ಶರನ್ನವರಾತ್ರಿ ಆಚರಣೆಗೆ ಭರದ ಸಿದ್ಧತೆ

ಶಕ್ತಿದೇವತೆಗಳ ಆರಾಧನೆಗಾಗಿ ದೀಪಾಲಂಕಾರದೊಂದಿಗೆ ಸಿಂಗಾರಗೊಂಡ ದೇಗುಲಗಳು

Team Udayavani, Sep 25, 2022, 12:44 PM IST

10

ಹಾವೇರಿ: ನವರಾತ್ರಿ ಹಿನ್ನೆಲೆಯಲ್ಲಿ ಶಕ್ತಿದೇವತೆಗಳ ಆರಾಧನೆಗಾಗಿ ನಗರದ ಪ್ರಮುಖ ದೇಗುಲಗಳಲ್ಲಿ ಪೂರ್ವಸಿದ್ಧತೆಗಳು ಭರದಿಂದ ಸಾಗಿದ್ದು, ಕೆಲ ದೇವಸ್ಥಾನಗಳು ವಿದ್ಯುತ್‌ ದೀಪಾಲಂಕಾರದೊಂದಿಗೆ ಕಂಗೊಳಿಸುತ್ತಿವೆ.

ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ದಸರಾ ಸೇರಿದಂತೆ ಬಹುತೇಕ ಎಲ್ಲ ಹಬ್ಬಗಳನ್ನು ಸರಳ ಹಾಗೂ ಸಂಕ್ಷಿಪ್ತವಾಗಿ ಆಚರಿಸುವಂತಾಗಿತ್ತು. ಪುರಾಣ ಪ್ರವಚನ, ಪಾರಾಯಣ, ಪಲ್ಲಕ್ಕಿ ಉತ್ಸವ ಹಾಗೂ ಧಾರ್ಮಿಕ ಸಭೆಗಳಿಗೂ ಅವಕಾಶವಿಲ್ಲದಂತಾಗಿತ್ತು. ಪ್ರಸಕ್ತ ವರ್ಷ ಕೋವಿಡ್‌ ಸೋಂಕು ಮರೆಯಾಗಿದ್ದು, ಈ ಬಾರಿ ಸಂಭ್ರಮದಿಂದ ದಸರಾ ಹಬ್ಬ ಆಚರಣೆಗೆ ಜನರು ಉತ್ಸುಕರಾಗಿದ್ದಾರೆ.

ನಗರದ ರೈಲ್ವೆ ಸ್ಟೇಷನ್‌ ರಸ್ತೆಯಲ್ಲಿರುವ ನವದುರ್ಗೆಯರ ದೇವಸ್ಥಾನ, ಬಸವೇಶ್ವರ ನಗರದ ಸಿ ಬ್ಲಾಕ್‌ನ ಅನ್ನಪೂರ್ಣೇಶ್ವರಿ ದೇವಸ್ಥಾನ, ಹಳೆಯ ಪಿ.ಬಿ.ರಸ್ತೆಯಲ್ಲಿರುವ ವಡ್ಡಮ್ಮದೇವಿ ದೇವಸ್ಥಾನ, ಮುನ್ಸಿಫಲ್‌ ಹೈಸ್ಕೂಲ್‌ ರಸ್ತೆಯಲ್ಲಿರುವ ದಾನಮ್ಮದೇವಿ ದೇವಸ್ಥಾನ, ಉದಯ ನಗರದಲ್ಲಿರುವ ಚೌಡೇಶ್ವರಿ ದೇವಸ್ಥಾನ, ದ್ಯಾಮವ್ವನ ಗುಡಿ ಓಣಿಯ ಶ್ರೀ ಕಾಳಿಕಾಂಬ ದೇವಸ್ಥಾನ, ಗ್ರಾಮದೇವತೆ ದೇವಸ್ಥಾನ, ಯಾಲಕ್ಕಿ ಓಣಿಯ ಜೈನ ಮಂದಿರ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಸುಣ್ಣ-ಬಣ್ಣ ಹಾಗೂ ಸ್ವಚ್ಛತಾ ಕಾರ್ಯಗಳು ಭರದಿಂದ ಸಾಗಿವೆ.

