ಬಡತನಮುಕ್ತ  ಗ್ರಾಪಂ ನಿರ್ಮಾಣ ಗುರಿ


Team Udayavani, Oct 7, 2018, 4:49 PM IST

7-october-20.gif

ಹಾವೇರಿ: ಬಡತನ ನಿರ್ಮೂಲನೆ ಮಾಡುವ ಮಹತ್ವಾಕಾಂಕ್ಷಿ ಯೋಜನೆಯಾದ ‘ಮಿಷನ್‌ ಅಂತ್ಯೋದಯ’ ಯೋಜನೆಯನ್ನು ಜಿಲ್ಲೆಯ 26 ಗ್ರಾಮ ಪಂಚಾಯಿತಿಗಳ 88 ಹಳ್ಳಿಗಳಲ್ಲಿ ಜಾರಿಗೊಳಿಸಿ ‘ಬಡತನಮುಕ್ತ’ ಗ್ರಾಮ ಪಂಚಾಯತ್‌ ಘೋಷಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಎಂ.ವಿ.ವೆಂಕಟೇಶ್‌ ತಿಳಿಸಿದರು. ‘ಮಿಷನ್‌ ಅಂತ್ಯೋದಯ’ ಯೋಜನೆ ಅನುಷ್ಠಾನ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2020ರ ವೇಳೆಗೆ ಅಭಿವೃದ್ಧಿ ಮತ್ತು ಮೂಲ ಸೌಕರ್ಯದಲ್ಲಿ ಹಿಂದುಳಿದ ದೇಶದ 50 ಸಾವಿರ ಗ್ರಾಮ ಪಂಚಾಯತ್‌ ಹಾಗೂ ರಾಜ್ಯದ 1126 ಗ್ರಾಮ ಪಂಚಾಯಿತಿಗಳನ್ನು ‘ಮಿಷನ್‌ ಅಂತ್ಯೋದಯ’ ಯೋಜನೆಯ ವ್ಯಾಪ್ತಿಗೆ ಒಳಪಡಿಸಿ ವಿವಿಧ ಇಲಾಖೆಯ ಯೋಜನೆಗಳನ್ನು ಸಮನ್ವಯಗೊಳಿಸಿ ಮೂಲ ಸೌಕರ್ಯ, ಮಾನವ ಸಂಪನ್ಮೂಲ ಅಭಿವೃದ್ಧಿ, ಆರ್ಥಿಕ ಬೆಳವಣಿಗೆಗೆ ಅನುಕೂಲವಾದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. 2020ರ ವೇಳೆಗೆ ಸಮಗ್ರ ಅಭಿವೃದ್ಧಿಪಡಿಸಿ ಮಾದರಿ ಗ್ರಾಮ ಪಂಚಾಯಿತಿಯಾಗಿ ರೂಪಿಸಬೇಕಾಗಿದೆ ಎಂದು ತಿಳಿಸಿದರು.

‘ಮಿಷನ್‌ ಅಂತ್ಯೋದಯ’ ಐದು ಅಂಶಗಳ ಆಧಾರಿತ ಕಾರ್ಯಕ್ರಮಗಳಾದ ಮೂಲ ಸೌಕರ್ಯಗಳನ್ನು ಕಲ್ಪಿಸುವುದು, ಆರ್ಥಿಕ ಬೆಳವಣಿಗೆ ಹಾಗೂ ಜೀವನೋಪಾಯ ಕಾರ್ಯಕ್ರಮಗಳ ಅನುಷ್ಠಾನ, ಆರೋಗ್ಯ ಅಪೌಷ್ಟಿಕತೆ ನಿವಾರಣೆ, ಚುಚ್ಚುಮದ್ದುಗಳು ಹಾಕುವುದು, ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಸ್ಥಿರತೆಯನ್ನು ಕಾಪಾಡುವ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿದೆ. ವಿವಿಧ ಇಲಾಖೆಯಡಿ ಕಾರ್ಯಕ್ರಮಗಳನ್ನು ಸಮನ್ವಯತೆಯಿಂದ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದರು.

