ವಾಡೆಯಲ್ಲಿ ಖಾಸಗಿ ದರ್ಬಾರ್
Team Udayavani, Oct 7, 2019, 1:21 PM IST
ಹಾವೇರಿ: ಮೈಸೂರು ಮಹಾರಾಜರ ಖಾಸಗಿ ದರ್ಬಾರ್ ಮಾದರಿಯಲ್ಲಿ ತಾಲೂಕಿನ ಹಂದಿಗನೂರ ಗ್ರಾಮದ ವಾಡೆಯಲ್ಲಿಯೂ ದೇಸಾಯಿ ಮನೆತನದವರು ಖಾಸಗಿ ದರ್ಬಾರ್ ಸಂಪ್ರದಾಯ ಮುಂದುವರಿಸಿಕೊಂಡು ಬಂದು ಗಮನ ಸೆಳೆದಿದ್ದಾರೆ.
ಮೈಸೂರು ದಸರಾ ಆರಂಭವಾದ ಒಂದು ವರ್ಷದ ಬಳಿಕ ಹಂದಿಗನೂರ ಗ್ರಾಮದ ವಾಡೆಯಲ್ಲಿಯೂ ದೇಸಾಯಿ ಮನೆತನದವರು ಖಾಸಗಿ ದರ್ಬಾರ್ ಆರಂಭಿಸಿದರು. ಅಂದಿನಿಂದ ಇಂದಿನ ವರೆಗೂ ಕಳೆದ ನಾಲ್ಕು ಶತಮಾನಗಳಿಂದ ಹಂದಿಗನೂರು ಗ್ರಾಮದ ದೇಸಾಯಿ ಮನೆತನದವರು ನವರಾತ್ರಿ ಸಂದರ್ಭದಲ್ಲಿ ಪ್ರತಿವರ್ಷ ಖಾಸಗಿ ದರ್ಬಾರ್ ಹಾಗೂ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಸುತ್ತ ಬಂದಿದ್ದಾರೆ. ಮೈಸೂರಿನ ಅರಸರು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಸಿದರೆ, ಹಂದಿಗನೂರ ದೇಸಾಯಿ ಮನೆತನದವರು ವಾಡೆಯಲ್ಲಿ ಖಾಸಗಿ ದರ್ಬಾರ್ ನಡೆಸುತ್ತಾರೆ. ಹಂದಿಗನೂರ ಮಾಮಲೆ ದೇಸಾಯಿ ಸಂಸ್ಥಾನದ ವಂಶಸ್ಥರು ನಡೆಸುತ್ತಿರುವ ಖಾಸಗಿ ದರ್ಬಾರ್ಗೆ ನಾಲ್ಕು ಶತಮಾನಗಳ ಇತಿಹಾಸವಿದೆ. ಇದು ಈಗ ಸಾಂಕೇತಿಕ ಆಚರಣೆ ಸೀಮಿತವಾಗಿರಬಹುದು. ಆದರೆ, ಇಂದಿಗೂ ಅದರ ಹೊಳಪು ಮಾತ್ರ ಹಾಗೆಯೇ ಇದೆ.
ಖಾಸಗಿ ದರ್ಬಾರ್: ಹಂದಿಗನೂರ ಮಾಮಲೆದೇಸಾಯಿ ಅವರು ಬಿಳಿ ಬಣ್ಣದ ರೇಷ್ಮೆ ವಸ್ತ್ರ ಹಾಕಿಕೊಂಡು ವಾಡೆಯಲ್ಲಿ ಕುಳಿತು ಖಾಸಗಿ ದರ್ಬಾರ್ ನಡೆಸುತ್ತಾರೆ. ಇದಕ್ಕೂ ಮುನ್ನ ವಾಡೆ ಪುರೋಹಿತರೊಂದಿಗೆ ಆಯುದ ಪ್ರಜೆ ನೆರವೇರಿಸುತ್ತಾರೆ. ನಂತರ ಗ್ರಾಮಸ್ಥರಿಂದ ಒಪ್ಪಿಗೆ ಪತ್ರ ಪಡೆದು ವಾಡೆ ಮಾಲೀಕರ ಸಂಪ್ರದಾಯದಂತೆ ಸೇವಕರಿಗೆ ಆಯುಧಗಳನ್ನು ನೀಡಿ ಖಾಸಗಿ ದರ್ಬಾರ್ ಆರಂಭಿಸುತ್ತಾರೆ.
ಬನ್ನಿ ಮುಡಿಯುವುದು: ಖಾಸಗಿ ದರ್ಬಾರ್ ಮುಗಿಸಿದ ನಂತರ ಗ್ರಾಮಸ್ಥರೊಂದಿಗೆ ಮೆರವಣಿಗೆ ಮೂಲಕ ತೆರಳುವ ಮಾಮಲೇದೇಸಾಯಿ ಅವರನ್ನು ಸೇರಿ ಗ್ರಾಮದ ದ್ಯಾಮವ್ವ ದೇವಿ ಪಲ್ಲಕ್ಕಿ, ಗಾಳೆವ್ವ ದೇವಿ ಪಲ್ಲಕ್ಕಿ , ದುರ್ಗಾದೇವಿ ಪಲ್ಲಕ್ಕಿ, ಬಸವೇಶ್ವರ ದೇವರ ಪಲ್ಲಕ್ಕಿ, ಆಮಜನೇಯ ದೇವರ ಪಲ್ಲಕ್ಕಿ, ಗ್ರಾಮದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿರುವ ಬನ್ನಿಮಂಟಪಕ್ಕೆ ತೆರಳಿ ಬನ್ನಿ ಗಿಡಕ್ಕೆ ವಿಶೇ‚ಷ ಪೂಜೆಸಲ್ಲಿಸುವ ಮೂಲಕ ಬನ್ನಿ ಮುಡಿಯುವ ಕಾರ್ಯಕ್ಕೆ ಚಾಲನೆ ನೀಡುತ್ತಾರೆ. ಬನ್ನಿ ಮುಡಿದು ಮೆರವಣಿಗೆ ಮೂಲಕ ವಾಪಸ್ಸಾಗುವ ಸಂದರ್ಭದಲ್ಲಿ ಮಾಮಲೇದೇಸಾಯಿ ಅವರಿಗೆ ಗ್ರಾಮದ ಮಹಿಳೆಯರು ಆರತಿ ಬೆಳಗಿ ಹರಸುತ್ತಾರೆ. ಮೆರವಣಿಗೆ ವಾಡೆಗೆವಾಪಸ್ಸಾದನಂತರ ಗ್ರಾಮಸ್ಥರು ಮಾಮಲೆದೇಸಾಯಿ ಅವರಿಗೆ ಬನ್ನಿ ನೀಡಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ನಂತರವೇ ಗ್ರಾಮದಲ್ಲಿ ಬನ್ನಿ ವಿನಿಮಯ ಕಾರ್ಯ ಆರಂಭವಾಗುತ್ತದೆ.
-ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