ರೈತರ ಬದುಕಿನೊಂದಿಗೆ ಸರ್ಕಾರಗಳ ಚೆಲ್ಲಾಟ


Team Udayavani, Oct 10, 2018, 5:10 PM IST

10-october-18.gif

ಹಾವೇರಿ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಬದುಕಿನೊಂದಿಗೆ ಆಟವಾಡುತ್ತಿವೆ. ಜಿಲ್ಲೆಯಲ್ಲಿ ಭೀಕರ ಬರಗಾಲದ ಛಾಯೆ ಮೂಡಿದ್ದರೂ ರೈತರ ಬಗ್ಗೆ ಕಾಳಜಿ ತೊರುತ್ತಿಲ್ಲ. ಸರ್ಕಾರಗಳ ರೈತ ವಿರೋಧಿ ನೀತಿಯನ್ನು ಹೋರಾಟದ ಮೂಲಕ ಖಂಡಿಸಲು ಮುಂದಾಗಬೇಕು ಎಂದು ಉತ್ತರ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಹನಮಂತಪ್ಪ ದೀವಿಗಿಹಳ್ಳಿ ಹೇಳಿದರು.

ನಗರದ ಮುರುಘರಾಜೇಂದ್ರ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ ಉತ್ತರ ಕರ್ನಾಟಕ ರೈತ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸತತವಾಗಿ ಬರಗಾಲ ಆವರಿಸಿದೆ. ರಾಜ್ಯ ಸರ್ಕಾರ ಸಾಲಮನ್ನಾ ಮಾಡುತ್ತೇವೆ ಎಂದು ಹೇಳುತ್ತಿದೆ. ಆದರೆ, ಅದಕ್ಕೆ ಸ್ಪಷ್ಟವಾದ ನಿಯಮ ಹೇಳುತ್ತಿಲ್ಲ. ಇದರಿಂದ ರೈತರು ಸಾಲಮನ್ನಾ ವಿಚಾರವಾಗಿ ಗೊಂದಲದಲ್ಲಿದ್ದಾರೆ. ಮುಖ್ಯಮಂತ್ರಿಯವರು ರೈತರ ಪರವಾಗಿದ್ದಾರೆ ಎಂಬುವುದಾದರೆ ರೈತರಿಗೆ ಸ್ಪಷ್ಟ ಮಾಹಿತಿ ನೀಡಿ ರೈತರು ನೆಮ್ಮದಿಯ ಬದುಕಿಗೆ ನೆರವಾಗಬೇಕು ಎಂದರು.

ಕೇಂದ್ರ ಸರ್ಕಾರ ರೈತರ ನೆರವಿಗೆ ಧಾವಿಸಿ ರೈತರ ಸಂಪೂರ್ಣ ಸಾಲಮನ್ನಾ ಮಾಡವ ಕಾಯಕ ಮಾಡಿದರೆ ರೈತರ ಬಗ್ಗೆ ಕಾಳಜಿ ಇದೆ ಎಂದು ಗೊತ್ತಾಗುತ್ತದೆ. ಪ್ರಧಾನಿಯವರು ಕೇವಲ ಭಾಷಣ ಮಾಡಿದರೇ ಸಾಲದು, ಕೊಡಲೇ ರೈತರ ನೆರವಿಗೆ ಬರಬೇಕು ಎಂದು ಹನಮಂತಪ್ಪ ದೀವಿಗಿಹಳ್ಳಿ ಹೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ ದೂದಿಹಳ್ಳಿ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕಿನಲ್ಲಿಯೂ ಘಟಕಗಳನ್ನು ರಚನೆ ಮಾಡಿ ರೈತರಿಗೆ ಅನ್ಯಾಯವಾದರೆ ಹೋರಾಟಕ್ಕೆ ಸಜ್ಜಾಗಬೇಕು. ಅಂದಾಗ ಸರ್ಕಾರಗಳು ಹಾಗೂ ಅಧಿಕಾರಿಗಳು ರೈತರ ನೆರವಿಗೆ ಬರುತ್ತಾರೆ. ಸಂಘಟನೆ ಕೇವಲ ಹುದ್ದೆ ನೀಡುವುದಲ್ಲ, ಅದರಿಂದ ರೈತರಿಗೆ ಅನಕೂಲವಾಗಬೇಕು. ಈ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳಾದ ನೀವು ನಿಮ್ಮ ಜವಾಬ್ದಾರಿಗಳನ್ನು ನಿಷ್ಠೆಯಿಂದ ಮಾಡಬೇಕು ಎಂದರು. ಸಭೆಯಲ್ಲಿ ಫಕ್ಕಿರೇಶ ಕಾಳಿ, ಸರೋಜಮ್ಮ ಕರ್ಜರಿ, ಗಿರಿಜಮ್ಮ ಕಾಸಂಬಿ, ಫಕ್ಕಿರೇಶ ಮಲಗುಂದ, ರಾಮನಗೌಡ ತರ್ಲಗಟ್ಟ, ಜಗದೇಶ ಕುಸಗೂರ ಇನ್ನಿತರರು ಇದ್ದರು.

ನೂತನ ಪದಾಧಿಕಾರಿಗಳು
ಉತ್ತರ ಕರ್ನಾಟಕ ರೈತ ಸಂಘದ ತಾಲೂಕು ಅಧ್ಯಕ್ಷರಾಗಿ ಫಕ್ಕೀರಗೌಡ ಗಾಜಿಗೌಡ್ರ ನೇಮಕಗೊಂಡರು. ಗೌರವಾಧ್ಯಕ್ಷ ಶಿವಾನಂದಪ್ಪ ಮತ್ತಿಹಳ್ಳಿ, ಕಾರ್ಯಾಧ್ಯಕ್ಷ ತೋಟಪ್ಪ ಹೊಸಳ್ಳಿ, ಉಪಾಧ್ಯಕ್ಷ ಬಸಪ್ಪ ಮೂಲಿಮನಿ, ಪ್ರಧಾನ ಕಾರ್ಯದರ್ಶಿ ಮಾಲತೇಶ ಬಡಿಗೇರ, ಸಹಕಾರ್ಯದರ್ಶಿ ನಾಗಪ್ಪ ರಾಮಜ್ಜನವರ, ಕುಮಾರ ಹರಮಗಟ್ಟಿ, ಸದಸ್ಯರಾಗಿ ಮಂಜುನಾಥ ಹಿರೇಮಠ. ಪ್ರಕಾಶ ಬೂಸನಗೌಡ್ರ, ಗದಿಗೆಪ್ಪ ಹಡಪದ, ಮಹೇಶ ಮಲ್ಲಾಡದ, ದುರಗಪ್ಪ ಹರಿಜನಮ ಷಣ್ಮುಖಪ್ಪ ಗಿರ್ಜಿ, ಮಾಲತೇಶ ಮಣ್ಣೂರ, ಜಗದೇಶ ಕೋಳೂರ, ಸಿದ್ದಪ್ಪ ಮಲ್ಲಪ್ಪನವರ ನೇಮಕಗೊಂಡರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.