ವರಾಹ ನಿಗ್ರಹಕ್ಕೆ ನಗರಸಭೆ ಸಮರ

15 ದಿನದಲ್ಲಿ ಹಂದಿಗಳ ಸ್ಥಳಾಂತರಕ್ಕೆ ನೋಟಿಸ್‌,c ಖಾಲಿ ಜಾಗ ಸ್ವಚ್ಛಗೊಳಿಸಿ ಉತಾರದ ಮೇಲೆ ಬೋಜಾ

Team Udayavani, Mar 1, 2021, 4:50 PM IST

ವರಾಹ ನಿಗ್ರಹಕ್ಕೆ ನಗರಸಭೆ ಸಮರ

ಹಾವೇರಿ: ನಗರ ಬೆಳೆದಂತೆ ಕೊಳಚೆ, ತ್ಯಾಜ್ಯವೂ ಹೆಚ್ಚುತ್ತಿದ್ದು, ಅದರ ಜತೆಗೆ ಹಂದಿಗಳ ಸಂತತಿಯೂ ಬೆಳೆಯುತ್ತಿದೆ. ಈಗಅದರ ನಿಯಂತ್ರಣ ನಗರಸಭೆಗೆ ದೊಡ್ಡ ಸವಾಲಾಗಿದೆ. ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸಿರುವ ನಗರದಲ್ಲಿ ತುರ್ತಾಗಿಹಂದಿ ಕಾಟ ನಿಗ್ರಹಿಸುವುದು ಅನಿವಾರ್ಯವಾಗಿದ್ದು, ನಗರಸಭೆಯಿಂದ ಶೀಘ್ರ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿದೆ.

ಅಖೀಲ ಭಾರತ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸುತ್ತಿರುವುದರಿಂದ ನಗರಕ್ಕೆ ಲಕ್ಷಾಂತರ ಜನರುಆಗಮಿಸುವ ಹಿನ್ನೆಲೆಯಲ್ಲಿ ನಗರ ಸೌಂದರ್ಯಿಕರಣ,ನೈರ್ಮಲ್ಯ ಕಾಪಾಡುವುದು ಮುಖ್ಯವಾಗಿದೆ. ಆದರೆ,ನಗರದಲ್ಲಿ ಹಂದಿ ಹಾವಳಿ ವಿಪರೀತವಾಗಿದ್ದು, ಎಲ್ಲೆಂದರಲ್ಲಿ ಕಾಣಿಸುವ ಹಂದಿಗಳ ಹಿಂಡು ಕೊಚ್ಚೆಯನ್ನು ಇನ್ನಷ್ಟು ವಿಸ್ತಾರಗೊಳಿಸುತ್ತಿವೆ. ಸಮ್ಮೇಳನದೊಳಗೆ ಹಂದಿ ಹಾವಳಿ ತಪ್ಪಿಸದಿದ್ದರೆ ಇಲ್ಲಿಗೆ ಬಂದವರು ಇದು ಏಲಕ್ಕಿ ಕಂಪಿನ ನಾಡೋ ಅಥವಾ ಹಂದಿಗಳ ಬೀಡೋ ಎಂದು ಆಡಿಕೊಳ್ಳುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ ನಗರಸಭೆ ನಗರದ ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡಬೇಕಿದೆ.

