪಿಸುವ ವ್ಯವಸ್ಥೆ ಕೈಗೊಂಡರೆ ಒಳ್ಳೆಯದು. ಆದರೆ, ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಬಾರದು. ಪ್ರತಿ ಕಿರಾಣಿ ಅಂಗಡಿಯ ಮುಂದೆ ಸಾಮಗ್ರಿಗಳ ದರಪಟ್ಟಿಯನ್ನು ಪ್ರಕಟಿಸಬೇಕು ಎಂದರು.

ತರಕಾರಿ ಮಾರಾಟ, ಎಲೆ, ಶುಂಠಿ ಸೇರಿದಂತೆ ಕೃಷಿ ಉತ್ಪನ್ನಗಳನ್ನು ಹೊರ ಜಿಲ್ಲೆಗೆ ಸಾಗಾಣಿಕೆ ಮಾಡುವುದಾದರೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಿದರು. ಕೃಷಿ ಚಟುವಟಿಕೆಗೆ ಯಾವುದೇ ಅಡೆತಡೆ ಬೇಡ. ಆಹಾರ ಧಾನ್ಯಗಳಿಗೆ ಯಾವುದೇ ಕೊರತೆಯಾಗದಂತೆ ಕ್ರಮವಹಿಸಿ ಸ್ಥಳೀಯವಾಗಿ ತಾಂತ್ರಿಕ ಸಮಸ್ಯೆಗಳನ್ನು ತಹಶೀಲ್ದಾರ್‌ ಮಟ್ಟದಲ್ಲಿ ಬಗೆಹರಿಸಿ ಜನರಿಗೆ ಆಹಾರ, ತರಕಾರಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ದೊರಕಿಸಿಕೊಡಿ ಎಂದು ಸಲಹೆ ನೀಡಿದರು.

ಪೆಟ್ರೋಲ್‌ ಬಂಕ್‌ ಮಾಲೀಕರು, ವರ್ತಕರು, ಸೇಲ್ಸ್‌ ಮ್ಯಾನ್‌ಗಳಿಗೆ, ಹಮಾಲರಿಗೆ ಪಾಸ್‌ ವಿತರಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಎಲ್ಲ ಪಡಿತರ ಅಂಗಡಿಗಳ ಮೂಲಕ ಎರಡು ತಿಂಗಳ ಪಡಿತರ ಪದಾರ್ಥಗಳನ್ನು ವಿತರಿಸಲಾಗುತ್ತಿದೆ. ವ್ಯವಸ್ಥಿತವಾಗಿ ವಿತರಣೆಯಾಗಬೇಕು. ನ್ಯಾಯಬೆಲೆ ಅಂಗಡಿಗಳಿಂದ ಮನೆಗೆ ಎರಡು ತಿಂಗಳ ಪಡಿತರ ಸಾಗಿಸಲು ಅನುಕೂಲವಾಗುವಂತೆ ಆಟೋ ಇತರ ವಾಹನಗಳಿಗೆ ಓಡಾಡಲು ಅನುಮತಿ ನೀಡಬೇಕು. ಪಾಸ್‌ಗಳನ್ನು ವಿತರಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ| ದಿಲೀಷ್‌ ಶಶಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಿ, ವೀರೇಂದ್ರ ಕುಂದಗೋಳ, ತಹಶೀಲ್ದಾರ್‌ ಶಂಕರ ಜಿ.ಎಸ್‌. ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.