ಕನ್ನಡ ಅಭಿವೃದ್ಧಿಗೆ ಹೊರಡಿಸಿ ಅಧ್ಯಾದೇಶ


Team Udayavani, Jan 8, 2023, 6:30 AM IST

ಕನ್ನಡ ಅಭಿವೃದ್ಧಿಗೆ ಹೊರಡಿಸಿ ಅಧ್ಯಾದೇಶ

ಹಾವೇರಿ: ಈ ಬಾರಿಯ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿಯೇ ಸರಕಾರ ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ಮಸೂದೆ ಮಂಡಿಸಿ ಕಾನೂನು ರೂಪಿಸಬೇಕಿತ್ತು. ಆದರೆ, ಸದನದಲ್ಲಿ ಈ ವಿಧೇಯಕ ಮಂಡನೆ ಯಾಗಿಲ್ಲ. ಸರಕಾರ ತಡ ಮಾಡದೆ ಅಧ್ಯಾದೇಶ ಮೂಲಕ ಮಸೂದೆ ಜಾರಿಗೆ ಮುಂದಾಗಬೇಕು ಎಂದು ಹಿರಿಯ ನ್ಯಾಯವಾದಿ ಅಶೋಕ್‌ ಹಾರನಹಳ್ಳಿ ಒತ್ತಾಯಿಸಿದರು.

86ನೇ ಸಾಹಿತ್ಯ ಸಮ್ಮೇಳನದ ಪಾಪು -ಚಂಪಾ ವೇದಿಕೆಯಲ್ಲಿ ಶನಿವಾರ ನಡೆದ “ಕನ್ನಡಪರ ಮತ್ತು ಪ್ರಗತಿಪರ ವರದಿಗಳ ಅನುಷ್ಠಾನ’ ಗೋಷ್ಠಿಯಲ್ಲಿ ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ಮಸೂದೆಯ ಕಾನೂನು ಚಿಂತನೆ ವಿಷಯದ ಕುರಿತು ಅವರು ಮಾತನಾಡಿದರು.

ರಾಜ್ಯ ಸರಕಾರ 1963ರಲ್ಲಿ ರಾಜ್ಯ ಭಾಷಾ ಅಧಿನಿಯಮ ಜಾರಿಗೆ ತಂದಿದೆ. ಗೋಕಾಕ್‌, ಸರೋಜಿನಿ ಮಹಿಷಿ, ನರ ಸಿಂಹಯ್ಯ, ರಾಜಾ ರಾಮಣ್ಣ, ವಿ.ಎಸ್‌.ಆಚಾರ್ಯ ಸೇರಿದಂತೆ ಅನೇಕ ಮಹನಿಯರು ಕನ್ನಡ ಭಾಷೆಯ ಪರ ವರದಿಗಳನ್ನು ನೀಡಿದ್ದಾರೆ. ಆದರೆ ಯಾವುದೂ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಿಲ್ಲ. ಹೀಗಾಗಿ ಈ ಅ ಧಿನಿಯಮಕ್ಕೆ ಬದಲಾವಣೆ ತರುವುದು ಅಗತ್ಯವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಮಸೂದೆಯ ಜಾರಿ ಕುರಿತು ಹೆಚ್ಚಿನ ಒಲವು ಹೊಂದಿದ್ದಾರೆ ಎಂದರು.

ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ಮಸೂದೆಯಲ್ಲಿ ರಾಜ್ಯ ಭಾಷಾ ಆಯೋಗದ ರಚನೆ, ರಾಜ್ಯ ಭಾಷಾ ಸಮಿತಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳ ರಚನೆ ಕುರಿತು ಪ್ರಸ್ತಾವಿಸಲಾಗಿದೆ. ಈ ಸಮಿತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯ, ಜಿಲ್ಲೆ ಹಾಗೂ ತಾಲೂಕುಗಳ ಅಧ್ಯಕ್ಷರನ್ನು ನೇಮಿಸಿಕೊಳ್ಳುವಂತೆ ಸರಕಾರಕ್ಕೆ ಸಲಹೆ ನೀಡಿದ್ದೇನೆ ಎಂದರು.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ಡಾ| ಕೆ. ಮುರ ಳೀಧರ ಮಾತನಾಡಿ, ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವ ಕಾರಣ ರಾಜ್ಯ ಸರಕಾರ ಪ್ರಾಥಮಿಕ ಹಂತದಲ್ಲಿ ಕನ್ನಡ ಭಾಷೆ ಯನ್ನು ಕಡ್ಡಾಯಗೊಳಿಸಲು ಸಾಧ್ಯವಾ ಗು ತ್ತಿಲ್ಲ. ಇಂದು ಶೇ.70ರಷ್ಟು ಖಾಸಗಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಶೇ.30ರಷ್ಟು ಮಾತ್ರ ಸರಕಾರಿ ಶಾಲೆಗಳು ಉಳಿದಿವೆ. ಈ ಸಂದರ್ಭದಲ್ಲಿ ಸರಕಾರ ವಿಭಿನ್ನ ರೀತಿಯ ಕಾನೂನುಗಳನ್ನು ಜಾರಿಗೆ ತರಬೇಕಾದ ಪರಿಸ್ಥಿತಿಯಿದೆ ಎಂದರು.

ಕಚೇರಿಗಳಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಲಾಗಿದೆ. ಆದರೆ, ರಾಜ್ಯ ಹೈಕೋರ್ಟ್‌ ನಲ್ಲಿ ಕನ್ನಡ ಭಾಷೆ ಬಳಕೆಯಾಗುವುದಿಲ್ಲ. ಇದರಿಂದ ಕನ್ನಡರಿಗೆ ತೊಂದರೆಯಾಗಿದೆ. ರಾಜ್ಯ ಸರಕಾರ ರೂಪಿಸುವ ನೀತಿ -ನಿಯಮಗಳಲ್ಲಿ ಕನ್ನಡ ಕುರಿತ, ಕನ್ನಡ ಕೇಂದ್ರಿತ ಚಿಂತನೆ ಇರಬೇಕು ಎಂದರು. ಡಾ| ವೀರಣ್ಣ ರಾಜೂರು ಗೋಷ್ಠಿ ಅಧ್ಯಕ್ಷತೆ ವಹಿಸಿದ್ದರು.

ಸೋಮಶೇಖರ್‌ ಜಮಶೆಟ್ಟಿ ಸ್ವಾಗತಿ ಸಿದರು. ಮಲ್ಲಿಕಾರ್ಜುನ ಶಾಂತಗಿರಿ ನಿರೂಪಿಸಿದರು. ಬಸವರೆಡ್ಡಿ ಪಾಟೀಲ್‌ ವಂದಿಸಿದರು. ಗೊರಳ್ಳಿ ಜಗದೀಶ್‌ ನಿರ್ವಹಿಸಿದರು.

ಸಾಮಾಜಿಕ ಬದಲಾವಣೆ: ಹೆಗ್ಡೆ
ಎಲ್‌.ಜಿ. ಹಾವನೂರು ವರದಿಯ ಸಂಪೂರ್ಣ ಅನುಷ್ಠಾನದಿಂದಾಗಿ ರಾಜ್ಯದಲ್ಲಿ ಸಾಮಾಜಿಕ ಬದಲಾವಣೆ ಉಂಟಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಎಲ್‌.ಜಿ.ಹಾವನೂರು ನೇತೃತ್ವದ ಆಯೋಗ ರಾಜ್ಯದ 180 ನಗರ ಹಾಗೂ 190 ಗ್ರಾಮೀಣ ಭಾಗದ ಬ್ಲಾಕ್‌ಗಳಲ್ಲಿ ಸಂಚರಿಸಿ 63 ಸಾವಿರ ಕುಟುಂಬಗಳ ಮೂರು ಲಕ್ಷ ಹಿಂದುಳಿದ ವರ್ಗಗಳ ಜನರ ಸಮೀಕ್ಷೆ ನಡೆಸಿತ್ತು. 1972ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾನದಂಡ ಆಧರಿಸಿ ಹಿಂದುಳಿದ ವರ್ಗಗಳ ಜಾತಿಗಳನ್ನು ಹಿಂದುಳಿದ, ಅತಿ ಹಿಂದುಳಿದ ಹಾಗೂ ಅತ್ಯಂತ ಹಿಂದುಳಿದ ಜಾತಿ ಎಂದು ವಿಭಾಗ ಮಾಡಿತು ಎಂದರು.

ಎಲ್‌.ಜಿ.ಹಾವನೂರು ಅವರು ಹಿಂದುಳಿದ ವರ್ಗಗಳ ಏಳ್ಗೆಗೆ ನೀಡಿದ ಕೊಡುಗೆಯನ್ನು ಗಮನಿಸಿ ನೆಲ್ಸನ್‌ ಮಂಡೇಲಾ ಅವರು ದಕ್ಷಿಣ ಆಫ್ರಿಕಾದ ಸಂವಿಧಾನ ರಚನೆಯ ಸಲಹೆಗಾರರನ್ನಾಗಿ ಹಾವನೂರು ಅವರನ್ನು ನೇಮಿಸಿದರು. ಇದು ನಾವೆಲ್ಲ ಹೆಮ್ಮೆ ಪಡಬೇಕಾದ ವಿಷಯ ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.