![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಪರೋಪಕಾರಿ ಸೇವೆಯೊಂದೇ ಶಾಶ್ವತ: ಜಮಖಾನೆ
Team Udayavani, May 2, 2019, 3:41 PM IST
![hav-2](https://www.udayavani.com/wp-content/uploads/2019/05/hav-2-620x233.jpg)
ರಾಣಿಬೆನ್ನೂರ: ‘ಪರೋಪಕಾರಂ ಇದಂ ಶರೀರಂ’ ಎಂಬಂತೆ ದೇಶ ಸೇವೆಯೇ ಈಶ ಸೇವೆಯಾಗಿದೆ, ಪರೋಪಕಾರಿಯ ಸಮಾಜ ಸೇವೆಯು ಶಾಶ್ವತವಾಗಿ ಉಳಿಯುತ್ತದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಎ. ಜಮಖಾನೆ ಹೇಳಿದರು.
ಇಲ್ಲಿನ ಬಿಸಿಎಂ ಇಲಾಖೆಯಲ್ಲಿ ಏರ್ಪಡಿಸಿದ್ದ ನಿಲಯ ಮೇಲ್ವಿಚಾರಕ ಕೆಂಜೋಡೆಪ್ಪ ಭಜಂತ್ರಿ ಅವರ ಸೇವಾ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಎಲ್ಲರೂ ಸಮಾಜಕ್ಕೆ ಒಳಿತಾಗುವ ಹಾಗೂ ಇತರರಿಗೆ ಮಾದರಿಯಾಗುವ ಉತ್ತಮ ಕೆಲಸ ಮಾಡಬೇಕು ಎಂದರು.
ದಿನನಿತ್ಯ ಕೋಟ್ಯಾಂತರ ಜನ ಹುಟ್ಟುತ್ತಾರೆ..ಲಕ್ಷಾಂತರ ಜನ ಸಾಯುತ್ತಾರೆ. ಈ ಮಧ್ಯೆ ಉತ್ತಮ ಜೀವನ ಮಾಡಿ, ದೇಶಕ್ಕೆ ಮಾದರಿ ಆದವರೂ ಇದ್ದಾರೆ, ದೇಶದ್ರೋಹಿ ಕೆಲಸ ಮಾಡಿದವರೂ ಇದ್ದಾರೆ. ಇದರಲ್ಲಿ ಆದರ್ಶರಾಗಿ ಬಾಳಿ ಬದುಕಿದವರ ಮಾರ್ಗದರ್ಶನದಲ್ಲಿಯೇ ಮುಂದುವರೆಯಬೇಕು ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ನಿಲಯ ಮೇಲ್ವಿಚಾರಕ ಕೆಂಜೊಡೆಪ್ಪ ಭಜಂತ್ರಿ, ನನ್ನ ಸುದೀರ್ಘ ಸೇವೆಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ನನಗಿದೆ. ದೇವರವನ್ನು ಸ್ಮರಿಸಿ ಆತ್ಮಸಾಕ್ಷಿಯಾಗಿ ಕೆಲಸ ಮಾಡಿರುವೆ. ಜೀವನದಲ್ಲಿ ಅನೇಕ ಸಿಹಿ, ಕಹಿ ಘಟನೆಗಳನ್ನು ಅನುಭವಿಸಿದ್ದೇನೆ. ನನ್ನ ಸಹೋದ್ಯೋಗಿಗಳು ಸಹ ಉತ್ತಮ ಸೇವೆ ಸಲ್ಲಿಸುವ ಮೂಲಕ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಕೆಂಜೋಡೆಪ್ಪ ಭಜಂತ್ರಿ ದಂಪತಿಗೆ ವಿವಿಧ ಇಲಾಖೆ ಸಿಬ್ಬಂದಿ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ನಿಲಯ ಮೇಲ್ವಿಚಾರಕರು ಸನ್ಮಾನಿಸಿದರು.
ಕೆ.ಸಿ ಭಜಂತ್ರಿ, ಆರ್.ಎಂ.ಕನವಳ್ಳಿ, ಶಾಂತಪ್ಪ ಸಾವಕಾರ, ವೈ.ಐ. ಕೊರವರ, ರಾಜಶೇಖರ ಪಾರ್ವತೇರ, ಶಾಂತವ್ವ ಭಜಂತ್ರಿ, ಎಸ್.ಕೆ.ಹಾವನೂರ, ಎಚ್.ಎಚ್.ಓಲೇಕಾರ, ಗಿರೀಶ ಮೂಡಿಯವರ, ಶಶಿಭೂಷಣ ಕಡಕೋಳ, ಮಂಜುನಾಥ ಎಂ.ಕೆ., ಪ್ರಸಾದ ಆಲದಕಟ್ಟಿ, ಭೋಸ್ಲೆ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್](https://www.udayavani.com/wp-content/uploads/2024/07/9-16-150x90.jpg)
Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್
![Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು](https://www.udayavani.com/wp-content/uploads/2024/07/haveri-3-150x83.jpg)
Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು
![4-haveri](https://www.udayavani.com/wp-content/uploads/2024/07/4-haveri-150x90.jpg)
Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು
![ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ](https://www.udayavani.com/wp-content/uploads/2024/07/Haveri-2-150x62.jpg)
ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ
![Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು](https://www.udayavani.com/wp-content/uploads/2024/07/haveri-1-150x92.jpg)
Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.