ಓವರ್‌ಹೆಡ್‌ ಟ್ಯಾಂಕ್‌ ಶಿಥಿಲ: ಸ್ಥಳೀಯರಲ್ಲಿ ಆತಂಕ!

ಹಲವು ಬಾರಿ ಗಮನ ಸೆಳೆದರೂ ಕ್ರಮ ಕೈಗೊಳ್ಳದ ಅಧಿಕಾರಿಗಳು

Team Udayavani, Sep 13, 2019, 11:15 AM IST

hv-tdy-1

ಹಾವೇರಿ: ನಗರದ ದೇಸಾಯಿಗಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ ಸಂಪೂರ್ಣ ಶಿಥಿಲಗೊಂಡಿದ್ದು, ಸ್ಥಳೀಯ ನಿವಾಸಿಗಳು ಹಲವು ವರ್ಷಗಳಿಂದ ನಿತ್ಯ ಭೀತಿಯಲ್ಲೇ ದಿನಕಳೆಯುವಂತಾಗಿದೆ.

ದೇಸಾಯಿಗಲ್ಲಿ ರಾಮದೇವರ ಗುಡಿ ಸಮೀಪದಲ್ಲಿರುವ ಈ ಟ್ಯಾಂಕ್‌ ಯಾವಾಗ ಕುಸಿದು ಬೀಳುತ್ತೋ ಎಂಬ ದುಸ್ಥಿತಿ ತಲುಪಿದ್ದು, ಜವಾಬ್ದಾರಿ ಸ್ಥಾನದಲ್ಲಿರುವವರು ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅನಾಹುತ ಸಂಭವಿಸುವ ಮೊದಲೇ ಅಧಿಕಾರಿಗಳು ಎಚ್ಚೆತ್ತು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಜನರು ಹಲವು ಬಾರಿ ಆಗ್ರಹಿಸಿದರೂ ಯಾವುದೇ ಸ್ಪಂದನೆ ದೊರಕದೆ ಇರುವುದು ಸ್ಥಳೀಯರ ಆಕ್ರೋಶ ಹೆಚ್ಚಿಸಿದೆ.

ಅಂದಾಜು 10 ಸಾವಿರ ಲೀಟರ್‌ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಈ ಟ್ಯಾಂಕ್‌, ಈಗ ಸುತ್ತಮುತ್ತಲಿನ ನಿವಾಸಿಗಳಿಗೆ ತಲೆನೋವಾಗಿದೆ.

ಟ್ಯಾಂಕ್‌ಗೆ ನೀರು ಬಿಟ್ಟ ತಕ್ಷಣ ಅಲ್ಲಲ್ಲಿ ಒಡೆದು ಬಿರುಕಿನ ಜಾಗಗಳಿಂದ ನೀರು ಸೋರುತ್ತದೆ. ಶಿಥಿಲಗೊಂಡಿರುವ ಟ್ಯಾಂಕ್‌ನಿಂದ ಸಿಮೆಂಟ್ ಚೂರುಗಳು, ಸಣ್ಣ ಕಲ್ಲುಗಳು ಆಗಾಗ ಬೀಳುತ್ತಿರುವೆ. ಟ್ಯಾಂಕ್‌ ರಸ್ತೆ ಮಧ್ಯದಲ್ಲಿಯೇ ಇದ್ದು ಮಕ್ಕಳು, ಮಹಿಳೆಯರು ಸೇರಿದಂತೆ ಈ ದಾರಿಯಲ್ಲಿ ಓಡಾಡುವ ಜನತೆ ಚಿಂತೆಗೀಡಾಗಿದ್ದಾರೆ.