ಹಂದಿ ನಿಯಂತ್ರಣ ಸವಾಲು: ಇಲ್ಲಿರುವ ಹಂದಿ ಹಾವಳಿ ನೋಡಿ ಅಸಹ್ಯ ಪಟ್ಟುಕೊಳ್ಳುವಂತಾಗಿದೆ. ಖಾಲಿ ನಿವೇಶನಗಳಲ್ಲಿ ಕಸ, ತ್ಯಾಜ್ಯ ಎಸೆಯುತ್ತಿರುವುದರಿಂದ ಅವುಹಂದಿಗಳ ಆವಾಸ ತಾಣವಾಗುತ್ತಿವೆ. ಪೌರಕಾರ್ಮಿಕರು ನಗರ ಸ್ವತ್ಛತೆಗೆ ಎಷ್ಟೇ ಶ್ರಮಿಸುತ್ತಿದ್ದರೂ ಹಂದಿಗಳು ಅವರ ಶ್ರಮವನ್ನು ಕ್ಷಣಾರ್ಧದಲ್ಲಿ ವ್ಯರ್ಥಗೊಳಿಸುತ್ತಿವೆ. ಸಂತೆ, ಮಾರುಕಟ್ಟೆ ಪ್ರದೇಶ, ಬಸ್‌ ನಿಲ್ದಾಣ, ಹೋಟೆಲ್‌ ಸುತ್ತಮುತ್ತ ಹಂದಿಗಳ ಹಿಂಡೇ ಕಾಣುತ್ತಿವೆ. ಹಂದಿ ಕಾಟದಿಂದ ಮುಕ್ತಿ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹಂದಿ ನಿರ್ಮೂಲನೆಗೆ ಪಣ: ನಗರಸಭೆ ಅಧ್ಯಕ್ಷ‌ರಾಗಿ ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿರುವ ಸಂಜೀವಕುಮಾರ ನೀರಲಗಿ ಅವರು ಹಂದಿ ನಿರ್ಮೂಲನೆಜತೆಗೆ ನಗರ ಸೌಂದರ್ಯಿಕರಣಕ್ಕೆ ಮುಂದಾಗಿರುವುದುಆಶಾದಾಯಕ ಬೆಳವಣಿಗೆ. 15 ದಿನಗ ಳೊಳಗಾಗಿ ಹಂದಿ ಸ್ಥಳಾಂತರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿಎಚ್ಚರಿಕೆ ನೀಡಿದ್ದಾರೆ. ಈ ಗಡುವು ಮುಗಿದಿದ್ದರೂ ಹಂದಿ ಮಾಲಿಕರು ಇದುವರೆಗೆ ಯಾವುದೇ  ಕ್ರಮಕೈಗೊಂಡಿಲ್ಲ. ಇನ್ನು ಖಾಲಿ ನಿವೇಶನದಾರರಿಗೂ ನೋಟಿಸ್‌ ನೀಡಲಾಗಿದ್ದು, ಸ್ವಚ್ಛಗೊಳಿಸದಿದ್ದರೆ ನಗರಸಭೆಯಿಂದಲೇ ಆ ಜಾಗವನ್ನು ಸ್ವಚ್ಛಗೊಳಿಸಿ ಅದಕ್ಕೆ ತಗಲುವ ಖರ್ಚನ್ನು ಜಾಗದ ಉತಾರದ ಮೇಲೆ ಭೋಜಾ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದರೂ ಸಂಬಂಧಪಟ್ಟವರು ಗಮನ ನೀಡುತ್ತಿಲ್ಲ.

ತ್ಯಾಜ್ಯ ಸಂಗ್ರಹಣೆಯಲ್ಲಿ ನಗರಸಭೆ ನಿರ್ಲಕ್ಷ್ಯ :

ನಗರಸಭೆ ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. 31 ವಾರ್ಡ್‌ಗಳಿದ್ದು, ಕೆಲ ಮುಂದುವರಿದ ವಾರ್ಡ್‌ಗಳಲ್ಲಷ್ಟೇ ಸ್ವಲ್ಪ ಮಟ್ಟಿಗೆ ಕಸ ತ್ಯಾಜ್ಯ ಸಂಗ್ರಹಣೆ ನಡೆಯುತ್ತಿದೆ. ನಿತ್ಯವೂ ಘನ ಮತ್ತು ಹಸಿ ತ್ಯಾಜ್ಯ ಸಂಗ್ರಹಿಸಬೇಕೆಂಬ ನಿಯಮವಿದ್ದರೂ ಕೆಲವು ವಾರ್ಡ್‌ಗಳಲ್ಲಿ ವಾರದಲ್ಲಿ ಒಂದು, ಎರಡು ಬಾರಿ ಮಾತ್ರ ಮನೆ ಮನೆಯಿಂದತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ಜನರು ಅಕ್ಕಪಕ್ಕದ ಖಾಲಿನಿವೇಶನಗಳಲ್ಲಿ ತ್ಯಾಜ್ಯ ಎಸೆಯುತ್ತಿದ್ದಾರೆ. ಅದಕ್ಕಾಗಿ ತ್ಯಾಜ್ಯ ಸಂಗ್ರಹಣೆಗೆ ಹೆಚ್ಚು ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ನಗರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ನಗರಸೌಂದರ್ಯಿಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ಹಂದಿ ಮಾಲಿಕರಿಗೆ ನೀಡಿದ್ದ ಗಡುವುಮುಗಿದಿದೆ. ಮತ್ತೂಂದು ಬಾರಿ ಅವರಿಗೆ ಮನವರಿಕೆ ಮಾಡುತ್ತೇವೆ. ಶೀಘ್ರವೇ ನಗರಸಭೆ ಸಾಮಾನ್ಯ ಸಭೆಕರೆದು ಹಂದಿ ಹಿಡಿಯುವ ಕಾರ್ಯಾಚರಣೆ ನಡೆಸುವ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು. ಖಾಲಿ ನಿವೇಶನ ಸ್ವಚ್ಛತೆಗೂ ಕ್ರಮ ಕೈಗೊಳ್ಳಲಾಗುವುದು. -ಸಂಜೀವಕುಮಾರ ನೀರಲಗಿ, ನಗರಸಭೆ ಅಧ್ಯಕ್ಷ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.