ಹಾವೇರಿ ನಗರಸಭೆ ಆದಾಯಕ್ಕೆ ‘ವರದಾ’ನ

ತ್ಯಾಜ್ಯದಲ್ಲಿ ಸಾವಯವ ಗೊಬ್ಬರ ತಯಾರಿಸಲು ಸಿದ್ಧತೆ! 1, 5, 10, 25 ಕೆ.ಜಿ ಬ್ಯಾಗ್‌ ತಯಾರಿಸಿ ಮಾರಾಟ ಕ್ಕೆ ಯೋಜನೆ !

Team Udayavani, Apr 20, 2021, 8:19 PM IST

hgfhdfh

ವರದಿ : ವೀರೇಶ ಮಡ್ಲೂರ

ಹಾವೇರಿ: ಸ್ಥಳೀಯ ನಗರಸಭೆ ಈಗ ಕಸದಲ್ಲಿಯೇ ರಸ ತೆಗೆದು ನಗರಸಭೆ ಆದಾಯ ಹೆಚ್ಚಿಸಿಕೊಳ್ಳಲು ಮುಂದಾಗಿದ್ದು, ಮನೆ-ಮನೆಯಿಂದ ಸಂಗ್ರಹಿಸಿದ ತ್ಯಾಜ್ಯದಲ್ಲಿ ಸಾವಯವ ಗೊಬ್ಬರ ತಯಾರಿಸಿ “ವರದಾ ರಸಗೊಬ್ಬರ’ ಎಂಬ ಬ್ರ್ಯಾಂಡ್‌ನ‌ಡಿ ಮಾರಾಟ ಮಾಡಿ ಆದಾಯ ತರುವಲ್ಲಿ ನಗರಸಭೆ ಸಿದ್ಧತೆ ನಡೆಸಿದೆ.

ತಾಲೂಕಿನ ಗೌರಾಪುರದ ಗುಡ್ಡದಲ್ಲಿರುವ 10 ಎಕರೆ ಜಾಗೆಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಬಹುವರ್ಷಗಳ ಹಿಂದೆಯೇ ಸ್ಥಾಪಿಸಲಾಗಿತ್ತು. ನಗರದಿಂದ ಹತ್ತಾರು ಕಿ.ಮೀ ದೂರದಲ್ಲಿದ್ದ ಘಟಕಕ್ಕೆ ನಗರದಲ್ಲಿ ಸಂಗ್ರಹಿಸುವ ತ್ಯಾಜ್ಯವನ್ನು ನಿತ್ಯ ಟ್ರ್ಯಾಕ್ಟರ್‌ ಗಳ ಮೂಲಕ ಸಂಗ್ರಹಿಸಿಕೊಂಡು ಹೋಗಿ ಸುರಿದು ಬರಲಾಗುತ್ತಿತ್ತು. ಕೆಲವೊಮ್ಮೆ ಟ್ರ್ಯಾಕ್ಟರ್‌ ಚಾಲಕರು ನಗರದ ಹೊರಭಾಗದಲ್ಲಿಯೇ ತ್ಯಾಜ್ಯ ಸುರಿದು ಹೋಗುತ್ತಿದ್ದರು. ಇದರಿಂದ ನಗರಸಭೆಗೆ ಅನೇಕ ದೂರು ಬರುತ್ತಿದ್ದವು. ಈ ಬಗ್ಗೆ ಎಷ್ಟು ಸೂಚನೆ ನೀಡಿದರೂ ಈ ಪ್ರಕ್ರಿಯೆ ನಿಂತಿರಲಿಲ್ಲ. ಹೀಗಾಗಿ ನಗರದಲ್ಲಿನ ತ್ಯಾಜ್ಯ ವಿಲೇವಾರಿಯದ್ದು ಬಹು ದೊಡ್ಡ ಸಮಸ್ಯೆಯೇ ಆಗಿತ್ತು. ಇದೀಗ ತ್ಯಾಜ್ಯದಿಂದ ರಸಗೊಬ್ಬರ ತಯಾರಿಕೆ ಪ್ರಕ್ರಿಯೆ ಆರಂಭಗೊಂಡ ನಂತರ ನಿತ್ಯ ನಗರದಿಂದ ಎಷ್ಟು ಕಸ ಸಂಗ್ರಹವಾಗುತ್ತದೆ.