ಬೀಳುವ ಸಿಮೆಂಟ್ ಚೂರು: ಸುಮಾರು 20ವರ್ಷಗಳ ಹಿಂದೆ ಈ ಓವರ್‌ ಹೆಡ್‌ ಟ್ಯಾಂಕ್‌ನ್ನು ನಿರ್ಮಿಸಲಾಗಿದೆ. ಕಳಪೆ ಕಾಮಗಾರಿಯಿಂದಾಗಿ ಟ್ಯಾಂಕ್‌ಗೆ ಆಧಾರವಾಗಿ ನಿಲ್ಲಿಸಿರುವ ಕಂಬಗಳು ಶಿಥಿಲಗೊಂಡಿವೆ. ಟ್ಯಾಂಕ್‌ ಕೂಡ ಸಂಪೂರ್ಣ ಶಿಥಿಲಗೊಂಡಿದ್ದು, ಸುತ್ತಲೂ ನೀರು ಸೋರಿಕೆಯಾಗುತ್ತದೆ. ಟ್ಯಾಂಕ್‌ ತಳದಲ್ಲೇ ಕೆಲ ಮನೆಗಳಿದ್ದು, ಆ ಮನೆಗಳ ಮೇಲೆ ಸಿಮೆಂಟ್ ಚೂರುಗಳು ಬೀಳುತ್ತಲೇ ಇರುತ್ತವೆ. ಕೆಲವರ ತಲೆ ಮೇಲೂ ಟ್ಯಾಂಕ್‌ನಿಂದ ದೊಡ್ಡ ಗಾತ್ರದ ಸಿಮೆಂಟ್ ಚೂರುಗಳು ಬಿದ್ದು ಗಾಯಗೊಂಡಿರುವ ಉದಾಹರಣೆಗಳೂ ಇವೆ.

ಸುಮಾರು ಆರೇಳು ವರ್ಷಗಳ ಹಿಂದೆಯೇ ಟ್ಯಾಂಕ್‌ ಶಿಥಿಲಗೊಂಡಿದ್ದು, ಅನೇಕ ಬಾರಿ ಈ ಟ್ಯಾಂಕ್‌ ನೆಲಸಮಗೊಳಿಸಿ, ಹೊಸ ಟ್ಯಾಂಕ್‌ ಕಟ್ಟುವ ಬಗ್ಗೆ ನಗರಸಭೆಯಲ್ಲಿ ಚರ್ಚೆ, ಠರಾವು ಎಲ್ಲವೂ ಆಗಿದೆ. ಆದರೆ, ವಾಸ್ತವದಲ್ಲಿ ಕೆಲಸ ಮಾತ್ರ ಆಗಿಲ್ಲ. ಕಳೆದ ನಾಲ್ಕೈದು ವರ್ಷಗಳಿಂದ ಟ್ಯಾಂಕ್‌ನಿಂದ ನೀರು ಸೋರಿಕೆ ಪ್ರಮಾಣ ಹೆಚ್ಚಾಗಿದೆ. ಆದರೂ ಇದೇ ಶಿಥಿಲಗೊಂಡ ಟ್ಯಾಂಕ್‌ಗೆ ನೀರು ತುಂಬಿಸಿ 21, 22, 29, 30, 31 ಸೇರಿದಂತೆ ಐದಾರು ವಾರ್ಡ್‌ಗಳಿಗೆ ನಗರಸಭೆ ನೀರು ಸರಬರಾಜು ಮಾಡುತ್ತಿದೆ. ಟ್ಯಾಂಕ್‌ಗೆ ನೀರು ಬಿಟ್ಟಾಗಲೆಲ್ಲ ಸ್ಥಳೀಯರು ನಿದ್ದೆಗೆಡುವಂತಾಗಿದೆ. ಟ್ಯಾಂಕ್‌ಗೆ ನೀರು ತುಂಬಿಸಿದಾಗ ಅರ್ಧ ನೀರು ಸೋರಿಕೆಯಾಗಿ ಚರಂಡಿ ಪಾಲುಗುತ್ತಿವೆ.

ನೀರು ವ್ಯರ್ಥವಾಗುವುದಕ್ಕಿಂತ ಟ್ಯಾಂಕ್‌ ಯಾವಾಗ ಬಿದ್ದು ಅನಾಹುತ ಸಂಭವಿಸುತ್ತದೆಯೋ ಎಂಬ ಭಯ ಸುತ್ತಲಿನ ನಾಗರಿಕರನ್ನು ಹೆಚ್ಚು ಕಾಡುತ್ತಿದ್ದು ಈಗಲಾದರೂ ನಗರಸಭೆ ಎಚ್ಚೆತ್ತು ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕಿದೆ.

ದೇಸಾಯಿ ಗಲ್ಲಿಯಲ್ಲಿರುವ ಓವರ್‌ ಹೆಡ್‌ ಟ್ಯಾಂಕ್‌ ಶಿಥಿಲಗೊಂಡಿರುವ ಬಗ್ಗೆ ನೀರು ಸರಬರಾಜು ಮಂಡಳಿ ತಾಂತ್ರಿಕ ಅಧಿಕಾರಿಗಳಿಂದ ವರದಿ ಪಡೆದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು.• ಬಸವರಾಜ ಜಿದ್ದಿ,ಪೌರಾಯುಕ್ತರು, ನಗರಸಭೆ

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.