ಸ್ಕ್ಯಾನಿಂಗ್‌ ವೈದ್ಯರಿಲ್ಲದೇ ಗರ್ಭಿಣಿಯರ ಪರದಾಟ

•ಎರಡು ತಿಂಗಳಿಂದ ಬಾಗಿಲು ಹಾಕಿದ ಕೇಂದ್ರ•ಖಾಸಗಿ ಸ್ಕಾ ್ಯನಿಂಗ್‌ ಕೇಂದ್ರಗಳಲ್ಲಿ ದುಪ್ಪಟ್ಟು ಹಣಗಳಿಕೆ

Team Udayavani, May 10, 2019, 3:33 PM IST

haveri-tdy-1..

ಹಾವೇರಿ: ಜಿಲ್ಲಾಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್‌ ಇಲ್ಲದೇ ಸ್ಕ್ಯಾನಿಂಗ್‌ ಯಂತ್ರ ಖಾಲಿ ಬಿದ್ದಿರುವುದು.

ಹಾವೇರಿ: ಇಲ್ಲಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ಮಾಡುವ ತಜ್ಞ ವೈದ್ಯರು ಇಲ್ಲದೇ ಬಡ ಗರ್ಭಿಣಿಯರು ಅನಿವಾರ್ಯವಾಗಿ ದುಬಾರಿ ವೆಚ್ಚ ತೆತ್ತು ಖಾಸಗಿ ಕೇಂದ್ರಗಳಲ್ಲಿ ಸ್ಕ್ಯಾನಿಂಗ್‌ ಮಾಡಿಸಿಕೊಳ್ಳುವ ಪರಿಸ್ಥಿತಿ ಎದುರಾಗಿದ್ದು ಬಡವರು ಪರದಾಡುವಂತಾಗಿದೆ.

ಜಿಲ್ಲಾಸ್ಪತ್ರೆ 250ಹಾಸಿಗೆ ಸಾಮರ್ಥ್ಯ ಹೊಂದಿದ್ದು ಇತ್ತೀಚೆಗೆ ಹೊಸದಾಗಿ ಆರಂಭವಾಗಿರುವ ಮಕ್ಕಳು ಮತ್ತು ಮಹಿಳೆಯರ ವಿಭಾಗದಲ್ಲಿ ಸ್ಕ್ಯಾನಿಂಗ್‌ ಮಾಡಲಾಗುತ್ತಿತ್ತು. ಆದರೆ, ಕಳೆದ ಎರಡು ತಿಂಗಳಿಂದ ಆಸ್ಪತ್ರೆ ಬಾಗಿಲಿಗೆ ‘ಸ್ಕ್ಯಾನಿಂಗ್‌ ವೈದ್ಯರಿಲ್ಲ’ ಎಂಬ ಬರಹ ಅಂಟಿಸಲಾಗಿದೆ. ಚುನಾವಣೆಗೂ ಮುನ್ನವೇ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೇಡಿಯಾಲಜಿಸ್ಟ್‌ ವರ್ಗಾವಣೆ ಮಾಡಿಸಿಕೊಂಡು ಹೋಗಿದ್ದು, ಬಡವರು ಪರದಾಡುವಂತಾಗಿದೆ.

ನಿತ್ಯ ಜಿಲ್ಲೆಯ ವಿವಿಧೆಡೆಯಿಂದ 80ಕ್ಕೂ ಹೆಚ್ಚು ಗರ್ಭಿಣಿಯರು ಸ್ಕ್ಯಾನಿಂಗ್‌ ಗಾಗಿ ಬರುತ್ತಾರೆ. ವೈದ್ಯರ ಸಲಹೆ ಮೇರೆಗೆ ಹೆರಿಗೆಗೂ ಮುನ್ನ ಅನೇಕ ಬಾರಿ ಸ್ಕ್ಯಾನಿಂಗ್‌  ಮಾಡಿಸಬೇಕಾಗುತ್ತದೆ. ಗರ್ಭದಲ್ಲಿ ತೊಡಕು ಇದ್ದರೆ ತಿಳಿದುಕೊಳ್ಳಲು ನಿಗದಿತ ಅವಧಿಗೊಮ್ಮೆ ಸ್ಕ್ಯಾನಿಂಗ್‌ ಮಾಡಿಸುವುದು ಕಡ್ಡಾಯವೂ ಆಗಿದೆ. ಆದರೆ, ಜಿಲ್ಲಾಸ್ಪತ್ರೆಯಲ್ಲಿ ಉಚಿತವಾಗಿ ದೊರೆಯುತ್ತಿದ್ದ ಸ್ಕ್ಯಾನಿಂಗ್‌ ಸೌಲಭ್ಯ ಈಗ ವೈದ್ಯರಿಲ್ಲದೇ ಸ್ಥಗಿತಗೊಂಡಿರುವುದು ಬಡವರ ಬವಣೆ ಹೆಚ್ಚಿಸಿದೆ.