ಮೂಲ ಸೌಕರ್ಯಗಳಾದ ಬ್ಯಾಂಕ್‌ಗಳ ಸ್ಥಾಪನೆ, ಪ್ರತಿ ಗ್ರಾಮ ಪಂಚಾಯಿತಿಗೊಂದು ಎಟಿಎಂ ಸ್ಥಾಪನೆ, ಎಲ್ಲ ಗ್ರಾಮಗಳಿಗೆ ಸಾರಿಗೆ ಸೌಕರ್ಯ, ಪ್ರತಿ ಗ್ರಾಮಗಳಲ್ಲೂ ಸರ್ವಋತು ರಸ್ತೆ, ಪ್ರತಿ ಮನೆಗೂ ವಿದ್ಯುತ್‌ ವ್ಯವಸ್ಥೆ, ಪ್ರತಿ ಗ್ರಾಮಗಳಲ್ಲೂ ನಳದ ಮೂಲಕ ಕುಡಿಯುವ ನೀರಿನ ವ್ಯವಸ್ಥೆ, ದೂರವಾಣಿ ಸಂಪರ್ಕ, ಅಂಚೆ ಕಚೇರಿ, ಮಾರುಕಟ್ಟೆ ವ್ಯವಸ್ಥೆ, ಪಡಿತರ ಚೀಟಿ ವ್ಯವಸ್ಥೆ, ಪಶು, ಶಾಲಾ, ಚರಂಡಿ ವ್ಯವಸ್ಥೆ, ಕಸ ವಿಲೇವಾರಿ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಅಂಗನವಾಡಿ ಕೇಂದ್ರಗಳ ವ್ಯವಸ್ಥೆ, ಗ್ರಾಮ ಪಂಚಾಯತಿಗೊಂದು ಮಣ್ಣು ಪರೀಕ್ಷಾಕೇಂದ್ರ, ಬೀಜ ಉತ್ಪಾದನಾ ಕೇಂದ್ರ, ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘಗಳಲ್ಲಿ ಮನೆಗೊಬ್ಬರು ಸದಸ್ಯತ್ವ ಪಡೆಯುವುದು ಕಡ್ಡಾಯಗೊಳಿಸುವುದು ಇದರಲ್ಲಿ ಸೇರಿದೆ ಎಂದರು.

ಸಾಮಾನ್ಯ ಸೇವಾ ಕೇಂದ್ರ: ತಾಂತ್ರಿಕವಾಗಿ ಗ್ರಾಮಗಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ 224 ಗ್ರಾಮ ಪಂಚಾಯಿತಿಯ 692 ಹಳ್ಳಿಗಳಲ್ಲಿ ಸಾಮಾನ್ಯ ಸೇವಾ ಕೇಂದ್ರಗಳನ್ನು ಆರಂಭಿಸಬೇಕು. ಮೊದಲ ಹಂತವಾಗಿ 26 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಿ ಏಕಗವಾಕ್ಷಿ ಪದ್ಧತಿಯಲ್ಲಿ ಗಣಕೀಕೃತ ವ್ಯವಸ್ಥೆಯಲ್ಲಿ ರೈತರಿಗೆ ಗ್ರಾಮದ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ದಾಖಲೆಗಳನ್ನು ಪಡೆಯಲು ಅನುಕೂಲವಾಗಬೇಕು. ಇದರಿಂದ ಸಮಯ, ಹಣ ಉಳಿತಾಯವಾಗುತ್ತದೆ ಹಾಗೂ ಅನಗತ್ಯ ಇಲಾಖಾವಾರು ಅಲೆದಾಟ ತಪ್ಪುತ್ತದೆ.

ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಕಂದಾಯ ದಾಖಲೆಗಳು, ವಿದ್ಯುತ್‌ ಹಾಗೂ ವಾಟರ್‌ ಬಿಲ್‌ ಪಾವತಿ ಸೇರಿದಂತೆ ಅಗತ್ಯವಾದ ದಾಖಲೆಗಳನ್ನು ಪಡೆಯಲು ಹಾಗೂ ಬಿಲ್‌ಗ‌ಳ ಪಾವತಿಗೆ ಅನುಕೂಲವಾಗುವಂತೆ ಈ ಕೇಂದ್ರಗಳನ್ನು ತೆರೆಯಬೇಕು. ಈ ನಿಟ್ಟಿನಲ್ಲಿ ಗ್ರಾಮದಲ್ಲಿನ ನಿರುದ್ಯೋಗಿಗಳನ್ನು ಗುರುತಿಸಿ ಸೇವಾ ಕೇಂದ್ರಗಳಿಗೆ ಅಗತ್ಯವಾದ ಕಂಪ್ಯೂಟರ್‌, ಸ್ಕ್ಯಾನರ್‌, ನೆಟ್‌ವರ್ಕಿಂಗ್‌ ಸಿಸ್ಟ್‌ಂ ಅಳವಡಿಸಲು ಬ್ಯಾಂಕಿನಿಂದ ಸಾಲರೂಪದಲ್ಲಿ ನೆರವು ನೀಡಬೇಕು ಎಂದು ಈ ಕುರಿತಂತೆ ಕ್ರಮ ವಹಿಸಲು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರಿಗೆ ಹಾಗೂ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಪ್ಲಾಸ್ಟಿಕ್‌ ನಿಷೇಧ: ಈ 26 ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್‌ ನಿಷೇಧಿಸಬೇಕು. ಬದಲಿಯಾಗಿ ಸೆಣಬಿನ ಬ್ಯಾಗ್‌, ಕಾಟನ್‌ ಬ್ಯಾಗ್‌ಗಳ ಬಳಕೆಗೆ ಸ್ಥಳೀಯವಾಗಿ ಉತ್ಪಾದನೆಗೆ ಉತ್ತೇಜಿಸುವ ಕಾರ್ಯಕ್ರಮಗಳನ್ನು ಹಾಕಿಕೊಂಡು ಸೂಕ್ತ
ತರಬೇತಿ ನೀಡುವಂತೆ ಸೂಚಿಸಿದರು. ಪ್ರತಿ ಗ್ರಾಮದಲ್ಲೂ ಕಸವಿಲೇವಾರಿ ಹಾಗೂ ಕಾಂಪೋಸ್ಟ್‌ ಗೊಬ್ಬರ ತಯಾರಿಕೆ ಘಟಕಗಳ ಸ್ಥಾಪನೆಗೆ ಸೂಕ್ತ ಜಮೀನನ್ನು ಗುರುತಿಸಬೇಕು. ಸ್ಮಶಾನವಿಲ್ಲದ ಗ್ರಾಮಗಳಲ್ಲಿ ಸ್ಮಶಾನ ಜಾಗವನ್ನು ಗುರುತಿಸಿ ಉದ್ಯೋಗ ಖಾತ್ರಿಯಡಿ ಆವರಣಗೋಡೆ ಹಾಗೂ ಮರಗಳನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವಂತೆ ಸೂಚಿಸಿದರು.

ಅಲೇಮಾರಿ, ಅರೇಅಲೆಮಾರಿ, ದೇವದಾಸಿ ಹಾಗೂ ಇತರ ಕಡುಬಡವ ನಿವೇಶನರಹಿತ ಕುಟುಂಬಗಳನ್ನು ಗುರುತಿಸಿ ನಿವೇಶ ಒದಗಿಸುವ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಜಮೀನು ಗುರುತಿಸಬೇಕು. ಗ್ರಾಮ ಠಾಣಾ ಜಮೀನುಗಳು ಲಭ್ಯವಿಲ್ಲದಿದ್ದರೆ ಜಮೀನುಗಳನ್ನು ಖರೀದಿಸಬೇಕು. ನಿವೇಶನ ಹಂಚಿಕೆ ಮತ್ತು ಮನೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮಗಳ ಅನುಷ್ಠಾನ ಪ್ರಗತಿಯ ಉಸ್ತುವಾರಿಗೆ 26 ಗ್ರಾಮ ಪಂಚಾಯತ್‌ಗಳ ಪ್ರತಿ ಹಳ್ಳಿಗೂ (88 ಹಳ್ಳಿಗಳು) ಒಬ್ಬರಂತೆ ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸುವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿನೋದ ಹೆಗ್ಗಳಗಿ, ಜಿಲ್ಲಾ ಪಂಚಾಯಿತಿ ಸಹ ಕಾರ್ಯದರ್ಶಿ ಜಾಫರ್‌ ಸುತಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸುರೇಶ ರೆಡ್ಡಿ, ಅಲ್ಪಸಂಖ್ಯಾತರ ಕಲ್ಯಾಣಾ ಧಿಕಾರಿ ಗೋಪಾಲ ಲಮಾಣಿ, ಸಮಾಜ ಕಲ್ಯಾಣಾ ಧಿಕಾರಿ ಚೈತ್ರಾ, ಅಗ್ರಣೀಯ ಬ್ಯಾಂಕ್‌ ವ್ಯವಸ್ಥಾಪಕ ಕದರಪ್ಪ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜೋಷಿ ಒಳಗೊಂಡಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.