ಮದ್ಯದಂಗಡಿಯಿಂದ ಬಿತ್ತನೆ ಕಾರ್ಯಕ್ಕೆ ತೊಂದರೆ

ಎಲ್ಲೆಲ್ಲೂ ಮಾಕನೂರು ಕ್ರಾಸ್‌ ಹತ್ತಿರದ ಜಮೀನಿನಲ್ಲಿ ತೆರೆದಿರುವ ಅಂಗಡಿ ಕುಡಿದು ಜಮೀನಿನಲ್ಲೇ ಬಾಟಲು ಎಸೆತ

Team Udayavani, Jun 11, 2019, 7:59 AM IST

hv-tdy-2..

ರಾಣಿಬೆನ್ನೂರ: ತಾಲೂಕಿನ ಮಾಕನೂರು ