ಅಧಿವೇಶನದಲ್ಲಿ ಒಂಟಿಗಾಲಲ್ಲಿ ನಿಲ್ಲುವಂತೆ ಮಾಡ್ತೇನೆ: ಬಿಎಸ್ವೈ
Team Udayavani, Mar 4, 2017, 3:50 AM IST
ಹಾವೇರಿ/ ಹುಬ್ಬಳ್ಳಿ: “ಇನ್ನು 15-20 ದಿನಗಳಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಂಪುಟದ ಸಚಿವರ ಜಾತಕವನ್ನು ಜಾಲಾಡಿ ಅವರ ಮಾನ ಹರಾಜು ಹಾಕುತ್ತೇನೆ. ಮುಂದಿನ ಅಧಿವೇಶನಲ್ಲಿ ಎಲ್ಲರೂ ಒಂಟಿಗಾಲಲ್ಲಿ ನಿಲ್ಲುವಂತೆ ಮಾಡುತ್ತೇನೆ. ನಾನು ಯಾವುದೇ ಬೆದರಿಕೆಗೆ ಜಗ್ಗಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಗುಡುಗಿದರು.
ಹಾವೇರಿಯಲ್ಲಿ ಶುಕ್ರವಾರ ಬಿಜೆಪಿ ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿ, “ಡೈರಿಯಂತೆ ಸದ್ಯದಲ್ಲಿಯೇ ಇನ್ನೊಂದು ದೊಡ್ಡ ಬಾಂಬ್ ಸಿಡಿಸುತ್ತೇನೆ. ಬಿಬಿಎಂಪಿಯಲ್ಲಿ ಎಲ್ಲ ಖದೀಮರು ಸೇರಿ 3000 ಕೋಟಿಗೂ ಅಧಿಕ ಹಣ ಲೂಟಿ ಮಾಡಿದ್ದಾರೆ. ಅದನ್ನು ದಾಖಲೆ ಸಹಿತ ಬಿಡುಗಡೆ ಮಾಡುತ್ತೇನೆ’ ಎಂದು ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ಉಕ್ಕಿನ ಸೇತುವೆ ನಿರ್ಮಾಣವನ್ನು ಹಿಂಪಡೆದು ಕಾಂಗ್ರೆಸ್ ತನ್ನ ತಪ್ಪನ್ನು ಒಪ್ಪಿಕೊಂಡಿದೆ. ಡೈರಿ ಪ್ರಕರಣ ಸುಳ್ಳಾದರೆ ನಾನು ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಇಲ್ಲವಾದರೆ ಸಿಎಂ ರಾಜೀನಾಮೆ ನೀಡುತ್ತಾರೆಯೇ?’ ಎಂದು ಸವಾಲು ಹಾಕಿದರು.
ಅಲ್ಲದೆ ಚೆಕ್ ಮುಖಾಂತರ ನಾನು ಪಕ್ಷದ ಹೈಕಮಾಂಡ್ಗೆ ಕಪ್ಪ ಸಲ್ಲಿಸಿರುವ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಬಳಿ ದಾಖಲೆಗಳಿವೆ ಎಂದಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ತಕ್ಷಣ ಅವುಗಳನ್ನು ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.
ನಾಲ್ಕೈದು ತಿಂಗಳಲ್ಲಿ ಚುನಾವಣೆ
ರಾಜ್ಯದ ಮುಖ್ಯಮಂತ್ರಿ, ಸಚಿವರು ಪಕ್ಷದ ರಾಷ್ಟ್ರೀಯ ನಾಯಕರಿಗೆ ರಾಜ್ಯದ ಜನರ 600-700 ಕೋಟಿ ರೂ. ಕೊಟ್ಟಿದ್ದಾರೆ. ಇವೆಲ್ಲವೂ ಡೈರಿಯಲ್ಲಿ ಬಹಿರಂಗಗೊಂಡಿದೆ. ಸಿಬಿಐ ತನಿಖೆ ನಡೆದು ಈ ಕಳ್ಳರು ಸಿಕ್ಕಿಬಿದ್ದರೆ ನಾಲ್ಕೈದು ತಿಂಗಳಲ್ಲಿಯೇ ಚುನಾವಣೆ.
– ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