11 ಜನ ಮಕ್ಕಳಿದ್ದರೂ ದಯಾಮರಣ ಕೋರಿ ರಾಷ್ಟ್ರಪತಿಗೆ ವೃದ್ಧ ತಾಯಿ ಮನವಿ
Team Udayavani, Sep 23, 2022, 7:50 AM IST
ಹಾವೇರಿ: ಹನ್ನೊಂದು ಜನ ಮಕ್ಕಳಿದ್ದರೂ ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಪತಿಯ ಆಸ್ತಿಯಲ್ಲೂ ಪಾಲು ಕೊಟ್ಟಿಲ್ಲ. ಇದರಿಂದ ಜೀವನವೇ ಬೇಸರವಾಗಿದೆ. ಹಾಗಾಗಿ ದಯಾಮರಣಕ್ಕೆ ಅವಕಾಶ ನೀಡಬೇಕೆಂದು ಕೋರಿ ರಾಣೆಬೆನ್ನೂರಿನ 78 ವರ್ಷದ ಪುಟ್ಟವ್ವ ಎಂಬವರು ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.
7 ಗಂಡು, 4 ಹೆಣ್ಣು ಮಕ್ಕಳಿದ್ದರೂ ಒಬ್ಬರೂ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. 25 ಎಕರೆ ಆಸ್ತಿಯಿದ್ದು, ಪಾಲು ನೀಡಲು ಒಪ್ಪುತ್ತಿಲ್ಲ. ಇದರಿಂದ ಜೀವನ ಸಾಗಿಸುವುದೇ ಕಷ್ಟವಾಗಿದೆ. ಅಕ್ಕಪಕ್ಕದ ಮನೆಯವರಿಂದ ಊಟೋಪಹಾರ ಪಡೆಯುವಂತಾಗಿದ್ದು, ಜೀವನವೇ ಸಾಕಾಗಿ ಹೋಗಿದೆ ಎಂದು ಕಣ್ಣೀರಿಟ್ಟರು. ಬಳಿಕ ಜಿಲ್ಲಾ ಧಿಕಾರಿಗಳ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದಯಾಮರಣ ಕೋರಿ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