2ನೇ ಹಂತದ ಚುನಾವಣೆಗೆ ಸಕಲ ಸಿದ್ಧತೆ


Team Udayavani, Dec 25, 2020, 4:54 PM IST

2ನೇ ಹಂತದ ಚುನಾವಣೆಗೆ ಸಕಲ ಸಿದ್ಧತೆ

ಹಾವೇರಿ: ಜಿಲ್ಲೆಯಲ್ಲಿ ಎರಡನೇ ಹಂತದ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ ಡಿ.27ರಂದು ಜರುಗಲಿದ್ದು, ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಕೋವಿಡ್‌ಮುನ್ನೆಚ್ಚರಿಕೆಯೊಂದಿಗೆ ನ್ಯಾಯಸಮ್ಮತ, ಶಾಂತಿಯುತ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಕೈಗೊಂಡಿದೆ.

ಎರಡನೇ ಹಂತದಲ್ಲಿ ಜಿಲ್ಲೆಯ ಬ್ಯಾಡಗಿ, ಸವಣೂರು, ಶಿಗ್ಗಾಂವ ಹಾಗೂ ಹಾನಗಲ್‌ ತಾಲೂಕುಗಳ 105ಗ್ರಾಮ ಪಂಚಾಯತಿಗಳಲ್ಲಿ ಚುನಾವಣೆ ನಡೆಯಲಿದೆ.ಈ ವ್ಯಾಪ್ತಿಯಲ್ಲಿ 1461 ಸದಸ್ಯ ಸ್ಥಾನಗಳಿಗೆ ಚುನಾವಣೆಘೋಷಣೆಯಾಗಿದೆ. ಈ ಪೈಕಿ 75 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಉಳಿದ 1386 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 4,969 ಉಮೇದುವಾರರು ಅಂತಿಮ ಕಣದಲ್ಲಿ ಸ್ಪರ್ಧೆಯಲ್ಲಿದ್ದಾರೆ.

ಬ್ಯಾಡಗಿ ತಾಲೂಕಿನ 18 ಗ್ರಾಮ ಪಂಚಾಯತಿಗಳ 83 ಕ್ಷೇತ್ರಗಳ 243 ಸ್ಥಾನಗಳ ಪೈಕಿ 16 ಸ್ಥಾನಗಳಿಗೆಅವಿರೋಧ ಆಯ್ಕೆಯಾಗಿದೆ. 227 ಸ್ಥಾನಗಳಿಗೆ ಚುನಾವನೆ ನಡೆಯಲಿದೆ. ಸವಣೂರು ತಾಲೂಕಿನ 21ಗ್ರಾಮ ಪಂಚಾಯತಿಗಳ 112 ಕ್ಷೇತ್ರಗಳ 313 ಸ್ಥಾನಗಳ ಪೈಕಿ 28 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.285 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಶಿಗ್ಗಾವಿ ತಾಲೂಕಿನ 27 ಗ್ರಾಮ ಪಂಚಾಯತಿಗಳ120 ಕ್ಷೇತ್ರಗಳ 346 ಸ್ಥಾನಗಳ ಪೈಕಿ 21 ಸ್ಥಾನಗಳಿಗೆಅವಿರೋಧ ಆಯ್ಕೆಯಾಗಿದೆ. 325 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಹಾನಗಲ್ಲ ತಾಲೂಕಿನ 39ಗ್ರಾಮ ಪಂಚಾಯತಿಗಳ 202 ಕ್ಷೇತ್ರಗಳ 559 ಸ್ಥಾನಗಳ ಪೈಕಿ 10 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. 549 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಸಿಬ್ಬಂದಿ ನಿಯೋಜನೆ: ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು, ಪ್ರೊಸಿಡಿಂಗ್‌ಆಫೀಸರ್‌ರ್‌, ಪೋಲಿಂಗ್‌ ಆಫೀಸರ್‌, ಗ್ರೂಪ್‌ ಡಿ ನೌಕರರು, ಆರೋಗ್ಯ ಕಾರ್ಯಕರ್ತರು, ಸೆಕ್ಟೆರ್‌ ಅಧಿಕಾರಿಗಳನ್ನು ಒಳಗೊಂಡಂತೆ 5,992 ಜನರನ್ನು ನಿಯೋಜಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ಗರಿಷ್ಠ ಪೊಲೀಸ್‌ ಬಂದೋಬಸ್ತ್ ಒದಗಿಸಲಾಗಿದೆ.ಡಿವೈಎಸ್‌ಪಿ, ಸಿಪಿಐ, ಜನ ಪಿಎಸ್‌ಐ, ಎಎಸ್‌ಐ, ಪೇದೆಗಳು ಹಾಗೂ ಮುಖ್ಯ ಪೇದೆಗಳು, ಡಿಎಆರ್‌ತುಕಡಿಗಳು, ಕೆಎಸ್‌ಆರ್‌ಪಿ ತುಕಡಿ ಹಾಗೂ ಹೋಂ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ.

