ನಗರಸಭೆ ನೂತನ ಕಟ್ಟಡ ಉದ್ಘಾಟನೆಗೆ ವಿರೋಧ
ಸದಸ್ಯರನ್ನು ಕಡೆಗಣಿಸಿದ ಅಧಿಕಾರಿಗಳು-ಆರೋಪ
Team Udayavani, Jul 27, 2019, 2:10 PM IST
ಹಾವೇರಿ: ಶಾಸಕ ನೆಹರು ಓಲೇಕಾರ ನಗರಸಭೆ ನೂತನ ಕಟ್ಟಡ ಉದ್ಘಾಟಿಸಿದರು.
ಹಾವೇರಿ: ನೂತನವಾಗಿಐದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಹಾವೇರಿ ನಗರಸಭೆ ಕಟ್ಟಡವನ್ನು ನಗರಸಭೆ ಸದಸ್ಯರಿಗೆ ಗೊತ್ತಿಲ್ಲದಂತೆ ತರಾತುರಿಯಲ್ಲಿ ಉದ್ಘಾಟಿಸಿದ್ದರಿಂದ ಸದಸ್ಯರು ಕಪ್ಪು ಪಟ್ಟಿ ಧರಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕಟ್ಟಡ ಉದ್ಘಾಟಿಸಿದ ಶಾಸಕ ನೆಹರು ಓಲೇಕಾರ ಹಾಗೂ ಅಧಿಕಾರಿಗಳ ಕ್ರಮ ಖಂಡಿಸಿದ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕಳೆದ ಸೆಪ್ಟೆಂಬರ್ನಲ್ಲಿ ನಡೆದ ನಗರಸಭೆ ಚುನಾವಣೆಯಲ್ಲಿ ಆಯ್ಕೆಯಾಗಿದ್ದರೂ ಸದಸ್ಯರ ಪದಗ್ರಹಣ ಇನ್ನೂ ಆಗಿಲ್ಲ, ಅಧಿಕಾರ ಸ್ವೀಕಾರ ಬಳಿಕ ನಗರಸಭೆ ಕಟ್ಟಡ ಉದ್ಘಾಟನೆ ಮಾಡುವಂತೆ ಸದಸ್ಯರು ಹಿಂದಿನಿಂದಲೂ ಒತ್ತಾಯಿಸುತ್ತಲೇ ಬಂದಿದ್ದು, ಶುಕ್ರವಾರ ಸದಸ್ಯರಿಗೆ ಮಾಹಿತಿ ನೀಡದೇ ಏಕಾಏಕಿ ಕಟ್ಟಡ ಉದ್ಘಾಟನೆ ಸಮಾರಂಭ ಆಯೋಜಿಸಲಾಗಿದೆ ಎಂದು ಸದಸ್ಯರು ಆರೋಪಿಸಿದರು.
ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಮಾತನಾಡಿ, ನಗರಸಭೆ ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇಲ್ಲದ ಸಮಯದಲ್ಲಿ ಕಟ್ಟಡ ಉದ್ಘಾಟಿಸಿರುವುದು ಬೇಸರದ ಸಂಗತಿ. ಅಲ್ಲದೇ ಕಟ್ಟಡ ಉದ್ಘಾಟನೆ ಕುರಿತು ಇಂದು ಮಧ್ಯಾಹ್ನ ಆಮಂತ್ರಣ ಪತ್ರಿಕೆ ತಲುಪಿಸಿ ಅಧಿಕಾರಿಗಳು ಸದಸ್ಯರಿಗೆ ಅಗೌರವ ತೋರಿದ್ದಾರೆ. ಐದು ಕೋಟಿ ರೂ. ವೆಚ್ಚದ ಕಟ್ಟಡವನ್ನು ಸಚಿವರನ್ನು ಕರೆಸಿ ಉದ್ಘಾಟಿಸಬೇಕಿತ್ತು. ಈ ಕಟ್ಟಡ ನಿರ್ಮಾಣಕ್ಕೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಸೇರಿದಂತೆ ಅನೇಕರು ಶ್ರಮಿಸಿದ್ದರು. ಅವರಿಗೆಲ್ಲ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯವಾಗಿತ್ತು ಎಂದರು.
ಪ್ರತಿಭಟನೆಯಲ್ಲಿ ಐ.ಯು. ಪಠಾಣ, ಗಣೇಶ ಬಿಷ್ಟಣ್ಣನವರ, ಮಲ್ಲಿಕಾರ್ಜುನ ಸಾತೇನಹಳ್ಳಿ, ರವಿ ದೊಡ್ಡಮನಿ, ವೆಂಕಟೇಶ ಬಿಜಾಪುರ, ದಾದಾಪೀರ ಚೂಡಿಗಾರ, ಉಮೇಶ ಕುರುಬರ ಸೇರಿದಂತೆ ನಗರಸಭೆ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