ಹೋಳಿ ಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ಜನತೆ

ರಂಗಿನಾಟಕ್ಕೆ ತುದಿಗಾಲಲ್ಲಿ ನಿಂತ ಯುವಕರು-ಮಕ್ಕ ಳು-ಮಹಿಳೆಯರು

Team Udayavani, Mar 16, 2022, 3:48 PM IST

13

ಹಾವೇರಿ: ರಂಗಿನಾಟದ ಹೋಳಿ ಹುಣ್ಣಿಮೆ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಯುವಕರು, ಮಕ್ಕಳು ಸೇರಿದಂತೆ ಮಹಿಳೆಯರು ಸಜ್ಜಾಗಿದ್ದು, ನಗರದ ಪ್ರತಿಯೊಂದು ಓಣಿ, ಬೀದಿಗಳಲ್ಲಿ ಹಲಗೆಯ ಸದ್ದು ಜೋರಾಗಿ ಕೇಳಿ ಬರುತ್ತಿದೆ.

ಕಳೆದ ವಾರದಿಂದ ನಗರ, ಪಟ್ಟಣ, ಗ್ರಾಮೀಣ ಪ್ರದೇಶದಲ್ಲಿ ಯುವಕರು ಹಲಗಿ ಬಾರಿಸಿ ಖುಷಿ ಪಡುತ್ತಿದ್ದಾರೆ. ಆಧುನಿಕತೆ ಪರಿಣಾಮದಿಂದ ಚರ್ಮದ ಹಲಗಿ ಕಣ್ಮೆರೆಯಾಗುತ್ತಿದ್ದು, ಅದರ ಜಾಗದಲ್ಲಿ ಫೈಬರ್‌, ಪ್ಲಾಸ್ಟಿಕ್‌ ತಮಟೆ ಸದ್ದು ಮಾಡುತ್ತಿವೆ. ಕೆಲ ಯುವಕರು ಹಲಗಿಯಲ್ಲಿ ಬಗೆಬಗೆಯ ಸ್ವರ ನುಡಿಸುವ ಮೂಲಕ ಸಂತಸಪಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಯುವಕರು ಗುಂಪು ಕಟ್ಟಿಕೊಂಡು ಲಯಬದ್ಧವಾಗಿ ಹಲಗೆ ನುಡಿಸಿದರೆ, ಚಿಕ್ಕಮಕ್ಕಳು ಹತ್ತಾರು ಬಗೆಯಲ್ಲಿ ಬಾರಿಸಿ ಖುಷಿ ಪಡುತ್ತಿರುವ ದೃಶ್ಯ ಎಲ್ಲೆಡೆ ಕಂಡುಬರುತ್ತಿದೆ.

ರತಿ-ಕಾಮಣ್ಣರ ಮೂರ್ತಿ ಪ್ರತಿಷ್ಠಾಪನೆ: ಹೋಳಿ ಆಚರಣೆಯ ವಿವಿಧ ಬಗೆಯ ಬಣ್ಣ, ಸಾಮಗ್ರಿಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಹೊಸ ವಿನ್ಯಾಸ, ಗಾತ್ರದ ಹಲಗೆಗಳು, ವಿವಿಧ ಬಗೆಯ ಮುಖವಾಡಗಳು ಸಹ ಗಮನ ಸೆಳೆಯುತ್ತಿವೆ. ಹಾವೇರಿಯ ಏಲಕ್ಕಿ ಓಣಿ, ದೇಸಾಯಿ ಗಲ್ಲಿ, ಅಕ್ಕಿಪೇಟಿ, ಮುಷ್ಠೆàರ ಓಣಿ, ಶಿವಾಜಿ ನಗರ, ನಾಗೇಂದ್ರನಮಟ್ಟಿ, ಪುರದ ಓಣಿ ಸೇರಿದಂತೆ ನಗರದ ವಿವಿಧ ಬಡಾವಣೆ, ಗಲ್ಲಿ-ಗಲ್ಲಿಗಳ ವಿವಿಧೆಡೆ ಈಗಾಗಲೇ ರತಿ-ಕಾಮಣ್ಣರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಚಾವಡಿ ವೃತ್ತದಲ್ಲಿ ಹುಣ್ಣಿಮೆ ದಿನ ರತಿ-ಕಾಮಣ್ಣರ ಮೂರ್ತಿ ಪ್ರತಿಷ್ಠಾಪನೆಗೊಳ್ಳಲಿದೆ. ವಯಸ್ಸಿನ ಹಂಗಿಲ್ಲದೆ ಎಲ್ಲರೂ ಕೂಡಿ ಬಣ್ಣದ ಲೋಕದಲ್ಲಿ ತೇಲಾಡಲು ಜನತೆ ಕಾತುರರಾಗಿದ್ದಾರೆ.

