ಕಾರ್ಖಾನೆ ಆರಂಭಕ್ಕೆ ಅನುಮತಿ
Team Udayavani, Apr 5, 2020, 2:57 PM IST
ಹಾವೇರಿ: ಕೋವಿಡ್ 19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ಡೌನ್ ಅವಧಿಯಲ್ಲಿ ಸ್ಥಗಿತಗೊಳಿಸಲಾದ ಅಗತ್ಯ ವಸ್ತುಗಳ ಕಾರ್ಖಾನೆಗಳನ್ನು ಆರೋಗ್ಯ ಇಲಾಖೆಯ ಮಾರ್ಗಸೂಚಿ ಪಾಲಿಸುವ ಷರತ್ತಿನೊಂದಿಗೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪರವಾನಗಿ ನೀಡಲಿದ್ದು, ಕಾರ್ಖಾನೆಗಳನ್ನು ಆರಂಭಿಸುವಂತೆ ಜಿಲ್ಲೆಯ ಕೈಗಾರಿಕೋದ್ಯಮಗಳಿಗೆ ಜಿಪಂ ಸಿಇಒ ರಮೇಶ ದೇಸಾಯಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಕೈಗಾರಿಕೋದ್ಯಮಿಗಳ ಸಭೆ ನಡೆಸಿದ ಅವರು, ರೈತರ ಸಾಮಗ್ರಿಗಳುಮಾರುಕಟ್ಟೆಗೆ ಹೋಗಬೇಕು. ಗ್ರಾಹಕರಿಗೆ ಅಗತ್ಯ ವಸ್ತುಗಳ ಕೊರತೆಯಾಗಬಾರದು. ಈ ಹಿನ್ನೆಲೆಯಲ್ಲಿ ಕೃಷಿಗೆ ಪೂರಕವಾದ ಕೈಗಾರಿಕೆಗಳು, ದಿನಸಿ ಪೂರಕ ಆಹಾರ ಸಂಸ್ಕರಣ ಘಟಕಗಳು, ಬೇಕರಿ ಸೇರಿದಂತೆ ನಿತ್ಯ ಬಳಕೆಯ ಉತ್ಪಾದನಾ ಘಟಕಗಳನ್ನು ಸುರಕ್ಷತಾ ಮಾನದಂಡವನ್ನು ಅನುಸರಿಸಿ ಆರಂಭಿಸಲು ಅನುಮತಿ ನೀಡಲಾಗುವುದು ಎಂದು ತಿಳಿಸಿದರು.
ಕೃಷಿ ಚಟುವಟಿಕೆಗೆ ಅನುಕೂಲಕರವಾಗುವ ಟ್ರ್ಯಾಕ್ಟರ್ ರಿಪೇರಿ, ಕೃಷಿ ಉಪಕರಣಗಳ ರಿಪೇರಿಗೆ ಯಾವುದೇ ನಿರ್ಬಂಧವಿಲ್ಲ. ಸರಕು ಸಾಗಾಣಿಕೆ ವಾಹನಗಳ ಗ್ಯಾರೇಜ್ಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗುವುದು. ಕಾರ್ಖಾನೆ ಮಾಲೀಕರು ತಮ್ಮ ಕಾರ್ಮಿಕರಿಗೆ ಬೇಕಾದ ಪಾಸ್ಗಳನ್ನು ಪಡೆಯಬೇಕು ಎಂದು ಸೂಚಿಸಿದರು.
ಕೃಷಿ ಸೇವಾ ವಲಯ, ಕೃಷಿ ಬೀಜ ಉತ್ಪಾದನೆ, ರೇಷ್ಮೆ ಮಾರಾಟ, ಹೈನುಗಾರಿಕೆ, ಜಿನ್ನಿಂಗ್, ರಸಗೊಬ್ಬರ, ಆಹಾರ ಸಾಮಗ್ರಿಗಳ ಸಂಸ್ಕರಣೆ, ಗಿರಣಿ, ಎಣ್ಣೆ ಮತ್ತು ಪ್ಯಾಕಿಂಗ್ ಇಂಡಸ್ಟ್ರೀಸ್, ಬೇಕರಿ, ಫಿಶ್, ಪೌಟ್ರಿ, ಕ್ಯಾಟಲ್ ಫೀಡ್, ವೈದ್ಯಕೀಯ ಸುರಕ್ಷಾ ಸಾಮಗ್ರಿಗಳಾದ ಮಾಸ್ಕ್, ಸ್ಯಾನಿಟೈಸರ್ ತಯಾರಿಕೆ ಸೇರಿದಂತೆ ಅಗತ್ಯ ವಸ್ತುಗಳ ಉತ್ಪಾದನೆ ಆರಂಭಿಸಲು ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಯೊಗೇಶ್ವರ ಮಾತನಾಡಿ, ಕಾರ್ಖಾನೆಗಳ ಆರಂಭಕ್ಕೆ ಸರ್ಕಾರದ ಅಧಿಸೂಚನೆಯಂತೆ ವಿನಾಯಿತಿ ಪಡೆದಿರಬೇಕು. ಕಾರ್ಖಾನೆಯ ಪ್ರವೇಶದಿಂದ ಹಿಡಿದು ಹೊರಗೆ ಬರುವವರೆಗೂ ಅವರಿಗೆ ಕೋವಿಡ್ 19 ವೈರಸ್ ಹರಡದಂತೆ ಮುಂಜಾಗ್ರತೆ ಹಾಗೂ ಸುರಕ್ಷಾ ಮಾರ್ಗಸೂಚಿ ಅಳವಡಿಸಬೇಕು. ಪ್ರತಿ ಕಾರ್ಮಿಕರಿಗೂ ಉತ್ತಮ ಗುಣಮಟ್ಟ ಮಾಸ್ಕ್, ಸ್ಯಾನಿಟೈಸರ್, ಕೈಗವಸ್ ಒದಗಿಸಬೇಕು. ಪ್ರತಿ ಕಾರ್ಖಾನೆಯ ಒಳಗೆ ಹಾಗೂ ಕೆಲಸ ಮಾಡುವ ಜಾಗದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಪ್ರತಿನಿತ್ಯ ಕಾರ್ಮಿಕರಿಗೆ ಕೋವಿಡ್ 19 ಜಾಗೃತಿ ಮುನ್ನೆಚ್ಚರಿಕೆ ಕುರಿತಂತೆ ಜಾಗೃತಿ ಮೂಡಿಸಬೇಕು. ಕಾರ್ಮಿಕರಿಗೆ ಕೆಲಸ ಮಾಡುವ ಸ್ಥಳಕ್ಕೆ ಮನೆಯಿಂದ ಹೋಗಲು ಪಾಸ್ ನೀಡಲಾಗುವುದು. ಪಾಸ್ ವ್ಯವಸ್ಥೆಗಾಗಿ ಜಿಲ್ಲಾಡಳಿತ ಭವನದಲ್ಲಿ ಸ್ಪಂದನ ಕೇಂದ್ರ ತೆರೆಯಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ| ದಿಲೀಷ್, ಕೈಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ವಿನಾಯಕ ಜೋಶಿ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಕೈಗಾರಿಕೋದ್ಯಮಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