ನವದುರ್ಗಾ ದೇಗುಲದ ಕಾರ್ಯಕ್ರಮಗಳು: ನಗರದ ರೈಲ್ವೆ ಸ್ಟೇಷನ್‌ ರಸ್ತೆಯಲ್ಲಿರುವ ನವದುರ್ಗಾ ದೇವಸ್ಥಾನದಲ್ಲಿ ದಸರಾ ಹಬ್ಬದ ನಿಮಿತ್ತ ಸೆ.26ರಿಂದ ಅಕ್ಟೋಬರ್‌ 5ರವರೆಗೆ ಶರನ್ನವರಾತ್ರಿ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೆ.26ರಂದು ಶ್ರೀ ಶೈಲಪುತ್ರಿ ದೇವಿಗೆ ಅಭಿಷೇಕ ಹಾಗೂ ಪೂಜೆ, ಸೆ.27ರಂದು ಶ್ರೀ ಬ್ರಹ್ಮಚಾರಿಣೀ ದೇವಿಗೆ ಅಭಿಷೇಕ ಹಾಗೂ ಪೂಜೆ, ಸೆ.28ರಂದು ಶ್ರೀ ಚಂದ್ರಘಂಟಾ ದೇವಿಗೆ ಅಭಿಷೇಕ, ಸೆ.29ರಂದು ಶ್ರೀ ಕೂಷ್ಮಾಂಡಾ ದೇವಿಗೆ ಪೂಜೆ, ಸೆ.30ರಂದು ಶ್ರೀ ಸ್ಕಂದಮಾತಾ ದೇವಿಗೆ ಅಭಿಷೇಕ, ಅ.1ರಂದು ಶ್ರೀ ಕಾತ್ಯಾಯಿನೀ ದೇವಿಗೆ ವಿಶೇಷ ಪೂಜೆ, ಅ.2ರಂದು ಶ್ರೀ ಕಾಲರಾತ್ರಿ ದೇವಿಗೆ ಅಭಿಷೇಕ, ಅ.3ರಂದು ಶ್ರೀ ಮಹಾಗೌರಿ ದೇವಿಗೆ ಅಭಿಷೇಕ, ಬೆಳಗ್ಗೆ 10ಗಂಟೆಗೆ ದುರ್ಗಾ ಹೋಮ, ಅ.4ರಂದು ಶ್ರೀ ಸಿದ್ಧಿದಾತ್ರಿ ದೇವಿಗೆ ಅಭಿಷೇಕ ಹಾಗೂ ಪೂಜೆ, ಅ.5ರಂದು ವಿಜಯದಶಮಿ ಆಚರಣೆ ನಡೆಯಲಿದೆ.

ಶ್ರೀ ಕಾಳಿಕಾಂಬ ದೇವಸ್ಥಾನ: ನಗರದ ಕಾಳಿಕಾಂಬ ದೇವಸ್ಥಾನದಲ್ಲಿ ಸೆ.26ರಂದು ಬೆಳಗ್ಗೆ 8ಗಂಟೆಗೆ ಶ್ರೀ ಕಾಳಿಕಾದೇವಿಗೆ ಪಂಚಾಮೃತ ಅಭಿಷೇಕ ಹಾಗೂ ಘಟಸ್ಥಾಪನೆ, ದೀಪಾರಾಧನೆ ಜರುಗುವುದು. ಪ್ರತಿದಿನ ಸಂಜೆ 7ಗಂಟೆಗೆ ಗೋಪಾಲಕೃಷ್ಣ ಆಚಾರ್ಯ ಮನ್ವಾಚಾರ್ಯ ಅವರಿಂದ ಶ್ರೀದೇವಿ ಪುರಾಣ ಪ್ರವಚನ ನಡೆಯಲಿದೆ. ಪ್ರತಿದಿನ ಶ್ರೀ ಗಾಯತ್ರಿ ಭಜನಾ ಮಂಡಳಿ ಮಹಿಳೆಯಿಂದ ಶ್ರೀದೇವಿಗೆ ಕುಂಕುಮಾರ್ಚನೆ, ಶ್ರೀಶಕ್ತಿ ಮಹಿಳಾ ಮಂಡಳದ ವತಿಯಿಂದ 3ರಿಂದ 6ವರ್ಷದ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ, ಮಹಿಳೆಯರಿಂದ ವಿವಿಧ ಕಾರ್ಯಕ್ರಮಗಳು ಜರುಗಲಿವೆ.

ನವರಾತ್ರಿ-ವಿಶೇಷ ಪೂಜೆ

ನಗರದ ಬಹುತೇಕ ಶಕ್ತಿದೇವತೆಗಳ ದೇವಸ್ಥಾನಗಳಲ್ಲಿ ಸೆ.26ರಂದು ಸಂಜೆ ದೇವಿಗೆ ಅಲಂಕಾರ ಸೇವೆ ಹಾಗೂ ಘಟಸ್ಥಾಪನೆ, ಸೆ.30ರಂದು ಲಲಿತ ಪಂಚಮಿ ಆಚರಣೆ, ಅ.3ರಂದು ದುರ್ಗಾಷ್ಟಮಿ, ಅ.4ರಂದು ಮಹಾನವಮಿ ನಿಮಿತ್ತ ಆಯುಧ ಪೂಜೆ ನೆರವೇರಿಸಲಾಗುತ್ತದೆ. ಅ.5ರಂದು ವಿಜಯದಶಮಿ ಪ್ರಯುಕ್ತ ತಾಯಿ ಜಗನ್ಮಾತೆಗೆ ವಿಶೇಷ ಪೂಜೆ ಹಾಗೂ ಸಂಜೆ ಬನ್ನಿ ಮುಡಿಯುವ ಕಾರ್ಯಕ್ರಮ ನೆರವೇರಿಸಲು ಸಿದ್ಧತೆ ನಡೆಸಲಾಗುತ್ತಿದೆ.

ನಗರದ ನವದುರ್ಗೆ ದೇವಸ್ಥಾನದಲ್ಲಿ ದಸರಾ ಹಬ್ಬದ ನಿಮಿತ್ತ ಶರನ್ನವರಾತ್ರಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಸೆ.26ರಿಂದ ಅ.5ರವರೆಗೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಕೊರೊನಾ ಸೋಂಕು ಮರೆಯಾಗಿದ್ದರಿಂದ ಹಬ್ಬದ ಸಂಭ್ರಮ ಇಮ್ಮಡಿಯಾಗಿದೆ.  –ಗೌರೀಶ ಭಟ್‌, ನವದುರ್ಗೆ ದೇವಸ್ಥಾನದ ಪ್ರಧಾನ ಅರ್ಚಕರು

-ವೀರೇಶ ಮಡ್ಲೂರ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.