ನಕಲಿ ಬೀಜ ಮಾರುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿಲ್ಲ: ಸಚಿವ ಬಿ ಸಿ ಪಾಟೀಲ್ ಆಕ್ರೋಶ
Team Udayavani, May 1, 2020, 2:52 PM IST
ಹಾವೇರಿ: ರಾಜ್ಯದಲ್ಲಿ ಕಳಪೆ ಗುಣಮುಟ್ಟದ ಮತ್ತು ನಕಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಲಾಗುತ್ತುದೆ. ಕಳಪೆ ಬೀಜ ಮಾರುವ ಮೂಲ ಬೇರು ತೆಗೆಯಬೇಕಾಗಿದೆ .ಆದರೆ ಈ ಜಾಲದ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಾವೇರಿ, ಧಾರವಾಡ, ಬಳ್ಳಾರಿ 1685 ಕ್ಚಿಂಟಲ್ ಕಳಪೆ ಬೀಜ ವಶಕ್ಕೆ ಪಡೆಯಲಾಗಿದೆ. ಮುಸುಕಿನ ಜೋಳ, ಸೂರ್ಯಕಾಂತಿ ಸೇದಂತೆ ಅನೇಕ ಬೀಜ ವಶಪಡಿಸಿಕೊಂಡಿದ್ದಾರೆ. ಕಳಪೆ ಬೀಜ ಮಾರುವ ಮೂಲ ಬೇರು ತೆಗೆಯಬೇಕಾಗಿದೆ. ಇಲ್ಲವದಾರೆ ಆ ಜಾಲ ಹಾಗೆ ಮುಂದುವರೆಯುತ್ತದೆ. ಪೊಲೀಸ್ ಇಲಾಖೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲಾ. ಇದು ನನಗೆ ಬಹಳ ನೋವಾಗಿದೆ ಎಂದು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರು.
ನಕಲಿ ಬೀಜದ ಮೂಲ ಆಂಧ್ರಪ್ರದೇಶ, ವಿಜಯವಾಡ ಸೇರಿದಂತೆ ಅನೇಕ ಕಡೆ ಇದೆ. ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದೆ ಇರೋದು ವಿಷಾಧನಿಯ. ಈ ಬಗ್ಗೆ ಗೃಹ ಮಂತ್ರಿ, ಡಿಜಿಪಿಗೆ ಪತ್ರ ಬರೆದಿದ್ದೇನೆ. ಈ ಪ್ರಕರಣದಲ್ಲೂ ಕ್ರಮ ಕೈಗೊಳ್ಳಲು ಹಿಂಜರಿದರೆ ರೈತರಿಗೆ ಅಪಚಾರ ಮಾಡಿದಂತಾಗುತ್ತದೆ. ರೈತರನ್ನು ಜೀವಂತ ಸಮಾಧಿ ಮಾಡುವ ಕಲಸ ಇದು ಎಂದು ಪೊಲೀಸ್ ಇಲಾಖೆ, ಗೃಹ ಇಲಾಖೆ ವಿರುದ್ಧ ಸಚಿವ ಬಿ ಸಿ ಪಾಟೀಲ್ ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಯಾವುದೇ ಬೀಜ, ಗೊಬ್ಬರದ ಕೊರತೆಯಿಲ್ಲಾ. ಕೀಟ ನಾಶಕಗಳು ಕಳೆಪೆಯಾಗಿರೋದು ಗಮನಕ್ಕೆ ಬಂದಿದೆ. ಅಂತವರ ಮೇಲೆ ಕ್ರಮ ಕೈಗೊಳ್ಳಲು, ಲೈಸೆನ್ಸ್ ರದ್ದು ಮಾಡಲು ಆದೇಶ ಮಾಡಿದ್ದೇನೆ. ಈ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮೆಕ್ಕೆಜೋಳ ಖರೀದಿಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ. 1760 ರೂಪಾಯಿಗೆ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