ಫಲಾನುಭವಿಗಳಿಗೆ ತಲುಪುತ್ತಿಲ್ಲ ಮಾಸಾಶನ

ಬ್ಯಾಡಗಿ: ಅಂಚೆ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತನಿಖಾ ಅಧಿಕಾರಿ ಸಿ.ಪಿ.ಆಡೂರ ಮಾತನಾಡಿದರು.

Team Udayavani, May 1, 2019, 12:49 PM IST

haveri-2-tdy..

ಬ್ಯಾಡಗಿ: ಅಂಚೆ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತನಿಖಾ ಅಧಿಕಾರಿ ಸಿ.ಪಿ.ಆಡೂರ ಮಾತನಾಡಿದರು.

ಬ್ಯಾಡಗಿ: ಸಾಮಾಜಿಕ ಭದ್ರತೆ ಯೋಜನೆಯಡಿ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ಪ್ರತಿ ತಿಂಗಳು ಸರಿಯಾಗಿ ಹಣ ತಲುಪುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತನಿಖಾಧಿಕಾರಿ ಸಿ.ಪಿ.ಆಡೂರ ಎಚ್ಚರಿಸಿದರು.

ಅಣ್ಣಾ ಹಜಾರೆ ಭ್ರಷ್ಟಾಚಾರ ವಿರೋಧಿ ಜನಾಂದೋಲನ ಜಿಲ್ಲಾ ಘಟಕ ಲಿಖೀತ ದೂರು ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಅಂಚೆ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲೇ ಉತ್ತಮ ಇತಿಹಾಸ ಹೊಂದಿರುವ ಅಂಚೆ ಇಲಾಖೆಗೆ ಮಸಿಬಳಿಯುವಂಥ ಕೆಲಸ ಕೆಲವು ಪೋಸ್ಟ್‌ಮನ್‌ಗಳಿಂದಾಗುತ್ತಿದೆ. ಈ ವಿಷಯದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಸರ್ಕಾರದಿಂದ ಬಿಡುಗಡೆಗೊಳಿಸಿದ ಹಣವು ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದಲೇ ಅಂಚೆ ಇಲಾಖೆಯನ್ನು ಆಯ್ಕೆ ಮಾಡಿಕೊಂಡು ತನ್ಮೂಲಕ ಫಲಾನುಭವಿಗಳಿಗೆ ಹಣ ವಿತರಿಸಲಾಗುತ್ತಿದೆ. ಅದಾಗ್ಯೂ ಸಹ ನಿಯತ್ತಿಗೆ ಹೆಸರಾದಂತಹ ಅಂಚೆ ಇಲಾಖೆಯ ಮೇಲೆಯೇ ಸಾರ್ವಜನಿಕರು ದೂರು ನೀಡುವಂತಹ ಸ್ಥಿತಿ ಬಂದೊದಗಿರುವುದು ದುರದೃಷ್ಟಕರ ಸಂಗತಿ ಎಂದರು.

ಜಿಲ್ಲಾ ಘಟಕದ ಸಂಚಾಲಕ ಹಾಗೂ ಮಾಜಿ ಸೈನಿಕ ಮಲ್ಲೇಶಪ್ಪ ಚಿಕ್ಕಣ್ಣನವರ ಮಾತನಾಡಿ, ಅಂಚೆ ಇಲಾಖೆಯಲ್ಲಿ ಪಾರದರ್ಶಕತೆ ಮಾಯವಾಗಿದೆ. ವಯೋವೃದ್ಧರು, ವಿಕಲಚೇತನರು, ವಿಧವೆಯರಲ್ಲಿ ಬಹುತೇಕರು ಅನಕ್ಷರಸ್ಥರಾಗಿದ್ದಾರೆ. ಇದನ್ನೇ ದೌರ್ಬಲ್ಯವೆಂದು ಭಾವಿಸಿಕೊಂಡ ಅಂಚೆ ಇಲಾಖೆ ಸಿಬ್ಬಂದಿ ಪ್ರತಿ ತಿಂಗಳು ಹಣ ವಿತರಿಸದೇ ಮೂರ್‍ನಾಲ್ಕು ತಿಂಗಳಿಗೊಮ್ಮೆ ನೀಡುವ ಮೂಲಕ ಮೋಸವೆಸಗುತ್ತಿದ್ದಾರೆ ಎಂದು ದೂರಿದರು.

ಫರೀದಾಬಾನು ನದೀಮುಲ್ಲಾ, ಸುರೇಶ ಛಲವಾದಿ ಮಾತನಾಡಿ, ಯಾವ ತಿಂಗಳ ಹಣವನ್ನು ಪಡೆಯುತ್ತಿದ್ದೇವೆ ಎಂಬ ಮಾಹಿತಿ ಫಲಾನುಭವಿಗಳಿಗೆ ಮಾಹಿತಿ ಇಲ್ಲದಂತಾಗಿದೆ. ಹೀಗಾಗಿ ಫಲಾನುಭವಿಗಳ ಎರಡ್ಮೂರು ತಿಂಗಳ ಹಣ ಪೋಸ್ಟ್‌ಮನ್‌ರ ಜೇಬುಗಳಲ್ಲಿ ಉಳಿಯುತ್ತಿದೆ ಎಂದರು. ವಿಕಲಚೇತನರ ಸಂಘದ ತಾಲೂಕಾಧ್ಯಕ್ಷ ಪಾಂಡು ಸುತಾರ, ಅಂಚೆ ಕಚೇರಿಯ ಪೋಸ್ಟ್‌ ಮಾಸ್ಟರ್‌ ಎಚ್.ಯು. ಹಿತ್ತಲಮನಿ, ಎಸ್‌.ಎಂ. ಕೊರಕಲಿ, ಪಿರಾಂಬಿ, ಗುತ್ತೆವ್ವ ಹರಿಜನ ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.