ಬೇಸಿಗೆ ಬಿಸಿಗೆ ಬಸವಳಿದ ಜನತೆ

•'ಉಸ್ಸಪ್ಪಾ' ಎಂದು ಏದುಸಿರು ಬಿಡುವಂತಾದ ಬಿಸಿಲು •ಸೂರ್ಯನ ಶಾಖಕ್ಕೆ ಬೆಂದ ಹಾವೇರಿ

Team Udayavani, May 15, 2019, 1:24 PM IST

havweri-tdy-1…

ಹಾವೇರಿ: ನೀರು ತರಲು ಹೋಗುತ್ತಿರುವ ವೃದ್ಧೆ.

ಹಾವೇರಿ: ಸೂರ್ಯದೇವ ಜನರಿಗೆ ‘ಚುರುಕು’ ಮುಟ್ಟಿಸಿದ್ದು, ಜನರು ‘ಉಸ್ಸಪ್ಪಾ.. ಏನಿದು ಬಿಸಿಲು!’ ಎಂದು ಉದ್ಗರಿಸುತ್ತಲೇ ಬೆವರು ಒರೆಸಿಕೊಳ್ಳುವುದು ಸಾಮಾನ್ಯವಾಗಿದೆ.

ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರಲು ಶುರುವಾಗಿದೆ. ಜಿಲ್ಲೆಯಲ್ಲಿ ಈಗ ಸೂರ್ಯ ಸರಾಸರಿ 36ರಿಂದ 40 ಡಿಗ್ರಿ ಸೆಲ್ಸಿಯಸ್‌ವರೆಗೂ ತನ್ನ ಪ್ರತಾಪ ತೋರುತ್ತಿದ್ದು, ಜನಜೀವನದ ಮೇಲೆ ಭಾರಿ ತಾಪದ ದುಷ್ಪರಿಣಾಮ ಬೀರುತ್ತಿದೆ.

ಬೆಳಗ್ಗೆ 7:30ರಿಂದಲೇ ರವಿ ತನ್ನ ಪ್ರಖರತೆಯನ್ನು ತೋರಲು ಪ್ರಾರಂಭಿಸಿದ್ದು, ಸಂಜೆ 6ರ ವರೆಗೂ ಬಿಸಿಲಿನ ಶಾಖ ಬೆವರಿಳಿಸುವಂತೆ ಮಾಡುತ್ತಿದೆ. ಮಧ್ಯಾಹ್ನ 1ರಿಂದ 4ಗಂಟೆ ವರೆಗಿನ ಸಮಯವಂತೂ ಕಾದ ಹೆಂಚಿನಂತೆ ಭೂಮಿ ಸುಡುತ್ತಿರುತ್ತದೆ. ಮಣ್ಣಿನ ರಸ್ತೆಗಳಲ್ಲಿ ಧೂಳು ಇನ್ನಷ್ಟು ಒಣಗಿ ಮೇಲೆದ್ದರೆ, ಡಾಂಬರ್‌ ರಸ್ತೆಗಳು ಶಾಖವನ್ನು ಪ್ರತಿಫಲಿಸಿ, ಇಡೀ ವಾತಾವರಣವನ್ನು ಇನ್ನಷ್ಟು ಸುಡುಬೆಂಕಿಯನ್ನಾಗಿಸುತ್ತಿವೆ.

ಮಹಿಳೆಯರು, ಮಕ್ಕಳು ಹಾಗೂ ಹಿರಿಯರಿಗೆ ಮಧ್ಯಾಹ್ನ 12 ಗಂಟೆಯ ನಂತರದ ಸಂಚಾರ ಸಂಕಟಮಯವಾಗುತ್ತಿದೆ. ಆಸ್ಪತ್ರೆ, ಕಚೇರಿ ಓಡಾಟ ಅನಿವಾರ್ಯವಾದರಿಗೆ ಈ ಸುಡುಬಿಸಿಲಿನ ತೀವ್ರತೆ ತುಸು ಹೆಚ್ಚೇ ತನ್ನ ‘ಬಿಸಿ’ಮೂಡಿಸುತ್ತಿದೆ.