ವೈದ್ಯರು ಬರುತ್ತಿಲ್ಲ: ಜಿಲ್ಲಾಸ್ಪತ್ರೆಗೆ ರೇಡಿಯಾಲಜಿಸ್ಟ್‌ ಹುದ್ದೆ ಖಾಲಿಯಿದ್ದು, ಇಲ್ಲಿಗೆ ಯಾವ ವೈದ್ಯರೂ ವರ್ಗಾವಣೆ ಮಾಡಿಸಿಕೊಂಡು ಬರುತ್ತಿಲ್ಲ. ಹೊರಗುತ್ತಿಗೆ ಆಧಾರದಲ್ಲಿ ಖಾಸಗಿ ವೈದ್ಯರ ಸೇವೆ ಪಡೆಯಲು ಅವಕಾಶವಿದೆ. ಆದರೆ, ಖಾಸಗಿ ವೈದ್ಯರೂ ಬರಲು ಒಪ್ಪುತ್ತಿಲ್ಲ. ಈ ಹಿಂದೆ ಸ್ಥಳೀಯ ವೈದ್ಯರೊಬ್ಬರು ತಿಂಗಳಿಗೆ 1.10 ಲಕ್ಷ‌ ರೂ. ಗೌರವಧನದ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಈಗ ಅವರೂ ಬರಲು ಒಪ್ಪುತ್ತಿಲ್ಲ ಎನ್ನಲಾಗಿದೆ.

ನಿತ್ಯ ಬೆಳಗ್ಗೆಯಿಂದ ಸಂಜೆವರೆಗೆ ನೂರಾರು ಜನರ ಸ್ಕ್ಯಾನಿಂಗ್‌ ಮಾಡಿದರೂ ಸಿಗುವುದು ಕಡಿಮೆ ವೇತನ ಎಂಬುದು ಅವರ ವಾದ. ಅದಕ್ಕಾಗಿ ಮಾಸಿಕ ಗೌರವಧನಕ್ಕಿಂತ ಪ್ರತಿ ಸ್ಕ್ಯಾನಿಂಗ್‌ ಗೆ ದರ ನಿಗದಿ ಮಾಡಬೇಕು ಎಂಬ ಬೇಡಿಕೆಯಿದೆ. ಹಾಗಾದರೆ ಮಾಸಿಕ ನಾಲ್ಕೈದು ಲಕ್ಷ‌ ರೂ. ಸಂಪಾದಿಸಬಹುದು. ಇದನ್ನು ಜಿಲ್ಲಾಧಿಕಾರಿ ಅಧ್ಯಕ್ಷ‌ತೆಯಲ್ಲಿ ತೀರ್ಮಾನಿಸಬೇಕಾಗುತ್ತದೆ. ಆದರೆ, ಸದ್ಯಕ್ಕೆ ಜಿಲ್ಲಾಸ್ಪತ್ರೆ ಸರ್ಜನ್‌ ಇನ್ನೂ ಯಾರ ಹೆಸರನ್ನೂ ಶಿಫಾರಸು ಮಾಡಿಲ್ಲ.

ಖಾಸಗಿ ಲಾಬಿ ಶಂಕೆ: ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ವೈದ್ಯರು ಇಲ್ಲದೇ ಇರುವುದನ್ನು ಖಾಸಗಿ ಸ್ಕ್ಯಾನಿಂಗ್‌ ಕೇಂದ್ರಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ದುಬಾರಿ ದರದಲ್ಲಿ ಸ್ಕ್ಯಾನಿಂಗ್‌ ಮಾಡುತ್ತಿವೆ. ಖಾಸಗಿ ಸ್ಕ್ಯಾನಿಂಗ್‌ ಕೇಂದ್ರಕ್ಕೆ ಹೋದರೆ 500ಕ್ಕೂ ಹೆಚ್ಚು ರೂ. ನೀಡಬೇಕಾಗಿದ್ದು, ಬಡ ರೋಗಿಗಳು ಖಾಸಗಿ  ಕೇಂದ್ರಗಳಿಗೆ ಹೋಗುವ ಅನಿವಾರ್ಯತೆ ನಿರ್ಮಾಣವಾಗಿದೆ.

ಜಿಲ್ಲಾಸ್ಪತ್ರೆ ರೇಡಿಯಾಲಜಿಸ್ಟ್‌ ಹುದ್ದೆಗೆ ಖಾಸಗಿ ವೈದ್ಯರೂ ಸಿಗದಿರುವುದರ ಹಿಂದೆ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳ ಮಸಲತ್ತು ಅಡಗಿದೆಯೇ ಎಂಬ ಅನುಮಾನ ಸಾರ್ವಜನಿಕರನ್ನು ಕಾಡುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್‌ ಇಲ್ಲದಿದ್ದರೆ ಸುತ್ತಮುತ್ತ ಇರುವ ನಾಲ್ಕಾರು ಸ್ಕ್ಯಾನಿಂಗ್‌ ಕೇಂದ್ರಗಳು ಬ್ಯುಸಿಯಾಗಿರುತ್ತವೆ. ದಿನಕ್ಕೆ ಒಂದು ಕೇಂದ್ರದಲ್ಲಿ 50ಕ್ಕೂ ಹೆಚ್ಚು ಜನರನ್ನು ಪರೀಕ್ಷೆ ಮಾಡಲಾಗುತ್ತಿದ್ದು, ಇದರಿಂದ ಭಾರಿ ಲಾಭ ಗಳಿಸುತ್ತಿವೆ. ಅದಕ್ಕಾಗಿ ಜಿಲ್ಲಾಸ್ಪತ್ರೆಗೆ ಯಾವುದೇ ರೇಡಿಯಾಲಜಿಸ್ಟ್‌ ಹೋಗದಂತೆ ಖಾಸಗಿ ಲಾಬಿ ತಡೆಯುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಒಟ್ಟಾರೆ ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ಇಲ್ಲದೇ ಬಡವರು ಖಾಸಗಿ ಕೇಂದ್ರಗಳಿಗೆ ಹೋಗಿ ದುಬಾರಿ ಹಣ ನೀಡಿ ಸ್ಕ್ಯಾನಿಂಗ್‌ ಮಾಡಿಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷ‌ತೆಯ ಸಮಿತಿ ಶೀಘ್ರದಲ್ಲಿ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.