ಕೋವಿಡ್‌ ಮುನ್ನೆಚ್ಚರಿಕೆ: ಪ್ರತಿ ಮತಗಟ್ಟೆಗಳಲ್ಲೂ ಕೋವಿಡ್‌ ಸುರಕ್ಷತೆಗಾಗಿ ಮತಗಟ್ಟೆ, ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ಯಾನರ್‌ ಹಾಗೂ ಕೋವಿಡ್‌ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗಿದೆ. ವ್ಯಾಕ್ಸ್‌ ಕಿಟ್‌, ಕೋವಿಡ್‌ಪ್ರೊಟೆಕ್ಷನ್‌ ಕಿಟ್‌, ಥರ್ಮಲ್‌ ಸ್ಕ್ಯಾನರ್‌ಗಳನ್ನು ವ್ಯವಸ್ಥೆಮಾಡಲಾಗಿದೆ. ಮತದಾನ ಮಾಡುವ ಸಂದರ್ಭದಲ್ಲಿ ಅಂತರ ಕಾಯ್ದುಕೊಳ್ಳಲು ಕನಿಷ್ಠ ಆರು ಅಡಿ ಅಂತರದಲ್ಲಿಮಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆ ಪ್ರವೇಶಮುನ್ನ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ನಿಂದ ಕೈತೊಳೆಯುವ ವ್ಯವಸ್ಥೆ ಮಾಡಲಾಗಿದೆ. ಕೋವಿಡ್‌ ಲಕ್ಷಣಗಳು ಕಂಡುಬಂದರೆ ಹಾಗೂ ಈಗಾಗಲೇ ಕೋವಿಡ್‌ ಇದ್ದರೆ ಅವರು ಮತದಾನ ಮಾಡಲು ಇಚ್ಚಿಸಿದರೆ ಸುರಕ್ಷತಾಕ್ರಮ, ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಮತದಾನದ ಕೊನೆಯ ಗಂಟೆಯಲ್ಲಿ ಸಂಜೆ 4 ರಿಂದ 5 ಗಂಟೆವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಮಸ್ಟರಿಂಗ್‌ ಕೇಂದ್ರ :

ಬ್ಯಾಡಗಿ ಪಟ್ಟಣದ ಎಸ್‌ಜೆವಿ ಹಿರಿಯ ಪ್ರಾಥಮಿಕ ಶಾಲೆ, ಸವಣೂರು ಪಟ್ಟಣದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಶಿಗ್ಗಾವಿ ನಗರದ ಜೆಎಂಜಿ ಶಾಲೆ ಹಾಗೂ ಹಾನಗಲ್ಲನ ಕುಮಾರೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಸ್ಟರಿಂಗ್‌ ಹಾಗೂ ರಂದು ಅದೇ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.

670 ಮತಗಟ್ಟೆ ಸ್ಥಾಪನೆ :

ಎರಡನೇ ಹಂತದಲ್ಲಿ ಜರುಗಲಿರುವ ಚುನಾವಣೆಗೆ ನಾಲ್ಕು ತಾಲೂಕುಗಳಲ್ಲಿ 670ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬ್ಯಾಡಗಿ ತಾಲೂಕಿನಲ್ಲಿ ಹೆಚ್ಚುವರಿ ಮತಗಟ್ಟೆಗಳುಸೇರಿದಂತೆ 109, ಸವಣೂರು ತಾಲೂಕಿನಲ್ಲಿ146, ಶಿಗ್ಗಾವಿ ತಾಲೂಕಿನಲ್ಲಿ 158 ಹಾಗೂ ಹಾನಗಲ್ಲ ತಾಲೂಕಿನಲ್ಲಿ 257 ಮತಗಟ್ಟೆಗಳನ್ನುಸ್ಥಾಪಿಸಲಾಗಿದೆ. ಈ ಬಾರಿ ಮತದಾರರ ಎಡಗೈ ಹೆಬ್ಬಟ್ಟಿಗೆ ಅಳಿಸಲಾರದ ಶಾಹಿ ಹಾಕಲಾಗುವುದು.ಈ ಉದ್ದೇಶಕ್ಕಾಗಿ ಅಳಿಸಲಾರದ ಶಾಹಿಯನ್ನು ಮತಗಟ್ಟೆಗಳಿಗೆ ಸರಬರಾಜು ಮಾಡಲಾಗಿದೆ.

ಮತದಾರರ ವಿವರ  ;

ಬ್ಯಾಡಗಿ ತಾಲೂಕಿನಲ್ಲಿ 37,628 ಪುರುಷರು, 35,503 ಮಹಿಳೆಯರು ಹಾಗೂ75 ಸೇವಾ ಮತದಾರರು ಸೇರಿ 73,206 ಮತದಾರರು, ಸವಣೂರು ತಾಲೂಕಿನ 49,747 ಪುರುಷರು, 46,477 ಮಹಿಳೆಯರುಹಾಗೂ 132 ಸೇವಾ ಮತದಾರರು ಸೇರಿ 96,356 ಮತದಾರರು, ಶಿಗ್ಗಾಂವ ತಾಲೂಕಿನ 52,423 ಪುರುಷರು, 48,027 ಮಹಿಳೆಯರು, ಇತರೆ04 ಹಾಗೂ 93 ಸೇವಾ ಮತದಾರರು ಹಾಗೂ ಹಾನಗಲ್‌ ತಾಲೂಕಿನ 87,147 ಪುರುಷರು, 80,360 ಮಹಿಳೆಯರು, 05 ಇತರೆ ಹಾಗ 72 ಸೇವಾ ಮತದಾರರು ಸೇರಿ1,67,574 ಮತದಾರರಿದ್ದಾರೆ. ಒಟ್ಟು ನಾಲ್ಕು ತಾಲೂಕಿನಲ್ಲಿ 2,26,945 ಪುರುಷ, 2,10,367 ಮಹಿಳಾ, 09 ಇತರೆ ಹಾಗೂ 372 ಸೇವಾ ಮತದಾರರು ಸೇರಿ 4,37,93 ಮತದಾರರಿದ್ದಾರೆ.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.