ಸ್ಕ್ಯಾನಿಂಗ್‌ ವೈದ್ಯರಿಲ್ಲದೇ ಗರ್ಭಿಣಿಯರ ಪರದಾಟ

•ಎರಡು ತಿಂಗಳಿಂದ ಬಾಗಿಲು ಹಾಕಿದ ಕೇಂದ್ರ•ಖಾಸಗಿ ಸ್ಕಾ ್ಯನಿಂಗ್‌ ಕೇಂದ್ರಗಳಲ್ಲಿ ದುಪ್ಪಟ್ಟು ಹಣಗಳಿಕೆ

Team Udayavani, May 10, 2019, 3:33 PM IST

haveri-tdy-1..

ಹಾವೇರಿ: ಜಿಲ್ಲಾಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್‌ ಇಲ್ಲದೇ ಸ್ಕ್ಯಾನಿಂಗ್‌ ಯಂತ್ರ ಖಾಲಿ ಬಿದ್ದಿರುವುದು.

ಹಾವೇರಿ: ಇಲ್ಲಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ಮಾಡುವ ತಜ್ಞ ವೈದ್ಯರು ಇಲ್ಲದೇ ಬಡ ಗರ್ಭಿಣಿಯರು ಅನಿವಾರ್ಯವಾಗಿ ದುಬಾರಿ ವೆಚ್ಚ ತೆತ್ತು ಖಾಸಗಿ ಕೇಂದ್ರಗಳಲ್ಲಿ ಸ್ಕ್ಯಾನಿಂಗ್‌ ಮಾಡಿಸಿಕೊಳ್ಳುವ ಪರಿಸ್ಥಿತಿ ಎದುರಾಗಿದ್ದು ಬಡವರು ಪರದಾಡುವಂತಾಗಿದೆ.

ಜಿಲ್ಲಾಸ್ಪತ್ರೆ 250ಹಾಸಿಗೆ ಸಾಮರ್ಥ್ಯ ಹೊಂದಿದ್ದು ಇತ್ತೀಚೆಗೆ ಹೊಸದಾಗಿ ಆರಂಭವಾಗಿರುವ ಮಕ್ಕಳು ಮತ್ತು ಮಹಿಳೆಯರ ವಿಭಾಗದಲ್ಲಿ ಸ್ಕ್ಯಾನಿಂಗ್‌ ಮಾಡಲಾಗುತ್ತಿತ್ತು. ಆದರೆ, ಕಳೆದ ಎರಡು ತಿಂಗಳಿಂದ ಆಸ್ಪತ್ರೆ ಬಾಗಿಲಿಗೆ ‘ಸ್ಕ್ಯಾನಿಂಗ್‌ ವೈದ್ಯರಿಲ್ಲ’ ಎಂಬ ಬರಹ ಅಂಟಿಸಲಾಗಿದೆ. ಚುನಾವಣೆಗೂ ಮುನ್ನವೇ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೇಡಿಯಾಲಜಿಸ್ಟ್‌ ವರ್ಗಾವಣೆ ಮಾಡಿಸಿಕೊಂಡು ಹೋಗಿದ್ದು, ಬಡವರು ಪರದಾಡುವಂತಾಗಿದೆ.

ನಿತ್ಯ ಜಿಲ್ಲೆಯ ವಿವಿಧೆಡೆಯಿಂದ 80ಕ್ಕೂ ಹೆಚ್ಚು ಗರ್ಭಿಣಿಯರು ಸ್ಕ್ಯಾನಿಂಗ್‌ ಗಾಗಿ ಬರುತ್ತಾರೆ. ವೈದ್ಯರ ಸಲಹೆ ಮೇರೆಗೆ ಹೆರಿಗೆಗೂ ಮುನ್ನ ಅನೇಕ ಬಾರಿ ಸ್ಕ್ಯಾನಿಂಗ್‌  ಮಾಡಿಸಬೇಕಾಗುತ್ತದೆ. ಗರ್ಭದಲ್ಲಿ ತೊಡಕು ಇದ್ದರೆ ತಿಳಿದುಕೊಳ್ಳಲು ನಿಗದಿತ ಅವಧಿಗೊಮ್ಮೆ ಸ್ಕ್ಯಾನಿಂಗ್‌ ಮಾಡಿಸುವುದು ಕಡ್ಡಾಯವೂ ಆಗಿದೆ. ಆದರೆ, ಜಿಲ್ಲಾಸ್ಪತ್ರೆಯಲ್ಲಿ ಉಚಿತವಾಗಿ ದೊರೆಯುತ್ತಿದ್ದ ಸ್ಕ್ಯಾನಿಂಗ್‌ ಸೌಲಭ್ಯ ಈಗ ವೈದ್ಯರಿಲ್ಲದೇ ಸ್ಥಗಿತಗೊಂಡಿರುವುದು ಬಡವರ ಬವಣೆ ಹೆಚ್ಚಿಸಿದೆ.

