ಆನ್‌ಲೈನ್‌ ಸೇವೆಗಿಳಿದ ಖಾಸಗಿ ಆಸ್ಪತ್ರೆ

ಇನ್ನು ಆರೋಗ್ಯ ಸೇವೆಯೂ ಆನ್‌ಲೈನ್‌ನಲ್ಲಿ ಲಭ್ಯ

Team Udayavani, Jul 19, 2020, 12:10 PM IST

ಆನ್‌ಲೈನ್‌ ಸೇವೆಗಿಳಿದ ಖಾಸಗಿ ಆಸ್ಪತ್ರೆ

ಸಾಂದರ್ಭಿಕ ಚಿತ್ರ

ಹಾವೇರಿ: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಆನ್‌ಲೈನ್‌ ಖರೀದಿ, ಆನ್‌ಲೈನ್‌ ಸಭೆ, ಆನ್‌ಲೈನ್‌ ಬ್ಯಾಂಕಿಂಗ್‌, ಆನ್‌ಲೈನ್‌ ಶಿಕ್ಷಣ ಸೇರಿದಂತೆ ವಿವಿಧ ಸೇವೆ, ವ್ಯವಹಾರಗಳು ಈಗ ಆನ್‌ ಲೈನ್‌ನಲ್ಲಿಯೇ ನಡೆಯುತ್ತಿದ್ದು ಇವುಗಳ ಸಾಲಿಗೆ ಈಗ ಆನ್‌ಲೈನ್‌ ಆರೋಗ್ಯ ಸೇವೆಯೂ ಸೇರಿಕೊಂಡಿದೆ.

ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಗಳು ಟೆಲಿ ಕನ್ಸಲ್ಟಿಂಗ್‌, ವಿಡಿಯೋ ಕಾಲಿಂಗ್‌, ವಾಟ್ಸ್‌ಆ್ಯಪ್‌ ಮೂಲಕ ಆನ್‌ ಲೈನ್‌ನಲ್ಲಿಯೇ ರೋಗಿಗಳ ಆರೋಗ್ಯ ತಪಾಸಣೆ, ಔಷಧೋಪಚಾರ, ಆರೋಗ್ಯ ಸಲಹೆ, ಆನ್‌ ಲೈನ್‌ನಲ್ಲಿ ವೈದ್ಯರ ಭೇಟಿಗೆ ಬುಕ್ಕಿಂಗ್‌ ಜತೆಗೆ ಆನ್‌ ಲೈನ್‌ನಲ್ಲಿಯೇ ಸೇವಾ ಶುಲ್ಕ ಪಡೆಯುವ ಯೋಜನೆ ರೂಪಿಸಿಕೊಂಡಿವೆ.

ಬದಲಾದ ಪರಿಸ್ಥಿತಿಗೆ ಪೂರಕವಾಗಿ ಖಾಸಗಿ ಆಸ್ಪತ್ರೆಗಳು ರೂಪಿಸಿಕೊಂಡ ಆನ್‌ಲೈನ್‌ ಆರೋಗ್ಯ ಸೇವೆಯಿಂದ ಜನರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗಾಗಿ ಆಸ್ಪತ್ರೆಗಳಿಗೆ ಭೇಟಿ ನೀಡುವುದಕ್ಕೆ ಕಡಿವಾಣ ಬೀಳುತ್ತಿದೆ. ಆಸ್ಪತ್ರೆಗಳಿಗೆ ಅನಗತ್ಯ ಓಡಾಟ, ಆಸ್ಪತ್ರೆಯ ಇತರ ರೋಗಿಗಳ ಸಂಪರ್ಕ ಹೊಂದುವುದಕ್ಕೆ ಬ್ರೇಕ್‌ ಬೀಳುತ್ತಿದೆ. ಜನರು ಮನೆಯಲ್ಲಿಯೇ ಇದ್ದು ತಮ್ಮ ಆರೋಗ್ಯ ಸಮಸ್ಯೆಗಳಿಗೆ ವೈದ್ಯರಿಂದ ಸಲಹೆ, ಔಷಧೋಪಚಾರ ಸೇವೆ ಪಡೆಯಲು ಉಪಯುಕ್ತವಾಗಿದೆ.

