ಕಂದಾಯ ಇಲಾಖೆ ಸಿಬ್ಬಂದಿ ವರ್ತನೆಗೆ ಆಕ್ರೋಶ

ಜನರ ಕೆಲಸಗಳನ್ನು ಸರಿಯಾಗಿ ನಿರ್ವಹಿಸಿ ಎಂದು ಹೇಳಿದ್ದನ್ನೇ ತಪ್ಪಾಗಿ ಬಿಂಬಿಸಿರುವುದು ಖಂಡನೀಯ ಎಂದರು.

Team Udayavani, Dec 4, 2021, 6:17 PM IST

ಕಂದಾಯ ಇಲಾಖೆ ಸಿಬ್ಬಂದಿ ವರ್ತನೆಗೆ ಆಕ್ರೋಶ

ಬ್ಯಾಡಗಿ: ಜನರ ಸಮಸ್ಯೆ ಕುರಿತಂತೆ ಪ್ರಶ್ನಿಸಿದ ಶಾಸಕರ ಆಪ್ತ ಸಹಾಯಕನ ವಿರುದ್ಧ ಸುಳ್ಳು ಆರೋಪ ಮಾಡಿರುವ ಕಂದಾಯ ಇಲಾಖೆ ಸಿಬ್ಬಂದಿ ವರ್ತನೆ ಖಂಡಿಸಿ ತಾಲೂಕಿನ ವಿವಿಧ ಗ್ರಾಮಗಳ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಪಟ್ಟಣದಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ತಹಶೀಲ್ದಾರ್‌ ಸೇರಿದಂತೆ ಕಚೇರಿ ಸಿಬ್ಬಂದಿಯನ್ನು ಕೂಡಲೇ ಸಾಮೂಹಿಕ ವರ್ಗಾವಣೆ ಮಾಡುವಂತೆ ಆಗ್ರಹಿಸಿ ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಗುರುವಾರವಷ್ಟೇ ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಲ್ಲದೇ, ಜಿಲ್ಲಾ ಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಇದರಿಂದ ಆಕ್ರೋಶಗೊಂಡ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಶುಕ್ರವಾರ ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪಟ್ಟಣದ ಪಿಕಾರ್ಡ್‌ ಬ್ಯಾಂಕ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಶೀಲ್ದಾರ್‌ ಕಚೇರಿ ತಲುಪಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಕಂದಾಯ ಇಲಾಖೆ ಅಧಿ ಕಾರಿಗಳು, ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ತಡಸ ಗ್ರಾಮದ ಚಂದ್ರಪ್ಪ ದೊಡ್ಮನಿ, ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿರುವ ಅ ಧಿಕಾರಿಗಳು ಮತ್ತು ಸಿಬ್ಬಂದಿ ಮಳೆ ಬೆಳೆ ಹಾನಿ ಫಲಾನುಭವಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ಶಾಸಕರ ಆಪ್ತ ಸಹಾಯಕನ ವಿರುದ್ಧ ತಿರುಗಿ ಬಿದ್ದಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಪುರಸಭೆ ಸದಸ್ಯ ಸುಭಾಸ ಮಾಳಗಿ ಮಾತನಾಡಿ, ಉಪ ತಹಶೀಲ್ದಾರ್‌ ಗಣೇಶ್‌ ಕಟ್ಟಿಮನಿ ಅವರನ್ನು ಕೂಡಲೇ ಎತ್ತಂಗಡಿ ಮಾಡುವಂತೆ ಆಗ್ರಹಿಸಿದರು. ಶಾಸಕರ ಆದೇಶದ ಮೇರೆಗೆ ಆಪ್ತ ಸಹಾಯಕ ಬಸವರಾಜ ಕುಲಕರ್ಣಿ ಅವರು ಜನರ ಕೆಲಸಗಳನ್ನು ಸರಿಯಾಗಿ ನಿರ್ವಹಿಸಿ ಎಂದು ಹೇಳಿದ್ದನ್ನೇ ತಪ್ಪಾಗಿ ಬಿಂಬಿಸಿರುವುದು ಖಂಡನೀಯ ಎಂದರು.

