ರಾಜಕಾರಣಕ್ಕೆ ಜ್ಞಾನಿಗಳ ಅಗತ್ಯ: ಉಪೇಂದ್ರ


Team Udayavani, Apr 11, 2019, 4:19 PM IST

hav-1
ಹಾವೇರಿ: ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರೆ ಜನರ ಮತ್ತು ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತಾರೆ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ಚಲನಚಿತ್ರ ನಟ ಉಪೇಂದ್ರ ಹೇಳಿದರು.
ಬುಧವಾರ ಸಂಜೆ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ, ಜಾತಿ, ಬಲ ಏನನ್ನೂ ಕೇಳದೆ ಜನರ ಕೆಲಸ ಮಾಡುವ ಷರತ್ತಿನೊಂದಿಗೆ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ. ರಾಜಕಾರಣಕ್ಕೆ ಜ್ಞಾನಿಗಳು ಮುಂದೆ ಬರಬೇಕೆ ವಿನಃ ಹಣ ಇರುವವರು ಅಲ್ಲ. ರಾಜಕೀಯದಲ್ಲಿ ಬದಲಾವಣೆಗಾಗಿ ಪ್ರಯತ್ನ ನಡೆದಿದ್ದು, ಜನರು ಬೆಂಬಲಿಸುತ್ತಾರೆಂಬ ವಿಶ್ವಾಸವಿದೆ. ನಾವು ಪ್ರಚಾರಕ್ಕಾಗಿ ಜಾಥಾ, ಸಮಾವೇಶ ಮಾಡುವುದಿಲ್ಲ. ಅಭ್ಯರ್ಥಿ ಸಾಧ್ಯವಾದಷ್ಟು ಓಡಾಡಿ ಪ್ರಚಾರ ಮಾಡುತ್ತಾರೆ ಎಂದರು.
ಸದ್ಯದ ರಾಜಕೀಯ ಪರಿಸ್ಥಿತಿ ಹದಗೆಟ್ಟಿದೆ. ಚುನಾವಣೆ ಎಂದರೆ ಬಂಡವಾಳ ಹಾಕಿ ಬಂಡವಾಳ ತೆಗೆಯುವ ಉದ್ಯಮವಾಗಿದೆ. ಇದನ್ನು ಬದಲಿಸಿ ಸಂವಿಧಾನದ ಆಶಯದಂತೆ ಜನರ ಕೈಗೆ ಅಧಿಕಾರ ನೀಡಲು ಉತ್ತಮ ಪ್ರಜಾಕೀಯ ಪಕ್ಷ ಸ್ಥಾಪಿಸಲಾಗಿದೆ. ನಾವು ಸೇವಕರಲ್ಲ, ನಾಯಕರೂ ಅಲ್ಲ. ಮತದಾರರಿಂದ ಮತ ಎಂಬ ಸಂಬಳ ಪಡೆದು ಕೆಲಸ ಮಾಡುವ ಕಾರ್ಮಿಕರು. ಇದರಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲುವುದಕ್ಕಿಂತ ಮತದಾರ ಗೆಲ್ಲಬೇಕು ಎಂದರು.
ಯಾರೋ ನೀಡುವ ಸುಳ್ಳು ಭರವಸೆ ನಂಬಿ ಮೋಸ ಹೋಗದೆ ಜನರು ಹೇಳಿದಂತೆ ನಡೆದುಕೊಳ್ಳುವ ವ್ಯಕ್ತಿಯನ್ನು ಬೆಂಬಲಿಸಬೇಕಿದೆ. ಪಕ್ಷ, ವ್ಯಕ್ತಿಗಿಂತ ವಿಚಾರಗಳು ಚುನಾವಣೆಯಲ್ಲಿ ಮುಖ್ಯವಾಗಬೇಕು.
ನಾವು ಯಾವುದೇ ಪಕ್ಷವನ್ನು ಧೂಷಣೆ ಮಾಡುತ್ತಿಲ್ಲ. ರಾಜಕೀಯದಲ್ಲಿ ಹೊಸ ಬದಲಾವಣೆ ತರಲು ಬಯಸಿದ್ದೇವೆ. ಒಮ್ಮೆಲೇ ಇಡೀ ರಾಜಕೀಯ ವ್ಯವಸ್ಥೆ ಸುಧಾರಿಸುತ್ತೇನೆಂಬ ಭ್ರಮೆಯಿಲ್ಲ. ಆದರೆ, ಶೇ. 80ರಷ್ಟು ಜನರು ಈಗಿನ ರಾಜಕೀಯ ವ್ಯವಸ್ಥೆ ಬಗ್ಗೆ ರೋಸಿ ಹೋಗಿದ್ದಾರೆ. ಅವರು ಬಯಸಿದಂತೆ ಪಕ್ಷ ಕಟ್ಟಲಾಗಿದೆ. ಜನರೇ ಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿ ಗೆಲ್ಲಿಸಿಕೊಂಡು ಬರಬೇಕು. ಇನ್ನು ಕೆಲವು ವರ್ಷಗಳಲ್ಲಾದರೂ ಈ ವ್ಯವಸ್ಥೆ ಬರಲಿದೆ ಎಂಬ ಭರವಸೆ ಇದೆ ಎಂದರು.
ಪಕ್ಷದ ಅಭ್ಯರ್ಥಿ ಈಶ್ವರ ಪಾಟೀಲ ಮಾತನಾಡಿ, ಪಕ್ಷದ ತತ್ವ ಸಿದ್ಧಾಂತಗಳಿಗೆ ಒಪ್ಪಿಕೊಂಡು ಅಭ್ಯರ್ಥಿಯಾಗಿದ್ದೇನೆ.
ಚುನಾವಣೆಯೆಂದರೆ ಜನರ ಕೈಗೆ ಅಧಿಕಾರ ನೀಡುವ ಪ್ರಕ್ರಿಯೆಯೇ ಹೊರತು ನಾಯಕನಿಗಲ್ಲ. ಇಂಥ ವ್ಯವಸ್ಥೆ ಬರಬೇಕು ಎಂಬ ಅಭಿಪ್ರಾಯ ಎಲ್ಲ ಕಡೆಗಳಿಂದ ಬರುತ್ತಿದೆ. ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಮಾಡುವುದಿಲ್ಲ. ನಾಮಪತ್ರ ಸಲ್ಲಿಕೆಗೆ ಠೇವಣಿ ಹಾಗೂ ಕರಪತ್ರ ಮುದ್ರಿಸುವ ಖರ್ಚು ಮಾತ್ರ ಮಾಡುತ್ತಿದ್ದೇನೆ. ಆಯ್ಕೆಯಾದರೆ ದೇಶದಲ್ಲೇ ಮಾದರಿ ರೀತಿಯಲ್ಲಿ ಕೆಲಸ ಮಾಡಿ ತೋರಿಸುತ್ತೇನೆ ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.