ಹೀಗಿದೆ ಆನ್‌ಲೈನ್‌ ಸೇವೆ: ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಇದ್ದವರು ಆಸ್ಪತ್ರೆಗೆ ದೂರವಾಣಿ ಕರೆ ಮಾಡಿ ಹೆಸರು ನೋಂದಾಯಿಸಬೇಕು. ಬಳಿಕ ಮೊಬೈಲ್‌ ಮೂಲಕವೇ ಆನ್‌ಲೈನ್‌ನಲ್ಲಿ ಆಸ್ಪತ್ರೆ ನಿಗದಿಪಡಿಸಿರುವ ಸೇವಾ ಶುಲ್ಕಪಾವತಿಸಬೇಕು. ಬಳಿಕ ವೈದ್ಯರು ವಿಡಿಯೋ ಕಾಲ್‌ ಮಾಡಿ ರೋಗಿಯೊಂದಿಗೆ ಸಮಾಲೋಚನೆ ನಡೆಸುತ್ತಾರೆ. ರೋಗಿಯ ಈ ಹಿಂದಿನ ಚಿಕಿತ್ಸಾ ವರದಿಗಳಿದ್ದರೆ ಅದನ್ನೂ ಮೊಬೈಲ್‌ನಲ್ಲಿ ತರಿಸಿಕೊಂಡು ನೋಡುತ್ತಾರೆ. ರೋಗಿಯ ಸಮಸ್ಯೆ ಆಧರಿಸಿ ಮೊಬೈಲ್‌ನಲ್ಲಿಯೇ ಔಷಧ ಚೀಟಿ ಬರೆದು ಫೋಟೋ ಕಳುಹಿಸುತ್ತಾರೆ. ಒಂದು ವೇಳೆ ಸಮಸ್ಯೆ ಗಂಭೀರವಾಗಿದ್ದು ನೇರವಾಗಿ ರೋಗಿಯ ಆರೋಗ್ಯ ತಪಾಸಣೆ, ಇಲ್ಲವೇ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಅವರನ್ನು ಆಸ್ಪತ್ರೆಗೆ ಭೇಟಿ ನೀಡಲು ಸಲಹೆ ನೀಡುತ್ತಾರೆ.

ತಲೆಕೆಳಗಾದ ನಿಯಮ: ಕೋವಿಡ್‌-19 ವೈರಸ್‌ ಹರಡುವ ಮೊದಲು “ಶಾಲೆಯಲ್ಲಿ ಮೊಬೈಲ್‌ ನಿಷೇಧ. ವಿದ್ಯಾರ್ಥಿಗಳು ಮೊಬೈಲ್‌ನಿಂದ ದೂರ ಇರಬೇಕು’ ಎಂದೆಲ್ಲ ನಿಯಮವಿತ್ತು. ಕೋವಿಡ್ ಸೋಂಕು ಬಂದ ಬಳಿಕ ಈಗ ಮೊಬೈಲ್‌ನಲ್ಲಿಯೇ ಶಾಲೆ, ಮೊಬೈಲ್‌ ನಲ್ಲಿಯೇ ಮಕ್ಕಳಿಗೆ ಶಿಕ್ಷಕರಿಂದ ಪಾಠ ಶುರುವಾಗಿದೆ. ಅದೇ ರೀತಿ ವೈದ್ಯಕೀಯ ಕ್ಷೇತ್ರದಲ್ಲಿಯೂ ಯಾವ ವೈದ್ಯರೂ ರೋಗಿಯನ್ನು ನೇರವಾಗಿ ತಪಾಸಣೆ ಮಾಡದೆ ದೂರವಾಣಿ ಇಲ್ಲವೇ ಇತರೆ ಯಾವುದೇ ಸಂಪರ್ಕ ಮಾಧ್ಯಮದ ಮೂಲಕ ಔಷಧೋಪಚಾರ, ಸಲಹೆ ನೀಡಬಾರದು ಎಂಬ ನಿಯಮವಿತ್ತು. ಆದರೆ, ಈಗ ಈ ನಿಯಮವೂ ತಲೆಕೆಳಗಾಗಿದ್ದು ವೈದ್ಯರೇ ಮೊಬೈಲ್‌ ಮೂಲಕ ಆರೋಗ್ಯ ಸೇವೆ ನೀಡಲು ಮುಂದಾಗಿದ್ದಾರೆ.