ದ್ಯಾಮನಗೌಡ ಪೂಜಾರ ಮಾತನಾಡಿ, ಸ್ಥಳೀಯ ಶಾಸಕರ ಆಪ್ತ ಸಹಾಯಕ ಬಸವರಾಜ ಕುಲಕರ್ಣಿ ಅವರು ರಾತ್ರಿ ವೇಳೆ ಕಚೇರಿಗೆ ಬಂದು ಗುಂಡಾವರ್ತನೆ ತೋರಿದ್ದಾರೆಂಬುದು ಸತ್ಯಕ್ಕೆ ದೂರವಾದ ಮಾತು. ಇದೆಲ್ಲ ಕಟ್ಟು ಕತೆ ಎಂದರಲ್ಲದೇ ಕಂದಾಯ ಇಲಾಖೆ ಸಿಬ್ಬಂದಿಯನ್ನು ಸಾಮೂಹಿಕವಾಗಿ ಕೆಲಸದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ನಂತರ ಪ್ರತಿಭಟನಾಕಾರರು ತಹಶೀಲ್ದಾರ್‌ ಮೂಲಕ ಜಿಲ್ಲಾ ಧಿಕಾರಿಗೆ ಮನವಿ ಸಲ್ಲಿಸಿದರು. ಸುರೇಶ ಯತ್ನಳ್ಳಿ, ಶಂಕ್ರಣ್ಣ ಮಾತನವರ, ವೀರೇಶ ಅಂಗಡಿ, ಪುರಸಭೆ ಸದಸ್ಯರಾದ ಶಿವರಾಜ ಅಂಗಡಿ, ಹನುಮಂತಪ್ಪ ಮ್ಯಾಗೇರಿ, ಚಂದ್ರಣ್ಣ ಶೆಟ್ಟರ್‌, ಸುರೇಶ ಉದ್ಯೋಗಣ್ಣನವರ, ಬಸವರಾಜ ಆಣೂರ, ಬಸವರಾಜ ಸಂಕಣ್ಣವರ, ಜಿತೇಂದ್ರ ಸುಣಗಾರ, ಬಸವರಾಜ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ನಿಧನ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ನಿಧನ

ಬೆಳಗಾವಿ: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ

London:ಭಾರತೀಯ ರಾಯಭಾರ ಕಚೇರಿ ಹೊರಗೆ ತ್ರಿವರ್ಣ ಧ್ವಜಕ್ಕೆ ಖಲಿಸ್ತಾನಿ ಬೆಂಬಲಿಗರಿಂದ ಬೆಂಕಿ

London:ಭಾರತೀಯ ರಾಯಭಾರ ಕಚೇರಿ ಹೊರಗೆ ತ್ರಿವರ್ಣ ಧ್ವಜಕ್ಕೆ ಖಲಿಸ್ತಾನಿ ಬೆಂಬಲಿಗರಿಂದ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

Haveri: ಜಿಲ್ಲೆಯಲ್ಲಿ 229 ಮಕ್ಕಳು ಶಿಕ್ಷಣದಿಂದ ವಂಚಿತ

Haveri: ಜಿಲ್ಲೆಯಲ್ಲಿ 229 ಮಕ್ಕಳು ಶಿಕ್ಷಣದಿಂದ ವಂಚಿತ

Haveri: ಖಾತ್ರಿ ಯೋಜನೆಯಡಿ ಪ್ರಾಚೀನ ವಸ್ತುಗಳ ಸಂರಕ್ಷಣೆ

Haveri: ಖಾತ್ರಿ ಯೋಜನೆಯಡಿ ಪ್ರಾಚೀನ ವಸ್ತುಗಳ ಸಂರಕ್ಷಣೆ

Shiggaavi: ಜಾನಪದ ವಿವಿಗೆ ಫ್ರಾನ್ಸ್‌ ಸಂಶೋಧಕ ಭೇಟಿ

Shiggaavi: ಜಾನಪದ ವಿವಿಗೆ ಫ್ರಾನ್ಸ್‌ ಸಂಶೋಧಕ ಭೇಟಿ

Ranebennur; ಶ್ರೀ ಸದ್ಗುರು ಸಿದ್ದಾರೂಢ ಕಥಾಮೃತ ಪುರಾಣ ಮಂಗಲೋತ್ಸವ

Ranebennur; ಶ್ರೀ ಸದ್ಗುರು ಸಿದ್ದಾರೂಢ ಕಥಾಮೃತ ಪುರಾಣ ಮಂಗಲೋತ್ಸವ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ನಿಧನ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ನಿಧನ

ಬೆಳಗಾವಿ: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.