ಕೊಟ್ಟಿಗೇರಿಗೆ ಅಧಿಕಾರಿಗಳ ಭೇಟಿ
Team Udayavani, May 24, 2020, 8:55 AM IST
ಬಂಕಾಪುರ: ಅಪರ ಜಿಲ್ಲಾಧಿಕಾರಿ ಯೋಗೀಶ್ವರ ಹಾಗೂ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಕೊಟ್ಟಿಗೇರಿ ಪ್ರದೇಶ ಪರಿಶೀಲಿಸಿದರು.
ಬಂಕಾಪುರ: ಕೊಟ್ಟಿಗೇರಿ ಸೀಲ್ಡೌನ್ ಪ್ರದೇಶಕ್ಕೆ ಅಪರ ಜಿಲ್ಲಾಧಿಕಾರಿ ಯೋಗೀಶ್ವರ ಹಾಗೂ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ಸೀಲ್ಡೌನ್ಗೆ ಒಳಗಾದವರಿಗೆ ಅವಶ್ಯಕ ವಸ್ತುಗಳನ್ನು ಪುರೈಸಲಾಗುವುದು, ಅಲ್ಲದೇ ಜನರ ಆರೋಗ್ಯದ ಬಗ್ಗೆ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಆ ನಿಟ್ಟಿನಲ್ಲಿ ಫೇವರ್ ಕ್ಲೀನಿಕ್ನ್ನು ತೆರೆಯಲಾಗಿದೆ.
ಜನರ ಸಮಸ್ಯೆಗಳನ್ನು ಆಲಿಸಲು ಹರಿಜನಕೇರಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಟ್ರೋಲ್ ರೂಮ್ ಸ್ಥಾಪಿಸಲಾಗಿದೆ. ಅಲ್ಲದೇ ಸೀಲ್ಡೌನ್ ಪ್ರದೇಶದಿಂದ ಯಾರು ಹೊರಬರದಂತೆ ಹಾಗು ಒಳಪ್ರವೇಶಿಸದಂತೆ ಸೂಕ್ತ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಸೂಕ್ತ ಪೊಲೀಸ್ ಬಂದೋಬಸ್ತ ಅಳವಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಎ.ಸಿ. ಅನ್ನಪೂರ್ಣ ಮುದಕಮ್ಮನವರ, ತಹಶೀಲ್ದಾರ್ ಪ್ರಕಾಶ ಕುದರಿ, ಸಿಪಿಐ ಬಸವರಾಜ ಹಳಬಣ್ಣವರ, ಪಿಎಸ್ಐ ಸಂತೋಷಗೌಡ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ, ನೈರ್ಮಲ್ಯ ಅಧಿಕಾರಿ ರೂಪಾ ನಾಯಕ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