ಇಬ್ಬರಿಗೂ ಅನುಕೂಲ: ಕೋವಿಡ್ ಆರ್ಭಟ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಜನರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗಾಗಿ ಆಸ್ಪತ್ರೆಗಳಿಗೆ ಹೋಗುವುದು ಕಡಿಮೆ ಮಾಡಿದ್ದಾರೆ. ಜನರ ಈ ಮನೋಭಾವದಿಂದ ಖಾಸಗಿ ಆಸ್ಪತ್ರೆಗಳು ಈ ಸಂದರ್ಭದಲ್ಲಿ ರೋಗಿಗಳ ಅಭಾವ ಎದುರಿಸುತ್ತಿದ್ದವು. ಆನ್‌ಲೈನ್‌ ಆರೋಗ್ಯ ಸೇವೆ ಖಾಸಗಿ ಆಸ್ಪತ್ರೆಗಳು ಎದುರಿಸುತ್ತಿದ್ದ ರೋಗಿಗಳ ಕೊರತೆ ನೀಗಿಸಿದೆ. ಜತೆಗೆ

ರೋಗಿಗಳಿಗೆ ಮನೆಯಲ್ಲಿಯೇ ಸುರಕ್ಷತೆಯೊಂದಿಗೆ ಸೇವೆ ಪಡೆಯಲು ಅನುಕೂಲ ಕಲ್ಪಿಸಿದೆ. ಒಟ್ಟಾರೆ “ರೋಗಿ ಬಯಸಿದ್ದೂ ಹಾಲು-ಅನ್ನ. ವೈದ್ಯ ಹೇಳಿದ್ದೂ ಹಾಲು-ಅನ್ನ’ ಎಂಬಂತೆ ಆನ್‌ಲೈನ್‌ ಆರೋಗ್ಯ ಸೇವೆ ಪದ್ಧತಿ ಖಾಸಗಿ ವೈದ್ಯರಿಗೂ- ರೋಗಿಗಳಿಗೂ ಅನುಕೂಲವಾಗಿದೆ.

ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹಬ್ಬುತ್ತಿರುವ ಈ ಸಂದರ್ಭದಲ್ಲಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಜನರು ಆಸ್ಪತ್ರೆಗಳಿಗೆ ಓಡಾಡುವುದನ್ನು ತಪ್ಪಿಸಲು ಆನ್‌ಲೈನ್‌ ಸೇವೆ ಆರಂಭಿಸಲಾಗಿದೆ. ಇದರಿಂದ ಆರೋಗ್ಯ ಸಮಸ್ಯೆ ಇರುವವರು ಆಸ್ಪತ್ರೆಗಾಗಿ ಹೊರಗಡೆ ಓಡಾಡುವುದು ತಪ್ಪುತ್ತದೆ. ಮನೆಯಲ್ಲಿಯೇ ಸೂಕ್ತ ಔಷಧೋಪಚಾರ, ಸಲಹೆ ಸಿಗುತ್ತದೆ. ಡಾ|ರಮೇಶ ಮಲ್ಲಾಡದ, ಖಾಸಗಿ ಆಸ್ಪತ್ರೆ

 

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.