ಕೃಷಿ ಕೂಲಿಕಾರರಿಗೆ ವಿಶೇಷ ಪ್ಯಾಕೇಜ್ ನೀಡಿ
Team Udayavani, May 24, 2020, 8:57 AM IST
ರಾಣಿಬೆನ್ನೂರ: ಕೃಷಿ ಕೂಲಿ ಕಾರ್ಮಿಕರಿಗೆ ವಿಶೇಷ ನೆರವು ನೀಡುವಂತೆ ಒತ್ತಾಯಿಸಿ ಮಾಕನೂರ ಗ್ರಾಪಂ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.
ರಾಣಿಬೆನ್ನೂರ: ಮಾಕನೂರಲ್ಲಿ ಕೋವಿಡ್ ಲಾಕ್ಡೌನ್ನಿಂದ ಅತಂತ್ರ ಪರಿಸ್ಥಿತಿಗೆ ಸಿಲುಕಿರುವ ಕೃಷಿ ಕೂಲಿಕಾರರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಮೂಲಕ ನೆರವು ನೀಡಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಮತ್ತು ಕೃಷಿ ಕೂಲಿಕಾರರು ಶನಿವಾರ ಪ್ರತಿಭಟನೆ ನಡೆಸಿ ಗ್ರಾಪಂ ಕಾರ್ಯದರ್ಶಿ ಚಂದ್ರಪ್ಪ ಬೇವಿನಮರದಗೆ ಮನವಿ ಸಲ್ಲಿಸಿದರು. ಗ್ರಾಪಂ ಸದಸ್ಯ ನಾಗಪ್ಪ ಬಾರ್ಕಿ ಮಾತನಾಡಿ, ರೈತರು ದೇಶದ ಬೆನ್ನೆಲುಬು ನಿಜ ಆದರೆ, ಅಂತಹ ರೈತನ ಹೆಗಲಿಗೆ ಹೆಗಲು ಕೊಟ್ಟು ಅವರ ಬೆನ್ನಿಗೆ ನಿಂತು ಜಮೀನುಗಳಲ್ಲಿ ದಿನಗೂಲಿಗಾಗಿ ಹಗಲಿರುಳು ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಕೃಷಿ ಕೂಲಿಕಾರರ ಬದುಕು ಅಕ್ಷರಶಃ ಬೀದಿಗೆ ಬಂದಂತಾಗಿದೆ ಎಂದರು. ದಿನಕ್ಕೆ 100 ರಿಂದ 200 ದಿನಗೂಲಿ ಪಡೆಯುವ ಕೃಷಿ ಕೂಲಿಕಾರರ ದೊಡ್ಡ ಸಮೂಹವಿದೆ. ಇವರ ಕಷ್ಟವನ್ನು ಪರಿಗಣಿಸದೆ ಕಡೆಗಣಿಸಲಾಗಿದೆ ಎಂದು ದೂರಿದರು.
ನರೇಂದ್ರ ನಾಯಕ ಮಾತನಾಡಿ, ರೈತರನ್ನೆ ನಂಬಿಕೊಂಡಿರುವ ನಮಗೆ ಬ್ಯಾಂಕ್ನಿಂದ ಸಾಲ ಸಿಗುವುದಿಲ್ಲ. ಸಂಘ ಇಲ್ಲವೆ ಕೈಗಡ ಸಾಲ ಪಡೆದು ತೀರಿಸಲಾಗದ ಅಸಹಾಯಕ ಸ್ಥಿತಿಗೆ ಬಂದಿರುವ ಕೃಷಿ ಜಮೀನಿನಲ್ಲಿ ದುಡಿಯುವ ಕೂಲಿಕಾರರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಈರಣ್ಣ ಹಲಗೇರಿ, ಕಾವ್ಯ ಊದಗಟ್ಟಿ, ಸಿಂಚನ ಚಿನ್ನಣ್ಣನವರ, ಮಮತಾ, ಗಂಗಮ್ಮ
ಬೆಳವಿಗಿ, ಬಸಮ್ಮ ಪೂಜಾರ, ರೇಣುಕಾ ತಾವರಗೊಂದಿ, ಮಾಲತೇಶ ಬುರಡಿಕಟ್ಟಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