ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಕ್ಕೆ ಸಿದ್ಧತೆ


Team Udayavani, May 13, 2019, 3:36 PM IST

hav-1

ಹಾವೇರಿ: ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಆರಂಭಿಸುವ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಅನುಷ್ಠಾನಕ್ಕೆ ತರಲು ಉದ್ದೇಶಿಸಲಾಗಿದ್ದು ಇದಕ್ಕಾಗಿ ಭರದ ಸಿದ್ಧತೆ ನಡೆದಿದೆ.

ಜಿಲ್ಲೆಯಲ್ಲಿ ಒಟ್ಟು 24 ಶಾಲೆಗಳಲ್ಲಿ ಆಂಗ್ಲಮಾಧ್ಯಮ ಆರಂಭಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಬೇಕಾದ ಶಿಕ್ಷಕರಿಗೆ ತರಬೇತಿ ನೀಡಲಾಗಿದ್ದು ಇನ್ನೊಂದು ವಿಶೇಷ ತರಬೇತಿಗೆ ತಯಾರಿ ನಡೆದಿದೆ. ಜೂನ್‌ 1ರಿಂದಲೇ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಗೆ ಪ್ರವೇಶ ಆರಂಭವಾಗಲಿದೆ.

ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳ ದುಬಾರಿ ಶುಲ್ಕ, ಡೊನೇಷನ್‌ ಹೊರೆ ಭರಿಸಲಾಗದೆ ಬಡ ಮಕ್ಕಳು ಅನಿವಾರ್ಯವಾಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಸೇರ್ಪಡೆಯಾಗುತ್ತಿದ್ದರು. ಸರಕಾರವೇ ಈಗ ಉಚಿತವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಆಂಗ್ಲಮಾಧ್ಯಮ ಆರಂಭಿಸುತ್ತಿರುವುದರಿಂದ ಬಡ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಎಲ್ಲೆಲ್ಲಿ ಇಂಗ್ಲಿಷ್‌ ಶಾಲೆಗಳು?: ಜಿಲ್ಲೆಯಲ್ಲಿ ಒಟ್ಟು 24 ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಬ್ಯಾಡಗಿ ಕ್ಷೇತ್ರದಲ್ಲಿ ಮೂರು ಆಂಗ್ಲಮಾಧ್ಯಮ ಶಾಲೆಗಳನ್ನು ತೆರೆಯಲಾಗುತ್ತಿದೆ. ಬುಡಪನಹಳ್ಳಿ, ಬಿಸಲಹಳ್ಳಿ ಹಿ.ಪ್ರಾ. ಶಾಲೆ ಹಾಗೂ ಬ್ಯಾಡಗಿಯ ಕೆ.ಪಿ.ಎಸ್‌. ಶಾಲೆಯಲ್ಲಿ ಆಂಗ್ಲಮಾಧ್ಯಮ ವಿಭಾಗ ತೆರೆದುಕೊಳ್ಳಲಿದೆ.

ಹಾನಗಲ್ಲ ತಾಲೂಕಿನಲ್ಲಿ ಒಟ್ಟು ನಾಲ್ಕು ಆಂಗ್ಲಮಾಧ್ಯಮ ಶಾಲೆಗಳನ್ನು ತೆರೆಯಲಾಗುತ್ತಿದೆ. ಜಿ.ಎಂ.ಪಿ.ಎಸ್‌. ಆಡೂರ, ಎಂ.ಪಿ.ಎಸ್‌. ಹಾನಗಲ್, ಬೆಳಗಾಲಪೇಟೆಯ ಉನ್ನತೀಕರಿಸಿದ ಆರ್‌ಎಂಎಸ್‌ಎ ಶಾಲೆ, ವರ್ದಿಯ ಜಿ.ಎಚ್.ಪಿ.ಎಸ್‌. ಶಾಲೆಯಲ್ಲಿ ಆಂಗ್ಲಮಾಧ್ಯಮ ಶಾಲೆ ತಲೆ ಎತ್ತಲಿವೆ.

