ಕನ್ನಡ ನುಡಿ ಸಂಭ್ರಮಕ್ಕೆ ಸಿದ್ಧತೆ ಪೂರ್ಣ


Team Udayavani, Dec 10, 2019, 3:39 PM IST

hv-tdy-1

ಅಕ್ಕಿಆಲೂರು: ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಸಮಾರಂಭ ಗಳನ್ನು ಆಯೋಜಿಸುತ್ತ ನಾಡಿನ ಮೂಲೆ ಮೂಲೆಯಲ್ಲೂ ಪ್ರಚಲಿತದಲ್ಲಿರುವ ಅಕ್ಕಿಆಲೂರಿನಲ್ಲೀಗ 29ನೇ ವರ್ಷದ ಕನ್ನಡ ನುಡಿಸಂಭ್ರಮದ ಸಡಗರಸಂಭ್ರಮ ಮನೆ ಮಾಡಿದೆ.

ಪಟ್ಟಣದ ಶ್ರೀ ದುಂಡಿಬಸವೇಶ್ವರ ಜನಪದ ಕಲಾ ಸಂಘದ ಆಶ್ರಯದಲ್ಲಿ ಕನ್ನಡ ನುಡಿ ಸಂಭ್ರಮ-29ರ ವಿಶೇಷ ಸಾಂಸ್ಕೃತಿಕ ಸಮಾರಂಭ ಡಿ. 12ರಿಂದ ಡಿ. 14ರ ವರೆಗೆ ಮೂರು ದಿನ ವೈಶಿಷ್ಟéಪೂರ್ಣವಾಗಿ ನೆರವೇರಲಿದ್ದು, ಸಮಾರಂಭದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಕನ್ನಡ ನುಡಿ ಸಂಭ್ರಮಕ್ಕೆ ದಿನಗಣನೆ ಆರಂಭಗೊಂಡಿರುವಂತೆಯೇ ಪಟ್ಟಣ ಕನ್ನಡಮಯವಾಗುತ್ತಿದೆ. ಸಮಾರಂಭಕ್ಕೆ ಶುಭ ಹಾರೈಸುವ ಕಟೌಟ್‌ ಗಳು, ಫ್ಲೆಕ್ಸ್‌ಗಳು, ಕನ್ನಡದ ಧ್ವಜಗಳು, ಕನ್ನಡ ಬಾವುಟದ ಕಮಾನುಗಳು, ಬಂಟಿಂಗ್ಸ್‌ಗಳ ಕಲರವ ಪಟ್ಟಣದ ಎಲ್ಲೆಡೆ ಕಂಡುಬರುತ್ತಿದೆ. ಮನೆಮನಗಳ ಹಬ್ಬವಾಗುತ್ತಿರುವ ಕನ್ನಡ ನುಡಿ ಸಂಭ್ರಮ ಸಮಾರಂಭವನ್ನು ಒಂದೆಡೆ ಸಾಹಿತ್ಯಾಸಕ್ತ ಬಳಗ ಉತ್ಸಾಹದಿಂದ ಎದುರು ನೋಡುತ್ತಿದ್ದರೇ, ಇತ್ತ ಮನೆಯಂಗಳವನ್ನು ಕನ್ನಡಮಯಗೊಳಿಸುತ್ತಿರುವ ಕನ್ನಡಿಗರ ಕನ್ನಡ ಪ್ರೀತಿಗೆ ಪಾರವೇ ಇಲ್ಲದಂತಾಗಿದೆ.

ಇಲ್ಲಿನ ಪ್ರಮುಖ ರಸ್ತೆ, ವೃತ್ತಗಳಲ್ಲಿ ಸಾಹಿತಿಗಳ ಹೆಸರಿನಲ್ಲಿ ಮಹಾದ್ವಾರ ನಿರ್ಮಾಣ ಕಾರ್ಯ, ಪ್ರಧಾನ ವೇದಿಕೆ ನಿರ್ಮಾಣ ಕಾರ್ಯಗಳು ಭರದಿಂದ ಸಾಗಿದ್ದು, ಸಂಘದ ಕಾರ್ಯಕರ್ತರು ಹಗಲು ರಾತ್ರಿ ಕನ್ನಡ ನಾಡಾಭಿಮಾನ ಸೇವೆಯಲ್ಲಿ ನಿರತರಾಗಿದ್ದಾರೆ. ಐತಿಹಾಸಿಕ ಹಿನ್ನೆಲೆಯುಳ್ಳ ಅಕ್ಕಿಆಲೂರಿನಲ್ಲಿ ಕನ್ನಡ ನಾಡುನುಡಿಯ ಜಾಗೃತ ಸಂದೇಶ ಸಾರುವ ಸಮಾರಂಭ ಇದಾಗಿದ್ದು, ನಾಡಿನ ಮೂಲೆಮೂಲೆಗಳಿಂದ ಕನ್ನಡಾಭಿಮಾನಿಗಳ ದಂಡು ಇತ್ತಕಡೆ ಧಾವಿಸಲು ಕಾತರತೆಯಿಂದ ಎದುರು ನೋಡುತ್ತಿದೆ. ನಾಡಿನ ವಿವಿಧ ಮಠಾಧಿಧೀಶರು, ಕಲಾವಿದರು, ಸಾಹಿತಿಗಳು, ಖ್ಯಾತ ವಾಗ್ಮಿಗಳು, ಚಲನಚಿತ್ರ ನಟನಟಿಯರು, ಕಿರುತೆರೆ ನಟನಟಿಯರು ಸೇರಿದಂತೆ ಜನಪ್ರತಿನಿಧಿ  ಗಳನ್ನು ಆಹ್ವಾನಿಸಿ ನಾಡಿನ ಭಾಷೆ, ನೆಲ, ಜಲದ ರಕ್ಷಣೆ ಕಾರ್ಯ ಕೈಗೆತ್ತಿಕೊಂಡಿರುವ ಶ್ರೀ ದುಂಡಿಬಸವೇಶ್ವರ ಜನಪದ ಕಲಾ ಸಂಘದ ಕನ್ನಡ ಸೇವೆ ಕಳೆದ 29 ವರ್ಷಗಳಿಂದ ನಿರಂತರವಾಗಿ ನಡೆಯುತ್ತ ಬಂದಿದ್ದು, ಕನ್ನಡ ನುಡಿ ಸಂಭ್ರಮ-29ರ ಸಮಾರಂಭವನ್ನೂ ಅತಿ ವಿಶಿಷ್ಠವಾಗಿ ಹೆಣೆಯಲಾಗಿದೆ.

