ಪಕ್ಷ ಸೂಚಿಸಿದ ಅಭ್ಯರ್ಥಿ ಗೆಲ್ಲಿಸಿ: ಬಳ್ಳಾರಿ

•ಕೇಳಿದ ಎಲ್ಲರಿಗೂ ಸಿಗದು ಟಿಕೆಟ್•ಪಕ್ಷ ಗೆಲುವಿಗೆ ಪ್ರತಿಯೊಬ್ಬರ ಶ್ರಮ ಅವಶ್ಯ

Team Udayavani, May 10, 2019, 3:42 PM IST

haveri-tdy-2..

ಬ್ಯಾಡಗಿ: ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕರ್ತರ ಹಾಗೂ ಆಕಾಂಕ್ಷಿಗಳ ಸಭೆಯನ್ನುದ್ದೇಶಿಸಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿದರು..

ಬ್ಯಾಡಗಿ: ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಅಷ್ಟೊಂದು ಸುಲಭ ಸಾಧ್ಯವಲ್ಲ. 23 ಸ್ಥಾನಗಳ ಪೈಕಿ ಒಟ್ಟು 110 ಜನರು ಟಿಕೆಟ್ ನೀಡುವಂತೆ ಲಿಖೀತ ಮನವಿ ಕೊಟ್ಟಿದ್ದು, ಪಟ್ಟಿ ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು. ಪಕ್ಷ ಸೂಚಿಸಿದರನ್ನು ಗೆಲ್ಲಿಸಲು ಎಲ್ಲರೂ ಪಣ ತೊಡುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಕರೆ ನೀಡಿದರು.

ಗುರುವಾರ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಹಾಗೂ ಆಕಾಂಕ್ಷಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೇ 29 ರಂದು ನಡೆಯಲಿರುವ ಚುನಾವಣೆ ಬಿಜೆಪಿ ಕಾರ್ಯಕರ್ತರು ಪ್ರತಿಷ್ಠೆಯನ್ನಾಗಿ ಮಾಡಿಕೊಳ್ಳಬೇಕು. ಪುರಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಮಾಡಿಕೊಡುವಂತೆ ಬಹಳಷ್ಟು ಜನರು ಅಹವಾಲು ಸಲ್ಲಿಸಿದ್ದಾರೆ. ಇದೊಂದು ಸಹಜ ಪ್ರಕ್ರಿಯೆಯಾಗಿದ್ದು, ಇದರಲ್ಲಿ ತಪ್ಪೇನಿಲ್ಲ. ಆದರೆ, ಟಿಕೆಟ್ ಕೇಳಿದ ಎಲ್ಲರಿಗೂ ಅವಕಾಶ ಮಾಡಿಕೊಡಲು ಸಾಧ್ಯವಿಲ್ಲ, ಹೀಗಾಗಿ ಪ್ರತಿಯೊಬ್ಬರು ಇದು ನನ್ನ ಚುನಾವಣೆ, ನನ್ನ ವಾರ್ಡ್‌ ಚುನಾವಣೆ ಎಂದು ಭಾವಿಸಿಕೊಂಡು ಕೆಲಸ ಮಾಡುವಂತೆ ಮನವಿ ಮಾಡಿದರು.

ಬಂಡಾಯದಿಂದ ನಷ್ಟ ಜಾಸ್ತಿ: ಟಿಕೆಟ್ ಸಿಗದೇ ಅಸಮಾಧಾನ ಮಾಡಿಕೊಂಡವರು, ಬಂಡಾಯವಾಗಿ ಸ್ಪರ್ಧೆ ಮಾಡಿದರೇ, ತಮ್ಮನ್ನೂ ಸೇರಿದಂತೆ ಪಕ್ಷಕ್ಕೆ ನಷ್ಟವಾಗಲಿದೆ. ಆದರೆ, ಎಲ್ಲ ಜಾತಿ, ಧರ್ಮ, ಜನಾಂಗಗಳು ಮತ್ತು ಸಮುದಾಯದ ಜನರಿಗೆ ಅವಕಾಶ ಮಾಡಿಕೊಡಬೇಕಾದ ಕಾರಣ ಪ್ರಸಕ್ತ ಚುನಾವಣೆಯಲ್ಲಿ ಎಲ್ಲ ಮಾನದಂಡಗಳನ್ನು ಪರಿಗಣಿಸಲಾಗುವುದು. ಅವಕಾಶ ವಂಚಿತರು ನಿರಾಸೆಗೊಳ್ಳದೆ ಟಿಕೆಟ್ ನನಗೆ ಸಿಕ್ಕಿದೆ ಎನ್ನುವ ರೀತಿಯಲ್ಲಿ ಚುನಾವಣೆ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಪಕ್ಷವನ್ನು ಗೆಲ್ಲಿಸಬೇಕು. ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.

ಪಕ್ಷಕ್ಕೆ ಆನೆ ಬಲ: ವಿಧಾನಸಭೆ, ಲೋಕಸಭೆ ಸೇರಿದಂತೆ ಬಹುತೇಕ ಚುನಾವಣೆಗಳಲ್ಲಿ ಬಿಜೆಪಿ ಜಯ ಸಾಧಿಸುತ್ತ ಬಂದಿದ್ದು, ಕೇವಲ ಒಂದು ಸ್ಥಾನವಿದ್ದ ಬಿಜೆಪಿ ಕಳೆದ ಬಾರಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯುತ್ತ ಬಂದಿದೆ. ವಾಜಪೇಯಿ ಹಾಗೂ ಆಡ್ವಾಣಿಯವರಂತಹ ಕಳಂಕ ರಹಿತ ನಾಯಕರು ಕಟ್ಟಿ ಬೆಳೆಸಿದ ಪಕ್ಷ ಇದೀಗ ಹೆಮ್ಮರವಾಗಿ ಬೆಳೆದು ಜನಸೇವೆಗೆ ಸಿದ್ಧವಾಗಿದೆ. ಸ್ಪರ್ಧಿಸಿರುವ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲರು ಶ್ರಮಿಸೋಣ ಎಂದರು.

ಬಿಜೆಪಿ ತಾಲೂಕಾಧ್ಯಕ್ಷ ಶಂಕ್ರಣ್ಣ ಮಾತನವರ, ಮಾಜಿ ಅಧ್ಯಕ್ಷ ರಾಮಣ್ಣ ಉಕ್ಕುಂದ, ಪುರಸಭೆ ಮಾಜಿ ಅಧ್ಯಕ್ಷ ಬಿ.ಎಂ.ಛತ್ರದ, ಮುಖಂಡರಾದ ಸಿ.ಆರ್‌.ಆಲದಗೇರಿ, ರವೀಂದ್ರ ಪಟ್ಟಣಶೆಟ್ಟಿ, ಜೆ.ಸಿ.ಚಿಲ್ಲೂರಮಠ, ಬಾಲಚಂದ್ರಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ವಿರೇಂದ್ರ ಶೆಟ್ಟರ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಸುರೇಶ ಆಸಾದಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.