ಹಾವೇರಿ ತಾಲೂಕಿನಲ್ಲಿ ಒಟ್ಟು ಐದು ಆಂಗ್ಲಮಾಧ್ಯಮ ಶಾಲೆಗಳನ್ನು ತೆರೆಯಲಾಗುತ್ತಿದೆ. ಜಿ.ಎಂ.ಪಿ.ಎಸ್‌. ಕಬ್ಬೂರ, ಎಚ್.ಪಿ.ಯು.ಎಸ್‌. ನಂ.4 ನಾಗೇಂದ್ರಮಟ್ಟಿ, ಜಿ.ಎಂ.ಪಿ.ಎಸ್‌. ನಂ.2 ಹಾವೇರಿ, ಎಚ್.ಪಿ.ಜಿ.ಎಸ್‌. ಕರ್ಜಗಿ, ಜಿ.ಎಚ್.ಪಿ.ಎಸ್‌. ಕೂರಗುಂದದಲ್ಲಿ ಆಂಗ್ಲಮಾಧ್ಯಮ ಶಾಲೆ ಆರಂಭವಾಗಲಿವೆ.

ಹಿರೇಕೆರೂರು ತಾಲೂಕಿನಲ್ಲಿ ಒಟ್ಟು ನಾಲ್ಕು ಆಂಗ್ಲಮಾಧ್ಯಮ ಶಾಲೆಗಳನ್ನು ತೆರೆಯಲಾಗುತ್ತಿದೆ. ಎಂ.ಕೆ.ಬಿ.ಎಸ್‌. ಹಿರೇಕೆರೂರ, ಎಚ್.ಪಿ.ಎಸ್‌. ಕಡೂರ, ಎಚ್.ಪಿ.ಎಸ್‌. ದೂದೀಹಳ್ಳಿ, ಕೆ.ಪಿ.ಎಸ್‌. ನೂಲಗೇರಿಯಲ್ಲಿ ಆಂಗ್ಲಮಾಧ್ಯಮ ಶಾಲೆ ತೆರೆಯಲಾಗುತ್ತಿದೆ. ರಾಣಿಬೆನ್ನೂರು ತಾಲೂಕಿನಲ್ಲಿ ಒಟ್ಟು ನಾಲ್ಕು ಆಂಗ್ಲಮಾಧ್ಯಮ ಶಾಲೆಗಳು ಆರಂಭವಾಗಲಿವೆ. ಜಿ.ಎಚ್.ಪಿ.ಎಸ್‌. ಇಟಗಿ, ಎಚ್.ಪಿ.ಎಸ್‌. ನಂ.17 ಮಾರುತಿ ನಗರ ರಾಣಿಬೆನ್ನೂರ, ಜಿ.ಎಚ್.ಪಿ.ಎಸ್‌. ಹರನಗಿರಿ, ಜಿ.ಎಂ.ಪಿ.ಎಸ್‌. ಅರೇಮಲ್ಲಾಪೂರ ಶಾಲೆಯಲ್ಲಿ ಆಂಗ್ಲಮಾಧ್ಯಮ ಶಾಲೆ ಆರಂಭವಾಗಲಿವೆ.

ಸವಣೂರು ತಾಲೂಕಿನಲ್ಲಿ ಎರಡು ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶುರುವಾಗಲಿದೆ. ಮಜೀದ್‌ ಕರ್ನಾಟಕ ಪಬ್ಲಿಕ್‌ ಶಾಲೆ ಸವಣೂರ, ಎಚ್.ಪಿ.ಎಸ್‌. ತೆಗ್ಗಿಹಳ್ಳಿಯಲ್ಲಿ ಆಂಗ್ಲಮಾಧ್ಯಮ ಶಾಲೆ ತೆರೆಯಲಾಗುತ್ತಿದೆ.

ಶಿಗ್ಗಾವಿ ತಾಲೂಕಿನಲ್ಲಿ ಎರಡು ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶುರುವಾಗಲಿದೆ. ಕೆ.ಪಿ.ಎಸ್‌ ಶಾಲೆ ನಾರಾಯಣಪೂರ, ಎಂ.ಕೆ.ಬಿ.ಎಸ್‌. ಶಿಗ್ಗಾವಿಯಲ್ಲಿ ಆಂಗ್ಲಮಾಧ್ಯಮ ಶಾಲೆ ತೆರೆಯಲಾಗುತ್ತಿದೆ.

