ಪ್ರಧಾನಮಂತ್ರಿ ಆವಾಸ್ ಯೋಜನೆ ಅನುದಾನ ಬಿಡುಗಡೆಗೆ ಒತ್ತಾಯ
Team Udayavani, Feb 26, 2020, 3:33 PM IST
ಗುತ್ತಲ: ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿನ ಕೇಂದ್ರ ಸರ್ಕಾರದಿಂದ ಫಲಾನುಭವಿಗಳಿಗೆ ಅನುದಾನ ಜಮೆ ಆಗದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಹಾವೇರಿ ರಸ್ತೆಯಲ್ಲಿರುವ ಬಿರೇಶ್ವರ ದೇವಸ್ಥಾನ ಹತ್ತಿರದ ಕರವೇ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಕಲ್ಮಠ, ಎಸ್ಆರ್ಎಸ್ ವೃತ್ತದ ಮೂಲಕ ಪಂಚಾಯಿತಿಗೆ ಆಗಮಿಸಿತು.
ನಂತರ ಪಪಂ ಉತ್ತರ ಭಾಗದಲ್ಲಿನ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಹಾಲೇಶ ಹಾಲಣ್ಣನವರ, ಸರ್ಕಾರ ಹೆಚ್ಚುವರಿ ಹಣ ಬಿಡುಗಡೆ ಮಾಡದೆ ಇರುವ ಕಾರಣಕ್ಕೆ ಫಲಾನುಭವಿಗಳಿಗೆ ತೊಂದರೆಯಾಗಿದೆ. ಸಾಲ ಮಾಡಿರುವ ಫಲಾನುಭವಿಗಳಿಗೆ ತೀವ್ರ ತೊಂದರೆಯಾಗಿದೆ. ಒಟ್ಟಾರೆ ಫಲಾನುಭವಿಗಳ ಸಂಕಷ್ಟವನ್ನು ಅರ್ಥ ಮಾಡಿಕೊಂಡ ಆದಷ್ಟು ಬೇಗ ಹಣವನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ಮಾಡಲಾಗವುದೆಂದು ಎಚ್ಚರಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಮಾಜಿಕ ಅಭಿವೃದ್ಧಿ ತಜ್ಞ ನಾಗರಾಜ ಗುಳೇದ ಮನವಿ ಸ್ವೀಕರಿಸಿ ಮಾತನಾಡಿ, ಕೆಲವು ಸಮಸ್ಯೆಗಳಿದ್ದು ಹಣ ಜಮೆಗೆ ತೊಂದರೆಯಾಗಿದೆ. ರಾಜೀವ ಗಾಂಧಿ ವಸತಿ ನಿಗಮದಿಂದ ನಮಗೆ ನಿರ್ದೇಶನ ಬಂದಿದ್ದು, ಅದರಂತೆ ಪರಿಶೀಲಿಸಿ ಫಲಾನುಭವಿಗಳಿಗೆ ಶೀಘ್ರ ಹಣ ಜಮೆ ಆಗುವಂತೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಕರವೇ ಜಿಲ್ಲಾ$ಪ್ರಧಾನ ಕಾರ್ಯದರ್ಶಿ ಯಶವಂತಗೌಡ್ರ ದೊಡ್ಡಗೌಡ್ರ, ಚನ್ನಪ್ಪ ಹೊನ್ನಮ್ಮನವರ, ದಾದಪೀರ್ ಖಾಲೇಕಾಲನವರ, ಶೇಖರ ನರಸಣ್ಣನವರ, ಯುವ ಘಟಕದ ಅಧ್ಯಕ್ಷ ಫಕೃದ್ಧೀನ ಅಂಗಡಿಕಾರ,ಪ್ರಧಾನ ಕಾರ್ಯದರ್ಶಿ ಕರಬಸು ಕುರುಬಗೇರಿ, ಗೌಸಪಾಕ ಬಾಲೇಭಾಯಿ, ಶಿವು ಬೆನ್ನೂರ, ರೇಹಾನ ಮುಜಾವರ ಸೇರಿದಂತೆ ಯೋಜನೆ ಫಲಾನುಭವಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್