ದೊಡ್ಡ ಕೆರೆ ನೀರು ಪೂರೈಕೆ ಯೋಜನೆ ಸಿದ್ಧಪಡಿಸಿ

ಜಿಲ್ಲಾಧಿಕಾರಿ ಕೃಷ್ಣ ಅಧಿಕಾರಿಗಳಿಗೆ ಸೂಚನೆ •ಯೋಜನೆಗೆ ಅಂದಾಜು 5 ಕೋಟಿ ರೂ. ಅವಶ್ಯ

Team Udayavani, May 11, 2019, 2:42 PM IST

haveri-tdy-3..

ಗುತ್ತಲ: ಪಟ್ಟಣಕ್ಕೆ ದೊಡ್ಡ ಕೆರೆಯಿಂದ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸುವಂತೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ ನೀಡಿದರು.

ಶುಕ್ರವಾರ ಪಟ್ಟಣಕ್ಕೆ ದಿಢೀರ್‌ ಭೇಟಿ ನೀಡಿದ ಅವರು, ಗುತ್ತಲ ಪಟ್ಟಣದಲ್ಲಿನ ಕುಡಿಯುವ ನೀರಿನ ಸಮಸ್ಯೆ ಶ್ವಾಶತವಾಗಿ ಪರಿಹರಿಸುವ ನಿಟ್ಟಿನಲ್ಲಿ ಬೇಸಿಗೆಯಲ್ಲಿ ದೊಡ್ಡ ಕೆರೆ ಮೂಲಕ ನೀರು ಪೂರೈಸಿದರೆ ಸಮಸ್ಯೆ ಪರಿಹಾರವಾಗುತ್ತದೆ ಎಂಬ ಜನರ ಹಾಗೂ ಅಧಿಕಾರಿಗಳ ಅಭಿಪ್ರಾಯ ಕೇಳಿ ಕೆರೆಗೆ ಭೇಟಿ ನೀಡಿ, ವೀಕ್ಷಿಸಿ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೆರೆ ಮೂಲಕ ಪಟ್ಟಣಕ್ಕೆ ನೀರು ಪೂರೈಸಲು ಕೋಟ್ಯಂತರ ಹಣ ಬೇಕಾಗುತ್ತದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು. ಈ ಯೋಜನೆಗೆ ಅಂದಾಜ 5 ಕೋಟಿ ರೂ. ಹಣ ಬೇಕಾಗುತ್ತದೆ. ಈ ಬಗ್ಗೆ ಯೋಜನೆ ಸಿದ್ಧಪಡಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚರಂಡಿ ಸ್ವಚ್ಛತೆಗೆ ಸೂಚನೆ: ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಮಾಲತೇಶ ನಗರ ಹಾಗೂ ಶಿವನಗರ(ತಾಂಡಾ)ದಲ್ಲಿ ನಗರೋತ್ಥಾನ ಯೋಜನೆಯಲ್ಲಿ ಆಗಿರುವ ಕಾಮಗಾರಿ ಪರಿಶೀಲನೆ ನಡೆಸಿದರು. ಶಿವನಗರದಲ್ಲಿ ಪರಿಶೀಲನೆ ವೇಳೆ ಚರಂಡಿ ಸ್ವಚ್ಛಗೊಳಿಸದಿರುವುದಕ್ಕೆ ಸ್ಥಳದಲ್ಲಿದ್ದ ಮುಖ್ಯಾಧಿಕಾರಿ ಶೋಭಾ ಅವರಿಗೆ ಶೀಘ್ರ ಚರಂಡಿ ಸ್ವಚ್ಛಗೊಳಿಸುವಂತೆ ಸೂಚಿಸಿದರು. ಅಲ್ಲದೇ ವಾರಕ್ಕೊಮ್ಮೆ ಚರಂಡಿ ಸ್ವಚ್ಛ ಮಾಡಿಸುತ್ತೇವೆ ಎನ್ನುತ್ತಿದ್ದಂತೆ ಶಿವನಗರದ ನಿವಾಸಿಗಳು ವಾರಕ್ಕೊಮ್ಮೆ ಅಲ್ಲ; ವರ್ಷಕ್ಕೊಮ್ಮೆ ಗಟಾರ ಸ್ವಚ್ಛ ಮಾಡುತ್ತಾರೆ ಎಂದು ಆರೋಪಿಸಿದಾಗ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅಸಮಾಧಾನ ವ್ಯಕ್ತಪಡಿಸಿದರು.

ನಂತರ ಪೌರ ಕಾರ್ಮಿಕ ಅಂಕಿ ಸಂಖ್ಯೆ ಪಡೆದ ಜಿಲ್ಲಾಧಿಕಾರಿ, ನಾಳೆಯಿಂದ ಇಲ್ಲಿನ ಚರಂಡಿ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಿ ಎಂದು ಮುಖ್ಯಾಧಿಕಾರಿ ಶೋಭಾ ಅವರಿಗೆ ಸೂಚನೆ ನೀಡಿದ ಅವರು, ತಾಂಡಾದಲ್ಲಿನ ನೀರು ಪೂರೈಕೆ ಬಗ್ಗೆ ಸಮರ್ಪಕ ಕಾರ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ಶಿವನಗರದಲ್ಲಿ ಶುಚಿತ್ವದ ಬಗ್ಗೆ ಗಮನ ಹರಿಸಿ, ಆದಷ್ಟು ಬೇಗ ಇಲ್ಲಿರುವ ಕಸ ವಿಲೇವಾರಿ ಮಾಡಿ ಎಂದು ಸೂಚಿಸಿದ ಜಿಲ್ಲಾಧಿಕಾರಿ, ಶಿವನಗರದಲ್ಲಿನ ಬೋರ್‌ವೆಲ್ಗಳ ಮಾಹಿತಿ ಪಡೆದು ಶಿವನಗರ ಬಡಾವಣೆಯೊಂದರಲ್ಲಿನ ಸುಟ್ಟಿರುವ ಬೋರ್‌ವೆಲ್ ಆದಷ್ಟು ಬೇಗ ಸರಿಪಡಿಸುವಂತೆ ಇಂಜಿನಿಯರ್‌ಗಳಿಗೆ ಎಚ್ಚರಿಸಿದರು. ಶಿವನಗರದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟ ನಿಂತು ಎರಡು ವರ್ಷವಾಯಿತು ಎಂಬ ವಿಷಯ ತಿಳಿದು ಅಲ್ಲಿಗೆ ಭೇಟಿ, ನೀಡಿ 10 ದಿನಗಳಲ್ಲಿ ಇದನ್ನು ಪುನಃ ಆರಂಭಿಸಿ ಜನರಿಗೆ ಅನುಕೂಲ ಒದಗಿಸುವಂತೆ ತಿಳಿಸಿದರು.

ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕ ವಾಸಣ್ಣ, ನಗರಾಭಿವೃದ್ಧಿ ಕೋಶದ ಎಇಇ ಕಮ್ಮಾರ, ಪಪಂ ಇಂಜಿನಿಯರ್‌ ಚಲವಾದಿ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.