ಡಿ. 12ರಂದು ಕನ್ನಡ ಧ್ವಜಾರೋಹಣ ಮೂಲಕ ವಿದ್ಯುಕ್ತ ಚಾಲನೆ ಪಡೆದುಕೊಳ್ಳಲಿರುವ ಶ್ರೀ ದುಂಡಿಬಸವೇಶ್ವರ ಜನಪದ ಕಲಾ ಸಂಘದ ಕನ್ನಡ ನುಡಿ ಸಂಭ್ರಮ-29ಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಜಿಲ್ಲಾ ಉತ್ಸವ ಯಾವುದಕ್ಕೂ ಕಡಿಮೆ ಇಲ್ಲ ಎನ್ನುವಂತೆ ವಿಭಿನ್ನ ಕಾರ್ಯಕ್ರಮಗಳನ್ನೊಳಗೊಂಡಂತೆ ರೂಪುಗೊಂಡಿರುವ ಈ ಬಾರಿಯ ಕನ್ನಡ ನುಡಿ ಸಂಭ್ರಮ; ಸಾಹಿತ್ಯಾಸಕ್ತರ ಮನತಣಿಸುವಲ್ಲಿ ಎರಡು ಮಾತಿಲ್ಲ. ಇಲ್ಲಿನ ಮುತ್ತಿನಕಂತಿಮಠ ಗುರುಪೀಠದ ಆವರಣದಲ್ಲಿ ಸಿದ್ಧಗೊಳ್ಳುತ್ತಿರುವ ಪ್ರಧಾನ ವೇದಿಕೆ ನಿರ್ಮಾಣ ಬಹುತೇಕ

ಪೂರ್ಣಗೊಂಡಿದ್ದು, ಕಳೆದ ಬಾರಿ ದಾಖಲಾದ ಕನ್ನಡಾಭಿಮಾನಿಗಳ ಸಂಖ್ಯೆಗನುಸಾರವಾಗಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಂಘದ ಸದಸ್ಯರ ಸಕ್ರೀಯ ಪಾಲ್ಗೊಳ್ಳುವಿಕೆ, ಸಾಹಿತ್ಯಾಸಕ್ತರ ಪ್ರೋತ್ಸಾಹದ ಮಧ್ಯೆ ಕನ್ನಡ ತಾಯಿ ಭುವನೇಶ್ವರಿಯ ತೇರು ಎಳೆಯಲು ಜಿಲ್ಲಾ ಮತ್ತು ರಾಜ್ಯ ಮಟ್ಟದ ವಿಶಿಷ್ಠ ಕಾರ್ಯಕ್ರಮಗಳೊಂದಿಗೆ ಸಮಾರಂಭವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ. ನಾಡಿನ ಖ್ಯಾತ ಸಾಹಿತಿಗಳ, ಕಲಾವಿದರ, ಈ ಭಾಗದಲ್ಲಿ ಪ್ರಾಮಾಣಿಕ ಸೇವೆಗೈದ ಮಹನೀಯರ ಹೆಸರಿನಡಿಯಲ್ಲಿ ನಿರ್ಮಿಸಲಾಗಿರುವ ವೇದಿಕೆಯಲ್ಲಿ ಮಹಿಳಾ ಸಮಾವೇಶ, ಯುವ ಸಂಭ್ರಮ, ಕೃಷಿ ಗೋಷ್ಠಿ, ರೈತ ಸಮಾವೇಶ, ಸಾಂಸ್ಕೃತಿಕ ಸಂಭ್ರಮ ಸೇರಿದಂತೆ ಹತ್ತು ಹಲವಾರು ವಿಶಿಷ್ಠ ಕಾರ್ಯಕ್ರಮಗಳ ಜೋಡಣೆಯ ಮುಖಾಂತರ ನಾಡಿನ ಕನ್ನಡದ ಮನಸ್ಸುಗಳ ಕದ ತಟ್ಟುವಲ್ಲಿ ಕನ್ನಡ ನುಡಿ ಸಂಭ್ರಮ-29 ಯಶಸ್ವಿಯಾಗುವ ಈ ಸಮಾರಂಭ ಅಕ್ಷರಶಃ ಅಕ್ಷರಜಾತ್ರೆಯ ವಿಶಿಷ್ಠ ಅನುಭವವನ್ನು ನೀಡುವಲ್ಲಿ ಎಳ್ಳಷ್ಟು ಸಂಶಯವಿಲ್ಲ.

 

-ಪ್ರವೀಣಕುಮಾರ ಶಿ.ಅಪ್ಪಾಜಿ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.