ಎಷ್ಟು ವಾಹನಗಳು ಅದನ್ನು ತ್ಯಾಜ್ಯ ವಿಲೇವಾರಿ ಘಟಕಕ್ಕೆ ತರುತ್ತವೆ ಎಂಬ ಲೆಕ್ಕ ಹಾಕಲಾಗುತ್ತಿದೆ. ಇದರಿಂದ ನಗರದ ಹೊರಭಾಗದಲ್ಲಿ ತ್ಯಾಜ್ಯ ಸುರಿದು ಹೋಗುವ ಸಮಸ್ಯೆಯೂ ತಪ್ಪಿದೆ. ಸಾವಯವ ಗೊಬ್ಬರ ತಯಾರಿ: ನಗರಸಭೆ ನಗರದಲ್ಲಿನ ಮನೆ-ಮನೆಯಿಂದ ಸಂಗ್ರಹಿಸುವ ಹಸಿ ಕಸ ಹಾಗೂ ಚರಂಡಿ ತ್ಯಾಜ್ಯದಿಂದ ಸಾವಯವ ಗೊಬ್ಬರ ತಯಾರಿಸಲಾಗುತ್ತಿದೆ. ಇದಕ್ಕೆ ಬೇಕಾದ ಯಂತ್ರವನ್ನು ಈಗಾಗಲೇ ಅಲ್ಲಿ ಸ್ಥಾಪಿಸಲಾಗಿದೆ. ಮನೆಯಿಂದ ಸಂಗ್ರಹಿಸುವ ಹಸಿ ಕಸ ಆರಂಭದಲ್ಲಿಯೇ ಬೇರ್ಪಡಿಸಿ ಪ್ರತ್ಯೇಕವಾಗಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತದೆ. ಹೀಗೆ ಬಂದ ಕಸ ಸಾವಯವ ಗೊಬ್ಬರ ತಯಾರಿಕೆ ತೊಟ್ಟಿಯಲ್ಲಿ ಹಾಕಿ ಎರೆಹುಳು ಬಿಟ್ಟು ಕೊಳೆಸಿ ಗೊಬ್ಬರ ತಯಾರಿಸಲಾಗುತ್ತಿದೆ. ಇನ್ನು ನಗರದಲ್ಲಿನ ಮಾರುಕಟ್ಟೆ, ಚರಂಡಿಗಳಲ್ಲಿ ದೊಡ್ಡ ಮಟ್ಟದಲ್ಲಿ ಬರುವ ತ್ಯಾಜ್ಯ ಪ್ರತ್ಯೇಕವಾಗಿ ಸಂಗ್ರಹಿಸಿ ಅದು ಕೊಳೆತು ಒಣಗಿದ ಮೇಲೆ ಯಂತ್ರಗಳ ಸಹಾಯದಿಂದ ಗೊಬ್ಬರ ಪ್ರತ್ಯೇಕಿಸಲಾಗುತ್ತಿದೆ.

ಗೊಬ್ಬರ ಬ್ಯಾಗ್‌ ತಯಾರಿ: ಕಳೆದ ಮಾರ್ಚ್‌ನಿಂದ ಗೊಬ್ಬರ ತಯಾರಿಕೆ ಘಟಕ ಆರಂಭವಾಗಿದ್ದು, ಈಗಾಗಲೇ ಹತ್ತಾರು ಟನ್‌ ಗೊಬ್ಬರ ಉತ್ಪಾದನೆಯಾಗಿದೆ. ಅದರ ಮಾರಾಟಕ್ಕೂ ನಗರಸಭೆ ಚಿಂತನೆ ನಡೆಸಿದೆ. ಅಲ್ಲದೇ ವರದಾ ಸಾವಯವ ರಸಗೊಬ್ಬರ ಎಂಬ ಹೆಸರಿಟ್ಟು 1 ಕೆ.ಜಿ, 5 ಕೆ.ಜಿ, 10 ಕೆ.ಜಿ, 25 ಕೆ.ಜಿ ಬ್ಯಾಗ್‌ ತಯಾರಿಸಿ ಮಾರಾಟ ಮಾಡಲು ಯೋಜನೆ ಸಿದ್ಧಗೊಂಡಿದೆ. ಸದ್ಯ ರಸಗೊಬ್ಬರವನ್ನು ಕೆ.ಜಿಗೆ 3 ರಿಂದ 5 ರೂ. ದರದಲ್ಲಿ ಮಾರಾಟ ಮಾಡಲು ಚಿಂತನೆ ನಡೆಸಲಾಗಿದೆ. ನಗರಸಭೆ ಪಕ್ಕದಲ್ಲೇ ಒಂದು ಮಳಿಗೆ ತೆರೆದು ಮಾರಾಟ ಮಾಡಲು ಉದ್ದೇಶಿಸಲಾಗಿದೆ.

ಟಾಪ್ ನ್ಯೂಸ್

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.