ಮೋಸಗಾರ ಸರ್ಕಾರವೆಂದು ಜನರಿಗೆ ಅರ್ಥವಾಗಿದೆ: ಕೆ.ಎಸ್.ಈಶ್ವರಪ್ಪ
Team Udayavani, Jun 24, 2023, 3:08 PM IST
ಹಾವೇರಿ: ಗ್ಯಾರಂಟಿ ಯೋಜನೆಗಳನ್ನು ನಂಬಿಕೊಂಡು ರಾಜ್ಯದ ಜನರು ಕಾಂಗ್ರೆಸ್ ಗೆ ವೋಟ್ ಕೊಟ್ಟಿದ್ದರು. ಈಗ ಇದೊಂದು ಮೋಸಗಾರ ಸರಕಾರ ಎಂದು ಜನರೇ ವಿರೋಧ ಮಾಡಲು ಆರಂಭಿಸಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಮೋಸದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೆಂದು ಜನರು ಪರಿತಪಿಸುತ್ತಿದ್ದಾರೆ. ಕೇಂದ್ರ ಸರಕಾರ ಅಕ್ಕಿ ಕೊಟ್ಟಿಲ್ಲವೆಂದು ಕಾಂಗ್ರೆಸ್ ನವರು ದಾರಿ ತಪ್ಪಿಸುತ್ತಿದ್ದಾರೆ. ಈ ಸರಕಾರ ಎಷ್ಟು ದಿನ ಇರುತ್ತದೆ ಗೊತ್ತಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಐದು ಗ್ಯಾರಂಟಿಗೆ ಎಲ್ಲಿಂದ ಹಣ ತರುತ್ತಿರಿ. ಕೇಂದ್ರ ಸರಕಾರದ ವಿರುದ್ಧ ಆಪಾದನೆ ಮಾಡುತ್ತಾ ಹೊರಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಬಂದ್ ಮಾಡಿದ್ದಾರೆ. ಸರ್ಕಾರ ಆರ್ಥಿಕ ದಿವಾಳಿಯಾಗಿದೆ. ಬಿಜೆಪಿ ಕಾರ್ಯಕರ್ತರಿಗೆ ನಮ್ಮ ಸರಕಾರ ಬರಲಿಲ್ಲ ಎನ್ನುವುದು ತಾತ್ಕಾಲಿಕ ನಿರಾಶೆ ಅಷ್ಟೇ ಎಂದರು.
ಇದನ್ನೂ ಓದಿ:ಬಿಜೆಪಿಯವರು ಮೊದಲು ತಮ್ಮ ಗೊಂದಲ ಸರಿಪಡಿಸಿಕೊಳ್ಳಲಿ: ಜಗದೀಶ್ ಶೆಟ್ಟರ್
ತಾಪಂ, ಜಿಪಂ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸುತ್ತೆ. ರಾಜಕಾರಣದಲ್ಲಿ ಶಾಶ್ವತ ವೈರತ್ವ ಇರುವುದಿಲ್ಲ. ಕಾಂಗ್ರೆಸ್ ದೇಶದಲ್ಲಿ ಮಲಗಿ ಹೋಗಿದ್ದು ಅಲ್ಲಿಗೆ ಜಗದೀಶ್ ಶೆಟ್ಟರ್ ಸೇರಿಕೊಂಡಿದ್ದಾರೆ ಎಂದರು.
ಕಟೀಲ್ ಜೊತೆಗೆ ಮಾತನಾಡಿದ್ದೇನೆ. ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯನವರು ಯಾವತ್ತು ಹೇಳುತ್ತಾರೋ ಆವತ್ತೇ ಕಾಂಗ್ರೆಸ್ ಸರಕಾರ ಬೀಳುತ್ತದೆ. 5 ಕೆಜಿ ಅಕ್ಕಿ ಕೊಡುತ್ತಿರುವುದಕ್ಕೆ ಪ್ರಧಾನಮಂತ್ರಿಗಳಿಗೆ ಧನ್ಯವಾದ ಹೇಳಿದ್ರಾ? ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಇದ್ಯಾವ ನ್ಯಾಯ ಎಂದು ಕಿಡಿಕಾರಿದ ಅವರು, ವಿಧಾನಸಭೆ ಸೋಲು ಕೆಟ್ಟ ಕನಸು ಎಂದು ನಾವು ಮರೆತಿದ್ದೇವೆ ಎಂದರು.
ಕಾಂತೇಶ ಹಾವೇರಿ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂತೇಶ ಹಾವೇರಿಯಿಂದ ಲೋಕಸಭೆಗೆ ನಿಲ್ಲಲು ಅಪೇಕ್ಷೆ ಪಡುತ್ತಿರುವುದು ನಿಜ. ಕಾಂತೇಶ ಅಷ್ಟೆ ಅಲ್ಲ ಹಲವರು ಅಪೇಕ್ಷೆ ಪಟ್ಟಿದ್ದಾರೆ ತಪ್ಪಲ್ಲ. ಶಿವಕುಮಾರ್ ಉದಾಸಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದಾರೆ ಎಂದರು.
ಸಿದ್ದರಾಮಯ್ಯನವರು ಕುರುಬರು, ದಲಿತರಿಗೆ ದ್ರೋಹ ಮಾಡಿ ಸಿಎಂ ಆಗಿದ್ದಾರೆ. ಕಾಂಗ್ರೆಸ್ ನವರಿಗೆ ಹಿಂದೂ ಅಂದರೆ ದ್ವೇಷ, ಮುಸಲ್ಮಾನರು ಅಂದರೆ ಬೀಗರು ಇದ್ದಹಾಗೆ. ಹಿಂದು ದೇವಾಲಯಗಳನ್ನು ಒಡೆದು ಮಸಿದಿ ಕಟ್ಟಿದ್ದರು. ಹಿಂದೂ ದೇವಾಲಯ ಒಡೆದು ಕಟ್ಟಿದ ಮಸೀದಿಗಳು ಮುಂದಿನ ದಿನಗಳಲ್ಲಿ ಉಳಿಯಲ್ಲ, ಅಲ್ಲಿ ಹಿಂದೂ ದೇವಾಲಯಗಳು ಬರುತ್ತವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಮಾಜಿ ಸಚಿವ ಶಿವರಾಜ ಸಜ್ಜನರ, ಗವಿಸಿದ್ದಪ್ಪ ದ್ಯಾಮಣ್ಣವರ, ಪ್ರಭು ಹಿಟ್ನಳ್ಳಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