ವೈದ್ಯರು ಬರುತ್ತಿಲ್ಲ: ಜಿಲ್ಲಾಸ್ಪತ್ರೆಗೆ ರೇಡಿಯಾಲಜಿಸ್ಟ್‌ ಹುದ್ದೆ ಖಾಲಿಯಿದ್ದು, ಇಲ್ಲಿಗೆ ಯಾವ ವೈದ್ಯರೂ ವರ್ಗಾವಣೆ ಮಾಡಿಸಿಕೊಂಡು ಬರುತ್ತಿಲ್ಲ. ಹೊರಗುತ್ತಿಗೆ ಆಧಾರದಲ್ಲಿ ಖಾಸಗಿ ವೈದ್ಯರ ಸೇವೆ ಪಡೆಯಲು ಅವಕಾಶವಿದೆ. ಆದರೆ, ಖಾಸಗಿ ವೈದ್ಯರೂ ಬರಲು ಒಪ್ಪುತ್ತಿಲ್ಲ. ಈ ಹಿಂದೆ ಸ್ಥಳೀಯ ವೈದ್ಯರೊಬ್ಬರು ತಿಂಗಳಿಗೆ 1.10 ಲಕ್ಷ‌ ರೂ. ಗೌರವಧನದ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಈಗ ಅವರೂ ಬರಲು ಒಪ್ಪುತ್ತಿಲ್ಲ ಎನ್ನಲಾಗಿದೆ.

ನಿತ್ಯ ಬೆಳಗ್ಗೆಯಿಂದ ಸಂಜೆವರೆಗೆ ನೂರಾರು ಜನರ ಸ್ಕ್ಯಾನಿಂಗ್‌ ಮಾಡಿದರೂ ಸಿಗುವುದು ಕಡಿಮೆ ವೇತನ ಎಂಬುದು ಅವರ ವಾದ. ಅದಕ್ಕಾಗಿ ಮಾಸಿಕ ಗೌರವಧನಕ್ಕಿಂತ ಪ್ರತಿ ಸ್ಕ್ಯಾನಿಂಗ್‌ ಗೆ ದರ ನಿಗದಿ ಮಾಡಬೇಕು ಎಂಬ ಬೇಡಿಕೆಯಿದೆ. ಹಾಗಾದರೆ ಮಾಸಿಕ ನಾಲ್ಕೈದು ಲಕ್ಷ‌ ರೂ. ಸಂಪಾದಿಸಬಹುದು. ಇದನ್ನು ಜಿಲ್ಲಾಧಿಕಾರಿ ಅಧ್ಯಕ್ಷ‌ತೆಯಲ್ಲಿ ತೀರ್ಮಾನಿಸಬೇಕಾಗುತ್ತದೆ. ಆದರೆ, ಸದ್ಯಕ್ಕೆ ಜಿಲ್ಲಾಸ್ಪತ್ರೆ ಸರ್ಜನ್‌ ಇನ್ನೂ ಯಾರ ಹೆಸರನ್ನೂ ಶಿಫಾರಸು ಮಾಡಿಲ್ಲ.

ಖಾಸಗಿ ಲಾಬಿ ಶಂಕೆ: ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ವೈದ್ಯರು ಇಲ್ಲದೇ ಇರುವುದನ್ನು ಖಾಸಗಿ ಸ್ಕ್ಯಾನಿಂಗ್‌ ಕೇಂದ್ರಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ದುಬಾರಿ ದರದಲ್ಲಿ ಸ್ಕ್ಯಾನಿಂಗ್‌ ಮಾಡುತ್ತಿವೆ. ಖಾಸಗಿ ಸ್ಕ್ಯಾನಿಂಗ್‌ ಕೇಂದ್ರಕ್ಕೆ ಹೋದರೆ 500ಕ್ಕೂ ಹೆಚ್ಚು ರೂ. ನೀಡಬೇಕಾಗಿದ್ದು, ಬಡ ರೋಗಿಗಳು ಖಾಸಗಿ  ಕೇಂದ್ರಗಳಿಗೆ ಹೋಗುವ ಅನಿವಾರ್ಯತೆ ನಿರ್ಮಾಣವಾಗಿದೆ.

ಜಿಲ್ಲಾಸ್ಪತ್ರೆ ರೇಡಿಯಾಲಜಿಸ್ಟ್‌ ಹುದ್ದೆಗೆ ಖಾಸಗಿ ವೈದ್ಯರೂ ಸಿಗದಿರುವುದರ ಹಿಂದೆ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳ ಮಸಲತ್ತು ಅಡಗಿದೆಯೇ ಎಂಬ ಅನುಮಾನ ಸಾರ್ವಜನಿಕರನ್ನು ಕಾಡುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್‌ ಇಲ್ಲದಿದ್ದರೆ ಸುತ್ತಮುತ್ತ ಇರುವ ನಾಲ್ಕಾರು ಸ್ಕ್ಯಾನಿಂಗ್‌ ಕೇಂದ್ರಗಳು ಬ್ಯುಸಿಯಾಗಿರುತ್ತವೆ. ದಿನಕ್ಕೆ ಒಂದು ಕೇಂದ್ರದಲ್ಲಿ 50ಕ್ಕೂ ಹೆಚ್ಚು ಜನರನ್ನು ಪರೀಕ್ಷೆ ಮಾಡಲಾಗುತ್ತಿದ್ದು, ಇದರಿಂದ ಭಾರಿ ಲಾಭ ಗಳಿಸುತ್ತಿವೆ. ಅದಕ್ಕಾಗಿ ಜಿಲ್ಲಾಸ್ಪತ್ರೆಗೆ ಯಾವುದೇ ರೇಡಿಯಾಲಜಿಸ್ಟ್‌ ಹೋಗದಂತೆ ಖಾಸಗಿ ಲಾಬಿ ತಡೆಯುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಒಟ್ಟಾರೆ ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ಇಲ್ಲದೇ ಬಡವರು ಖಾಸಗಿ ಕೇಂದ್ರಗಳಿಗೆ ಹೋಗಿ ದುಬಾರಿ ಹಣ ನೀಡಿ ಸ್ಕ್ಯಾನಿಂಗ್‌ ಮಾಡಿಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷ‌ತೆಯ ಸಮಿತಿ ಶೀಘ್ರದಲ್ಲಿ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.