ಕಾದ ಕಾವಲಿ: ಮನೆಗಳಲ್ಲಿ, ಕಚೇರಿಗಳಲ್ಲಿ ಬೆಳಗ್ಗೆಯಿಂದಲೇ ಫ್ಯಾನ್‌ಗಳು ತಿರುಗಲು ಪ್ರಾರಂಭಿಸುತ್ತಿವೆ. ಬಿಸಿಲಿನ ತೀವ್ರತೆ ಹೆಚ್ಚಾದಂತೆ ಫ್ಯಾನ್‌ನ ಗಾಳಿಯೂ ಬಿಸಿಯಾದಾಗ ಬದುಕು ಬಹಳ ಸಂಕಷ್ಟಮಯ ಎನಿಸಿ ‘ಮಳೆ ಬಂದರೆ ಸಾಕಪ್ಪ’ ಎಂದು ಅಪೇಕ್ಷೆಯ ಮಾತುಗಳು ಎಲ್ಲರ ಬಾಯಲ್ಲೂ ಕೇಳಿ ಬರುತ್ತಿದೆ. ಜಿಲ್ಲೆಯಲ್ಲಿ ವಿದ್ಯುತ್‌ ವ್ಯತ್ಯಯದ ಪಾಳಿಯೂ ಇದೆ. ವಿದ್ಯುತ್‌ ಎಷ್ಟೊತ್ತಿಗೆ ಇರುತ್ತದೆ, ಎಷ್ಟೋತ್ತಿಗೆ ಇರುವುದಿಲ್ಲ ಎಂಬುದು ತಿಳಿಯದ ರೀತಿಯಲ್ಲಿ ವಿದ್ಯುತ್‌ ಲೋಡ್‌ಶೆಡ್ಡಿಂಗ್‌ ಮಾಡಲಾಗುತ್ತಿದೆ. ವಿದ್ಯುತ್‌ ಹೋದ ಮೇಲಂತೂ ಫ್ಯಾನಿನ ಬಿಸಿಗಾಳಿಯೂ ಮಾಯವಾಗಿ ಮನೆ, ಕಚೇರಿಗಳು ಮಂಡಕ್ಕಿ ಭಟ್ಟಿಯಂತೆ ಕಾವು ತುಂಬಿಕೊಳ್ಳುತ್ತಿವೆ.

ನೀರಿನ ಬವಣೆ: ಕುಡಿಯುವ ನೀರಿನ ಸಮಸ್ಯೆಗೂ ಹಾವೇರಿಗೂ ‘ಬಿಡದ’ ನಂಟು. ಜಿಲ್ಲೆಯ ಹಲವೆಡೆ ನೀರಿಗಾಗಿ ಹಾಹಾಕಾರ ಮುಗಿಲು ಮುಟ್ಟಿದೆ. ಹಲವೆಡೆ ಕೊಳವೆಬಾವಿಗಳಲ್ಲಿ ಅಂತರ್ಜಲವೂ ಖಾಲಿಯಾಗಿ ಬಂದ್‌ ಆಗಿವೆ. ನೀರು ಇರುವ ಕೊಳವೆ ಬಾವಿಗಳ ಬಳಿ ನಿತ್ಯ ನೂರಾರು ಜನರು ಕೊಡ ಹಿಡಿದು ಸಾಲಿನಲ್ಲಿ ನಿಲ್ಲುವ ದೃಶ್ಯ ಸಾಮಾನ್ಯವಾಗಿದೆ.