ವಿವಿಧ ಮನರಂಜನಾ ಕಾರ್ಯಕ್ರಮ: ಹೋಳಿ ಹಬ್ಬದ ನಿಮಿತ್ತ ಮಂಗಳವಾರ ಹಾವೇರಿಯ ಪುರಸಿದ್ದೇಶ್ವರ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಭಗವಾ ಧ್ವಜದೊಂದಿಗೆ ಬೈಕ್‌ ರ್ಯಾಲಿ ನಡೆಸಲಾಗಿದೆ. ಮಾ.16ರಂದು ಸಂಜೆ 7ಕ್ಕೆ ಪುರದ ಓಣಿಯಲ್ಲಿ ವಿದೇಶಿ ಮುತ್ತೈದೆಯರಿಂದ ಗಂಡು ಮುತ್ತೈದೆಯರಿಗೆ ಕಂಕಣ ಕಟ್ಟುವ ಕಾರ್ಯಕ್ರಮ, ವಿದೇಶಿ ಮುತ್ತೈದೆಯರಿಂದ ಗಂಡು ಮುತ್ತೈದೆಯರಿಗೆ ಉಡಿ ತುಂಬುವ ಮತ್ತು ಆರತಿ ಬೆಳಗುವ ಕಾರ್ಯಕ್ರಮ, ವಿದೇಶಿ ಮುತ್ತೈದೆಯರಿಂದ ನೃತ್ಯ ನಡೆಯಲಿದೆ. ಬಳಿಕ ಪುರದ ಓಣಿಯಲ್ಲಿ ಜೀವಂತ ಕಾಮ-ರತಿ ನಗಿಸುವ ಸ್ಪರ್ಧೆ ನಡೆಯಲಿದೆ. ಮಾ.17ರಂದು ರಾತ್ರಿ 8ಗಂಟೆಗೆ ಹಾನಗಲ್ಲ ರಸ್ತೆಯ ಹೊಸ ಕಾಳು-ಕಡಿ ಮಾರುಕಟ್ಟೆ ಪ್ರಾಂಗಣದಲ್ಲಿ “ಚದ್ದರದಲ್ಲಿ ಚಂದಮಾಮ’ ಎಂಬ ಕಾಮನ ಹಾಸ್ಯದ ಹೊನಲು ಆಯೋಜಿಸಲಾಗಿದೆ. ಮಾ.18ರಂದು ಸಂಜೆ 5ಕ್ಕೆ ಅಡ್ಡ ಸೋಗಿನ ಸ್ಪರ್ಧೆ ಜರುಗಲಿದೆ. ಮಾ.19ರಂದು ರಂಗು-ರಂಗಿನ ಹೋಳಿ ಹಬ್ಬ ಆಚರಣೆ, ಕಾಮ ದಹನ ನಡೆಯಲಿದೆ.

ಕೊರೊನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಕಳೆಗುಂದಿದ್ದ ಹೋಳಿ ಹಬ್ಬ ಈ ವರ್ಷ ಹೊಸ ರಂಗು ಪಡೆದಿದೆ. ಹಾವೇರಿ ನಗರದಲ್ಲಿ ಸಂಭ್ರಮದಿಂದ ಹೋಳಿ ಆಚರಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ಮಾ.15ರಿಂದ ಮಾ.18ರವರೆಗೆ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾ.19ರಂದು ರಂಗು-ರಂಗಿನ ಹೋಳಿ ಹಬ್ಬ ಆಚರಣೆ, ಕಾಮ ದಹನ ನಡೆಯಲಿದೆ.

-ಗಿರೀಶ ಗುಮಕಾರ, ಅಧ್ಯಕ್ಷರು,ಹಾವೇರಿ ಹೋಳಿ ಹಬ್ಬ

ಸಮಿತಿ ಹಾವೇರಿ ಸೌಹಾರ್ದದ ನಾಡು. ಹಬ್ಬಗಳನ್ನು ಎಲ್ಲರೂ ಸೇರಿಕೊಂಡು ಬಹಳ ಸೌಹಾರ್ದತೆಯಿಂದ ಆಚರಿಸಲಾಗುತ್ತದೆ. ಹೋಳಿ ಹಬ್ಬದಲ್ಲಿ ಸೋನೇರಿ, ಕೀಲುಎಣ್ಣೆ ಸೇರಿದಂತೆ ರಾಸಾಯನಿಕ ಬಣ್ಣಗಳನ್ನು ಬಳಸದೇ ಪರಿಸರ ಸ್ನೇಹಿ ಬಣ್ಣಗಳನ್ನು ಬಳಸಿ ಯಾವುದೇ ಸಣ್ಣ ಗಲಾಟೆಗೂ ಆಸ್ಪದ ನೀಡದಂತೆ ಸಂಭ್ರಮದಿಂದ ಹೋಳಿ ಆಚರಿಸೋಣ.

ಸಂಜೀವಕುಮಾರ ನೀರಲಗಿ, ನಗರಸಭೆ ಅಧ್ಯಕ್ಷರು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.