ಸುಸಜ್ಜಿತ ಕಟ್ಟಡ, ಪ್ರತ್ಯೇಕ ಕೊಠಡಿ ಸೇರಿದಂತೆ ಇನ್ನಿತರ ಸೌಕರ್ಯ ಇರುವ, ಹೆಚ್ಚಿನ ಮಕ್ಕಳು ದಾಖಲಾಗಬಹುದಾದ ಶಾಲೆಗಳನ್ನು ಆಂಗ್ಲಮಾಧ್ಯಮಕ್ಕಾಗಿ ಆಯ್ಕೆ ಮಾಡಲಾಗಿದೆ. ಇಂಥ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಲು ಶಾಲಾ ಕಟ್ಟಡಗಳಿಗೆ ಸುಣ್ಣ-ಬಣ್ಣ ಬಳಿಯಲಾಗುತ್ತಿದೆ. ಸರ್ಕಾರ ಆಂಗ್ಲಮಾಧ್ಯಮ ಮಕ್ಕಳಿಗೆ ಪ್ರತ್ಯೇಕ ಬಣ್ಣದ ಸಮವಸ್ತ್ರದ ಬಗ್ಗೆ ಸೂಚನೆ ನೀಡದೆ ಇದ್ದರೂ ಶಾಲಾಭಿವೃದ್ಧಿ ಸಮಿತಿಯವರು ಸ್ವಯಂಪ್ರೇರಣೆಯಿಂದ ಪ್ರತ್ಯೇಕ ಬಣ್ಣದ ಸಮವಸ್ತ್ರ ಮಾಡಿಕೊಳ್ಳಲು ನಿರ್ಧರಿಸಿವೆ. ಒಟ್ಟಾರೆ ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಸಕಲ ಸಿದ್ಧತೆ ನಡೆದಿದೆ.

ಇದೇ ಮೊದಲ ಬಾರಿಗೆ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಒಂದು ಶಾಲೆಗೆ ಇಬ್ಬರು ಶಿಕ್ಷಕರನ್ನು ತರಬೇತುಗೊಳಿಸಲಾಗುತ್ತಿದೆ. ಆಯಾ ಶಾಲೆಯ ಶಿಕ್ಷಕರಿಗೆ ಹಾಗೂ ಅಕ್ಕ ಪಕ್ಕದ ಶಾಲೆ ಆಸಕ್ತ ಶಿಕ್ಷಕರಿಗೆ, ಇಂಗ್ಲಿಷ್‌ ವಿಷಯದಲ್ಲಿ ಪದವಿ ಪಡೆದವರಿಗೆ, ಆಸಕ್ತ ಶಿಕ್ಷಕರನ್ನು ಆಯ್ದು ಅವರಿಗೆ ಡಯಟ್ ಮೂಲಕ ತರಬೇತಿ ನೀಡಲಾಗುತ್ತಿದೆ. ಇನ್ನೊಂದು ವಿಶೇಷ ತರಬೇತಿಗೆ ಸಿದ್ಧತೆ ನಡೆದಿದೆ.

ಶಿಕ್ಷಕರಿಗೆ ವಿಶೇಷ ತರಬೇತಿ

ಇದೇ ಮೊದಲ ಬಾರಿಗೆ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಒಂದು ಶಾಲೆಗೆ ಇಬ್ಬರು ಶಿಕ್ಷಕರನ್ನು ತರಬೇತುಗೊಳಿಸಲಾಗುತ್ತಿದೆ. ಆಯಾ ಶಾಲೆಯ ಶಿಕ್ಷಕರಿಗೆ ಹಾಗೂ ಅಕ್ಕ ಪಕ್ಕದ ಶಾಲೆ ಆಸಕ್ತ ಶಿಕ್ಷಕರಿಗೆ, ಇಂಗ್ಲಿಷ್‌ ವಿಷಯದಲ್ಲಿ ಪದವಿ ಪಡೆದವರಿಗೆ, ಆಸಕ್ತ ಶಿಕ್ಷಕರನ್ನು ಆಯ್ದು ಅವರಿಗೆ ಡಯಟ್ ಮೂಲಕ ತರಬೇತಿ ನೀಡಲಾಗುತ್ತಿದೆ. ಇನ್ನೊಂದು ವಿಶೇಷ ತರಬೇತಿಗೆ ಸಿದ್ಧತೆ ನಡೆದಿದೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.