ಓಲೇಕಾರ ಮನವೊಲಿಸಿದ ಸಿಎಂ ಬೊಮ್ಮಾಯಿ


Team Udayavani, Oct 18, 2021, 7:04 PM IST

1-sasasa

 ಹಾವೇರಿ: ಹಾನಗಲ್ಲ ಉಪಚುನಾವಣೆ ಉಸ್ತುವಾರಿ ಜವಾಬ್ದಾರಿ ನೀಡಿದ್ದರೂ ಪ್ರಚಾರದಿಂದ ದೂರವೇ ಉಳಿದಿದ್ದ ಹಾವೇರಿ ಶಾಸಕ ನೆಹರು ಓಲೇಕಾರ ಅವರನ್ನು ರವಿವಾರ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದರು. ನಗರದಲ್ಲಿರುವ ಓಲೇಕಾರ ಅವರ ನಿವಾಸಕ್ಕೆ ಆಗಮಿಸಿ ಚುನಾವಣೆ ಪ್ರಚಾರ ಕುರಿತು ಚರ್ಚಿಸಿದರು. ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು ಗೆಲ್ಲಿಸಲು ಎಲ್ಲರೂ ಒಟ್ಟಾಗಿ ಪ್ರಚಾರದಲ್ಲಿ ತೊಡಗಬೇಕೆಂದು ಸಿಎಂ ಹೇಳಿದರು. ಉಸ್ತುವಾರಿ ಜವಾಬ್ದಾರಿ ನೀಡಿದ್ದರೂ ಇದುವರೆಗೆ ಶಾಸಕ ಓಲೇಕಾರ ಪ್ರಚಾರಕ್ಕೆ ತೆರಳಿರಲಿಲ್ಲ. ನಾಮಪತ್ರ ಸಲ್ಲಿಕೆ ದಿನವೂ ಹೋಗಿರಲಿಲ್ಲ. ಸಿಎಂ ಭೇಟಿ ಬಳಿಕ ವೈಮನಸ್ಸು ಮರೆತು ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ಓಲೇಕಾರ ತಿಳಿಸಿದ್ದಾರೆ. ಈ ವೇಳೆ ಸಂಸದ ಶಿವಕುಮಾರ ಉದಾಸಿ ಇದ್ದರು. ‌

ನನ್ನ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ ಉದಾಸಿ ಆಗಮಿಸಿದ್ದರು. ಬೇರೆ ಕೆಲಸ ಇದ್ದುದರಿಂದ ಪ್ರಚಾರಕ್ಕೆ ಹೋಗಿರಲಿಲ್ಲ. ಹಾನಗಲ್ಲ ಉಪ ಚುನಾವಣೆಯಲ್ಲಿ ಪಕÒ‌ದ ಅಭ್ಯರ್ಥಿ ಗೆಲ್ಲಿಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು. ಯಡಿಯೂರಪ್ಪ ಅವರು ಪ್ರಚಾರಕ್ಕೆ ಬಂದಾಗ ನಾನು ಪಾಲ್ಗೊಳ್ಳುತ್ತೇನೆ. ನೆಹರು ಓಲೇಕಾರ, ಹಾವೇರಿ ಶಾಸಕ

 ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದ ಪ್ರಚಾರ

ಹಾನಗಲ್ಲ: ಹಾನಗಲ್ಲ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ರವಿವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಸಚಿವರು, ಬಿಜೆಪಿ ನಾಯಕರ ದಂಡು ಸೇರುವ ಮೂಲಕ ಉಪಚುನಾವಣೆ ರಣಕಹಳೆ ಮೊಳಗಿಸಿದರು.ಹುಬ್ಬಳ್ಳಿಯಿಂದ ಹಾವೇರಿಗೆ ಆಗಮಿಸಿದ ಸಿಎಂ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಾನಗಲ್ಲಗೆ ತೆರಳಿದರು. ಮಾರ್ಗಮಧ್ಯೆ ಅಕ್ಕಿಆಲೂರಿನ ಮುತ್ತಿನಕಂತಿಮಠಕ್ಕೆ ಭೇಟಿ ನೀಡಿ ಚಂದ್ರಶೇಖರ ಶಿವಾಚಾರ್ಯ ಶ್ರೀಗಳಿಂದ ಆಶೀರ್ವಾದ ಪಡೆದರು. ಬಳಿಕ ನೇರವಾಗಿ ಹಾನಗಲ್ಲಗೆ ಆಗಮಿಸಿ ಸಂಸದ ಶಿವಕುಮಾರ ಉದಾಸಿ ಅವರ ಮನೆಯಲ್ಲಿ ರಾಜ್ಯಾಧ್ಯಕ್ಷ ಕಟೀಲ್‌, ಸಚಿವರಾದ ಬಿ.ಸಿ. ಪಾಟೀಲ, ಮುನಿರತ್ನ, ಮಾಧುಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದರು. ನಂತರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕ್ಷೇತ್ರದ ಅಪಾರ ಜನಸ್ತೋಮ ಸೇರಿಸಿ ಶಕ್ತಿ ಪ್ರದರ್ಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.