ದುಬಾರಿ ದಂಡಕ್ಕೆ ಬೆಂಡಾದ ಸವಾರರು


Team Udayavani, Sep 17, 2019, 12:24 PM IST

hv-tdy-2

ಹಾವೇರಿ: ವಾಹನ ಚಾಲನಾ ಪರವಾನಗಿ ಪಡೆಯಲು ಆರ್‌ಟಿಒ ಕಚೇರಿಯಲ್ಲಿ ಸರದಿಯಲ್ಲಿ ನಿಂತ ವಾಹನ ಸವಾರರು.

ಹಾವೇರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಮೋಟಾರು ವಾಹನ ಕಾಯ್ದೆಯಡಿ ಸಂಚಾರಿ ನಿಯಮ ಉಲ್ಲಂಘನೆ ಭಾರಿ ಮೊತ್ತದ ದಂಡ ವಿಸಿರುವುದರಿಂದ ವಾಹನ ಸವಾರರು ಚಾಲನಾ ಪರವಾನಗಿ ಪಡೆಯಲು, ವಿಮೆ ಮಾಡಿಸಲು ಹಾಗೂ ವಾಹನ ಮಾಲಿನ್ಯ ತಪಾಸಣೆಗೆ ಮುಗಿಬಿದ್ದಿದ್ದಾರೆ.

ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸಿರುವ ಪರಿಣಾಮ ಪ್ರಾದೇಶಿಕ ಸಾರಿಗೆ ಕಚೇರಿ, ವಿಮಾ ಕಚೇರಿಗಳು ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿ ಜನದಟ್ಟಣೆ ಶುರುವಾಗಿದ್ದು, ವಾಹನ ಮಾಲೀಕರು ಸರದಿಯಲ್ಲಿ ನಿಂತು ತಮ್ಮ ಕೆಲಸ ಮಾಡಿಕೊಳ್ಳುತ್ತಿದ್ದಾರೆ. ಜನರಿಲ್ಲದೇ ಬಿಕೋ ಎನ್ನುತ್ತಿದ್ದ ವಾಹನಗಳ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳು, ವಿಮಾ ಕಂಪನಿ ಕಚೇರಿಗಳು ಈಗ ಜನರಿಂದ ತುಂಬಿದ್ದು, ದುಬಾರಿ ದಂಡ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸುತ್ತಲೇ ಜನ ವಿಮೆ, ತಪಾಸಣೆ ಶುಲ್ಕ ಪಾವತಿಸುತ್ತಿರುವುದು ಎಲ್ಲೆಡೆ ಕಂಡು ಬರುತ್ತಿದೆ.

ಜಿಲ್ಲೆಯಾದ್ಯಂತ ಪೊಲೀಸರು ವಾಹನ ತಪಾಸಣೆ, ದಾಖಲಾತಿ ಪರಿಶೀಲನೆ ಮಾಡುತ್ತಿದ್ದು, ಬಹುತೇಕರು ವಾಹನಗಳನ್ನು ರಸ್ತೆಗಿಳಿಸುವ ಮುನ್ನ ಎಲ್ಲ ದಾಖಲಾತಿಗಳನ್ನು ಹೊಂದಿಸಿಕೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ಹಾವೇರಿ, ರಾಣಿಬೆನ್ನೂರಿನ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಜನಸಂದಣಿ ಹೆಚ್ಚಾಗಿದೆ.

ವಾಹನ ಚಾಲನಾ ಪರವಾನಗಿ ಇಲ್ಲದವರು ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಹೋಗಿ ಪರವಾನಗಿ ಅರ್ಜಿ ಹಾಕುವುದು, ಇದಕ್ಕಾಗಿ ಏಜೆಂಟರಲ್ಲಿ ಶುಲ್ಕ ವಿಚಾರಿಸುತ್ತಿದ್ದಾರೆ. ಕೆಲ ಏಜೆಂಟರಂತೂ ಇದನ್ನೇ ಒಂದು ಅವಕಾಶವಾಗಿ ಮಾರ್ಪಡಿಸಿಕೊಂಡು ಶೀಘ್ರ ವಾಹನ ಚಾಲನಾ ಪರವಾನಗಿ ಪತ್ರ ಮಾಡಿಸಿಕೊಡಲು ನಿಗದಿತ ಶುಲ್ಕಕ್ಕಿಂತ ಶೇ. 8-10ರಷ್ಟು ಹಣ ಕೀಳಲು ಮುಂದಾಗಿದ್ದಾರೆ.