ನೀರು ವ್ಯಾಪಾರ: ಕುಡಿಯುವ ನೀರಿನ ಸಮಸ್ಯೆ ಅಧಿಕವಾಗಿರುವ ಜಿಲ್ಲೆಯಲ್ಲಿ ನೀರಿನ ವ್ಯಾಪಾರ ಬೇಸಿಗೆಯಲ್ಲಿ ಬಲು ಜೋರಾಗಿಯೇ ನಡೆಯುತ್ತಿದೆ. ವಿಶೇಷವಾಗಿ ನಗರ ಪ್ರದೇಶದ ಜನರಿಗೆ ನೀರುಣಿಸಲು ಕೆಲವರು ದೂರದ ಪ್ರದೇಶಗಳಿಂದ ಕುಡಿಯುವ ನೀರನ್ನು ಟ್ಯಾಂಕರ್‌ನಲ್ಲಿ ನೀರು ತಂದು ಮಾರುತ್ತಾರೆ. ಒಂದು ಟ್ಯಾಂಕರ್‌ಗೆ 400-500ರೂ., ಒಂದು ಕೊಡ ನೀರಿಗೆ 1ರಿಂದ 5- 10 ರೂ.ವರೆಗೂ ಮಾರುತ್ತಾರೆ. ನೀರಿನ ತುಟಾಗ್ರತೆ ಹೆಚ್ಚಿದಂತೆ ನೀರಿನ ದರವೂ ಏರುವುದು ಇಲ್ಲಿ ಮಾಮೂಲು.

ಹಣ್ಣು, ಕೋಲ್ಡ್: ಬಿರುಬಿಸಿಲಲ್ಲಿ ಬೆಂದಾದ ಮೈ, ಮನ ತಂಪಿಗಾಗಿ ಹಾತೊರೆಯುತ್ತದೆ. ಹೀಗಾಗಿ ಈ ಸಂದರ್ಭದಲ್ಲಿ ತಂಪು ಪಾನೀಯ ಅಂಗಡಿಗಳಿಗೆ, ಹಣ್ಣಿನ ಅಂಗಡಿಗಳಿಗೆ ವ್ಯಾಪಾರ ಬಲು ಜೋರು. ನಗರ, ಗ್ರಾಮೀಣ ಪ್ರದೇಶಗಳಲ್ಲಿ ಅಲ್ಲಲ್ಲಿ ತಂಪು ಪಾನೀಯಗಳ ಅಂಗಡಿಗಳು ತಲೆ ಎತ್ತಿವೆ. ಐಸ್‌ಕ್ರೀಮ್‌ ಅಂಗಡಿಗಳಲ್ಲೂ ಜನ ಕೂಲ್ ಕೂಲ್ ಆಗುತ್ತಿದ್ದಾರೆ. ದೇಹಕ್ಕೆ ತಂಪು ಅನುಭವ ನೀಡುವ ಕಲ್ಲಂಗಡಿ ಹಣ್ಣು, ಎಳನೀರು ಬೆಲೆ ದುಪ್ಪಟ್ಟಾಗಿದೆ. ಸಾಮಾನ್ಯ ಗಾತ್ರ ಕಲ್ಲಂಡಗಿ ಹಣ್ಣು 80-150ರೂ. ವರೆಗೆ ಮಾರುತ್ತಿದ್ದರೆ, ಒಂದು ಎಳನೀರಿಗೆ 25-30ರೂ. ಆಗಿದೆ.

ನಾಳೆ, ನಾಡಿದ್ದು ಅಧಿಕ ತಾಪಮಾನ ಸಾಧ್ಯತೆ:

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮುಂದಿನ 10 ದಿನಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ ತಾಪಮಾನ ಸಾಧ್ಯತೆ ಹೀಗಿದೆ: ಮೇ 15ರಂದು 39 ಡಿಗ್ರಿ ಸೆಲ್ಸಿಯಸ್‌, ಮೇ 16ರಂದು 40 ಡಿಗ್ರಿ ಸೆಲ್ಸಿಯಸ್‌, ಮೇ 17ರಂದು 41ಡಿಗ್ರಿ ಸೆಲ್ಸಿಯಸ್‌, ಮೇ 18ರಂದು 40 ಡಿಗ್ರಿ ಸೆಲ್ಸಿಯಸ್‌, ಮೇ 19ರಂದು 39 ಡಿಗ್ರಿ ಸೆಲ್ಸಿಯಸ್‌, ಮೇ 20ರಂದು 39 ಡಿಗ್ರಿ ಸೆಲ್ಸಿಯಸ್‌, ಮೇ 21ರಂದು 38 ಡಿಗ್ರಿ ಸೆಲ್ಸಿಯಸ್‌, ಮೇ 22ರಂದು 38ಡಿಗ್ರಿ ಸೆಲ್ಸಿಯಸ್‌.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.