ಬೀಡಾ ಅಂಗಡಿಕಾರನ ಪುತ್ರಿ ಜಿಲ್ಲೆಗೆ ಫ‌ಸ್ಟ್‌


Team Udayavani, May 2, 2019, 3:37 PM IST

hav-1

ಅಕ್ಕಿಆಲೂರು: ಕಿತ್ತು ತಿನ್ನುವ ಬಡತನ, ಸೂರು ಇಲ್ಲದೆ ಗುಡಿಸಿಲಲ್ಲಿಯೆ ಜೀವನ. ಬದುಕಿನ ಬಂಡಿ ನಡೆಸಲು ತಂದೆಯದದ್ದು ಸಣ್ಣದೊಂದು ಬೀಡಾ ಅಂಗಡಿ. ಶಾಲೆ ಬಿಟ್ಟ ನಂತರ ಇದೇ ಬೀಡಾ ಅಂಗಡಿಯಲ್ಲಿ ಕುಳಿತು ಓದಿದ ಸಿಂಧೂ ಹಾವೇರಿ ಗಳಿಸಿದ್ದು ಬರೋಬ್ಬರಿ ಶೇ. 98.72 ಅಂಕ. ಈ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಬಸವರಾಜ ಮತ್ತು ರೇಣುಕಾ ದಂಪತಿಯ ಮುದ್ದಿನ ಮಗಳು ಸಿಂಧು ಹಾವೇರಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಡಿರುವ ಸಾಧನೆ ಇಡೀ ಜಿಲ್ಲೆಯೇ ಅವಳತ್ತ ನೋಡುವಂಥ ಸಾಧನೆ ಮಾಡಿರುವುದು ಹೆತ್ತವರ ಹೃದಯದಲ್ಲಿ ಎಲ್ಲಿಲ್ಲದ ಸಂತಸ ಮೂಡಿದೆ. ಮಗಳ ಸಾಧನೆಯ ಮೊದಲ ಮೆಟ್ಟಿಲು ಭವ್ಯ ಭವಿಷ್ಯದ ಮೊಳಕೆ ಚಿಗುರೊಡೆದಿದೆ.

ಶೇಷಗಿರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಸಿಂಧು ಹಾವೇರಿ ತನ್ನ ಊರು ಹೊಂಕಣದಿಂದ ಶೇಷಗಿರಿಗೆ 6 ಕಿಮೀ ನಿತ್ಯ ಸೈಕಲ್ನಲ್ಲಿ ಸಂಚರಿಸಿ ಶಾಲೆ ತಲುಪುತ್ತಿದ್ದಳು. ಹೊಂಕಣ ಗ್ರಾಮದ ಶಿರಸಿ-ಹರಿಹರ ರಾಜ್ಯ ಹೆದ್ದಾರಿಯ ಪಕ್ಕದ ಗುಡಿಸಲಲ್ಲಿ ವಾಸಿಸುವ ಬಸವರಾಜ ಹಾವೇರಿ ತಮ್ಮ ಗುಡಿಸಲು ಎದುರಿಗೆ ಒಂದು ಸಣ್ಣ ಹೋಟೆಲ್ ಮತ್ತು ಬೀಡಾ ಅಂಗಡಿ ನಡೆಸುತ್ತಾರೆ. ತಾಯಿ ರೇಣುಕಾ ದಿನಸಿ ಮಾಡಿದರೆ ತಂದೆ ದಿನಸಿಗಳನ್ನು ಮಾರಾಟ ಮಾಡಿ ಬಂದ ಪುಡಿಗಾಸಿನಲ್ಲಿಯೆ ಜೀವನ ನಡೆಸುತ್ತಾರೆ.

ಇಂತಹ ಕಡುಬಡತನದ ಕುಟುಂಬದಲ್ಲಿ ಯಾವ ವಿಶೇಷ ತರಬೇತಿ, ಟ್ಯೂಷನಗೆ ಹೋಗದೆ ಸಿಂಧು ಹಾವೇರಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. ವಿಷಯ ತಿಳಿದು ಶಾಸಕ ಸಿ.ಎಂ. ಉದಾಸಿ ಹಾಗೂ ಹೊಂಕಣ ಗ್ರಾಮಸ್ಥರ ಪರವಾಗಿ ಪಿಡಿಒ ಶಿಲ್ಪಾ ಕೊಪ್ಪದ ವಿದ್ಯಾರ್ಥಿನಿ ಸಿಂಧು ಅವರ ಮನೆಗೆ ತೆರಳಿ ಸನ್ಮಾನಿಸಿ ಅಭಿನಂದಿಸಿದ್ದಾರೆ.

ಖಂಡಿತ ನಾನೇ ಶಾಲೆಗೆ ಮೊದಲು ಬರುತ್ತೇನೆ ಎಂಬ ವಿಶ್ವಾಸ ಇತ್ತು. ಅದಕ್ಕೆ ತಕ್ಕಂತೆ ಶಾಲೆಯಲ್ಲಿ ಹೇಳಿದ ಅಭ್ಯಾಸ ಗಮನವಿಟ್ಟು ಕೇಳಿ, ಮನೆಯಲ್ಲಿ ಮನನ ಮಾಡಿಕೊಳ್ಳುತ್ತಿದ್ದೆ. ಯಾವ ಟ್ಯೂಷನ್‌ಗೂ ಹೋಗಿಲ್ಲ. ಹೋಗುವ ಆರ್ಥಿಕ ಶಕ್ತಿಯೂ ನಮ್ಮ ಬಳಿ ಇರಲಿಲ್ಲ. ತಂದೆ-ತಾಯಿ ಆಶೀರ್ವಾದ, ಗುರುಗಳ ಮಾರ್ಗದರ್ಶನ ಮತ್ತು ನನ್ನ ಶ್ರಮಕ್ಕೆ ತಕ್ಕ ಪ್ರತಿಫಲ ದೊರತ್ತಿದೆ.

•ಸಿಂಧು ಹಾವೇರಿ, ವಿದ್ಯಾರ್ಥಿನಿ

ಶೈಕ್ಷಣಿಕವಾಗಿ ನಮ್ಮ ತಾಲೂಕಿನಲ್ಲಿ ಸಾಕಷ್ಟು ಪ್ರತಿಭೆಗಳು ತಮ್ಮ ಅಮೋಘ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆಯುತ್ತಿರುವುದು ಸಂತಸ ತಂದಿದೆ. ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡ ಸಿಂಧು ಹಾವೇರಿಯವರ ಸಾಧನೆ ನೂರಾರು ವಿದ್ಯಾರ್ಥಿಗಳಿಗೆ ಪ್ರೇರಣೆ. ಅವಳ ಭವಿಷ್ಯ ಉಜ್ವಲವಾಗಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಉನ್ನತ ಹುದ್ದೆ ಅಲಂಕರಿಸುವಂತಾಗಲಿ.

•ಸಿ.ಎಂ.ಉದಾಸಿ, ಶಾಸಕ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.