ವಿಮೆ ಕಚೇರಿಗಳಲ್ಲೂ ಜನದಟ್ಟಣೆ : ಅದೇ ರೀತಿ ವಿಮೆ ಕಂಪನಿ ಕಚೇರಿಗಳಲ್ಲಿಯೂ ಜನರು ಸರದಿ ನಿಂತು ವಾಹನಗಳಿಗೆ ವಿಮೆ ಮಾಡಿಸುತ್ತಿದ್ದಾರೆ. ವಿವಿಧ ವಿಮಾ ಕಂಪನಿಗಳ ಪ್ರತಿನಿಧಿಗಳು ಸಹ ನಾಮುಂದು, ತಾಮುಂದು ಎಂದು ಸ್ಪರ್ಧೆಯೊಡ್ಡಿ ಗ್ರಾಹಕರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ. ಕೆಲ ವಿಮಾ ಕಂಪನಿಗಳಂತೂ ವಿಮೆ ಮಾಡಿಸುವ ಸಂಚಾರಿ ವಾಹನ ಮಾಡಿಕೊಂಡು ಸಾರಿಗೆ ಕಚೇರಿಯ ಹೊರಗಡೆಯೇ ನಿಂತುಬಿಟ್ಟಿವೆ.

ವಿಮಾ ಕಚೇರಿ ಬಾಗಿಲು ತೆರೆಯುವ ಮುನ್ನವೇ ಗ್ರಾಮೀಣ ಭಾಗಗಳಿಂದ ಜನರು ವಾಹನಗಳನ್ನು ತಂದು ನಿಲ್ಲಿಸುತ್ತಿದ್ದಾರೆ.

ಕಾರು ಇನ್ನಿತರ ನಾಲ್ಕು ಚಕ್ರಗಳ ವಾಹನಕ್ಕಿಂತ ದ್ವಿಚಕ್ರ ವಾಹನಗಳೇ ಹೆಚ್ಚಾಗಿ ಬರುತ್ತಿವೆ. ಜನರು ಒಮ್ಮೇಲೇ ವಾಹನ ವಿಮೆ ಮಾಡಿಸಲು ಬರುತ್ತಿರುವುದರಿಂದ ವಿಮಾ ಕಂಪನಿ ನೌಕರರ ಮೇಲೆ ಒತ್ತಡ ಹೆಚ್ಚಾಗಿದೆ. ದ್ವಿಚಕ್ರ ವಾಹನಗಳಿಗೆ ಬಹುತೇಕರು ಥರ್ಡ್‌ ಪಾರ್ಟಿ ವಿಮೆಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಆದರೂ ಸುಮಾರು 1500 ರೂ.ಗಳಷ್ಟು ವಿಮಾ ಕಂತು ಭರಿಸಬೇಕಾಗಿದ್ದು, ಇತ್ತ ವಿಮೆ ಮೊತ್ತವೂ ಹೆಚ್ಚಾಗಿದೆ. ಬಿಟ್ಟರೆ ಪೊಲೀಸರ ದಂಡ ದುಪ್ಪಟ್ಟಾಗಿದೆ. ಹೀಗಾದರೆ ಸಾಮಾನ್ಯರು ಬದುಕುವುದು ಹೇಗೆ ಎಂದು ಗೊಣಗುತ್ತಲೇ ವಿಮೆ ಮಾಡಿಸಿಕೊಳ್ಳುತ್ತಿದ್ದಾರೆ.

ತಪಾಸಣೆ ಕೇಂದ್ರದಲ್ಲೂ ಸರದಿ: ಪ್ರಾದೇಶಿಕ ಸಾರಿಗೆ ಕಚೇರಿ, ವಿಮಾ ಕಚೇರಿ ಅಷ್ಟೇ ಅಲ್ಲದೇ ವಾಹನಗಳ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿಯೂ ವಾಹನಗಳ ಸರದಿ ಕಂಡು ಬರುತ್ತಿದೆ. ಜಿಲ್ಲೆಯಲ್ಲಿ ಒಟ್ಟು 13 ವಾಹನ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಆರು, ರಾಣಿಬೆನ್ನೂರಿನಲ್ಲಿ ಮೂರು, ಸವಣೂರು, ಬೊಮ್ಮನಳ್ಳಿ, ಹಿರೇಕೆರೂರು, ಕುಮಾರಪಟ್ಟಣದಲ್ಲಿ ತಲಾ ಒಂದು ವಾಹನಗಳ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಿವೆ. ಇಲ್ಲಿ ವಾಹನಗಳ ತಪಾಸಣೆ ಮಾಡಿಸಿ, ಪ್ರಮಾಣ ಪತ್ರ ಪಡೆದು ಕೊಳ್ಳುತ್ತಿದ್ದಾರೆ.

ಒಟ್ಟಾರೆ ಸಂಚಾರಿ ನಿಯಮ ಉಲ್ಲಂಘನೆಗೆ ವಿಸಿರುವ ದುಬಾರಿ ದಂಡ ವಾಹನ ಸವಾರರ ನಿದ್ದೆಗೆಡಿಸಿದ್ದು, ಎಲ್ಲರೂ ವಾಹನ ರಸ್ತೆಗಿಳಿಸುವ ಮುನ್ನ ದಾಖಲೆ ಪತ್ರ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.