ಇಲ್ಲಿ ಪಾರ್ಕಿಂಗ್‌ ಶುಲ್ಕ ನೆಪ ಮಾತ್ರ!


Team Udayavani, Oct 19, 2019, 2:54 PM IST

hv-tdy-1

ಹಾವೇರಿ: ನಗರದ ರೈಲ್ವೆ ಸ್ಟೇಷನ್‌ ಹಾಗೂ ಬಸ್‌ ನಿಲ್ದಾಣದಲ್ಲಿ ಪಾರ್ಕಿಂಗ್‌ ಶುಲ್ಕದ ಹೆಸರಿನಲ್ಲಿ ವಾಹನ ಸವಾರರಿಂದ ದುಪ್ಪಟ್ಟು ಹಣ ಸುಲಿಗೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆರೋಪ ಕೇಳಿ ಬಂದಿದೆ.

ಪಾರ್ಕಿಂಗ್‌ ಸ್ಥಳದ ಗುತ್ತಿಗೆ ನೀಡುವ ಮುನ್ನ ಪ್ರತಿ ವಾಹನಕ್ಕೂ ನಿರ್ದಿಷ್ಟ ಶುಲ್ಕ ನಿಗದಿ ಮಾಡಿ ನಿಗದಿ ಮಾಡಿದ ಶುಲ್ಕವನ್ನು ಮಾತ್ರ ಆಕರಣೆ ಮಾಡುವಂತೆ ಷರತ್ತು ವಿಧಿ ಸಿರಲಾಗಿರುತ್ತದೆ. ಆದರೆ, ಪಾರ್ಕಿಂಗ್‌ ಗುತ್ತಿಗೆ ಪಡೆದವರು ವಾಹನ ಸವಾರರಿಂದ ನಿಗದಿತ ದರಕ್ಕಿಂತ 2-3 ಪಟ್ಟು ಶುಲ್ಕ ವಸೂಲಿ ಮಾಡುತ್ತಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

ಹಗಲು ದರೋಡೆ ದಂಧೆ: ನಗರದ ಸಾರ್ವಜನಿಕರು ನಿತ್ಯ ಬೇರೆ ಊರುಗಳಿಗೆ ತೆರಳುವ ಸಂದರ್ಭದಲ್ಲಿ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ವಾಹನ ನಿಲ್ಲಿಸಿ ಹೋಗುತ್ತಾರೆ. ರೈಲ್ವೆ ನಿಲ್ದಾಣದಲ್ಲಿ ದ್ವಿಚಕ್ರ ವಾಹನಕ್ಕೆ ಹಗಲು ಹೊತ್ತಿನಲ್ಲಿ ಐದು ರೂ., ರಾತ್ರಿ ಹೊತ್ತು 20 ರೂ. ಹಾಗೂ ನಾಲ್ಕು ಚಕ್ರದ ವಾಹನಗಳಿಗೆ ಹಗಲು ಹೊತ್ತು ಏಳು ರೂ., ರಾತ್ರಿ ಸಮಯದಲ್ಲಿ 30 ರೂ. ವಸೂಲಿ ಮಾಡಲಾಗುತ್ತಿದೆ. ಬಸ್‌ ನಿಲ್ದಾಣದಲ್ಲಂತೂ ದ್ವಿಚಕ್ರ ವಾಹನಕ್ಕೆ ಹಗಲು ಹೊತ್ತಿನಲ್ಲಿ 10 ರೂ. ಹಾಗೂ ರಾತ್ರಿ 30 ರೂ. ವಸೂಲಿ ಮಾಡುವ ಮೂಲಕ ಹಗಲು ದರೋಡೆ ದಂಧೆಗೆ ಇಳಿದಿದ್ದಾರೆ. ನಿಯಮದ ಪ್ರಕಾರ 24 ಗಂಟೆಗೆ ಒಂದೇ ದರ ಇರಬೇಕು. ಆದರೆ, ಗುತ್ತಿಗೆದಾರರು ರಾತ್ರಿ, ಹಗಲು ಬೇರೆ ಬೇರೆ ದರ ನಿಗದಿಪಡಿಸುತ್ತಿದ್ದಾರೆ.

ಫಲಕ ಕಾಣದ ಸ್ಥಳದಲ್ಲಿಲ್ಲ: ಪಾರ್ಕಿಂಗ್‌ ಸ್ಥಳದ ಗುತ್ತಿಗೆ ಪಡೆದವರು ಪಾರ್ಕಿಂಗ್‌ ಸ್ಥಳದಲ್ಲಿ ಎಲ್ಲರಿಗೂ ಕಾಣುವ ಸ್ಥಳದಲ್ಲಿ ವಾಹನಗಳ ಪಾರ್ಕಿಂಗ್‌ಗೆ ನಿಗದಿಪಡಿಸಿದ ಪಾರ್ಕಿಂಗ್‌ ದರದ ಪಟ್ಟಿ ಅಳವಡಿಸಿರಬೇಕು. ರೈಲ್ವೆ ನಿಲ್ದಾಣದ ಒಂದು ಮೂಲೆಯಲ್ಲಿ ಪಾರ್ಕಿಂಗ್‌ ದರ ಪಟ್ಟಿ ಹಾಕಲಾಗಿದೆಯಾದರೂ ಬಸ್‌ ನಿಲ್ದಾಣದಲ್ಲಿ ಮಾತ್ರ ದರ ಪಟ್ಟಿ ಎಲ್ಲಿದೆ ಎಂಬುದು ಹಾಕಿದವರಿಗೇ ಗೊತ್ತು ಎಂಬ ಸ್ಥಿತಿ ಇದೆ. ಇದರಿಂದ ವಾಹನ ಸವಾರರು ನಿಗದಿತ ದರ ಗೊತ್ತಾಗದೇ ಗುತ್ತಿಗೆದಾರರು ಕೇಳಿದಷ್ಟು ಹಣ ನೀಡಿ ಬರುವಂತಾಗಿದೆ.

ಹುಟ್ಟಿಕೊಂಡ ಅನುಮಾನದ ಹುತ್ತ: ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಹಗಲು, ರಾತ್ರಿ ಬೇರೆ ಬೇರೆ ದರ ನಿಗದಿಪಡಿಸುವುದು. ಹೆಚ್ಚಿನದರ ಪಡೆಯುತ್ತಿರುವುದು ಪಾರ್ಕಿಂಗ್‌ ಸ್ಥಳದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳಲ್ಲಿಯೂ ದಾಖಲಾಗುತ್ತದೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಯಾರು ಇವರನ್ನು ಪ್ರಶ್ನಿಸುವ ಗೋಜಿಗೆ ಹೋಗದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಬಸ್‌ ನಿಲ್ದಾಣದ ಪಾರ್ಕಿಂಗ್‌ ಗುತ್ತಿಗೆದಾರರು ಹೆಚ್ಚಿನ ಹಣ ವಸೂಲಿ ಮಾಡುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಈಗಾಗಲೇ ಅವರಿಗೆ ಎಚ್ಚರಿಕೆ ನೀಡಲಾಗಿದೆ. ಹೆಚ್ಚಿಗೆ ಹಣ ವಸೂಲಿ ಮಾಡುವುದನ್ನು ಮುಂದುರಿಸಿದರೆ ಪಾರ್ಕಿಂಗ್‌ ಗುತ್ತಿಗೆದಾರರಿಗೆ ದಂಡ ಹಾಕಲಾಗುವುದು. -ಜಗದೀಶ, ಕೆಎಸ್‌ಆರ್‌ಟಿಸಿ ವಿಭಾಗಾಧಿಕಾರಿ

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.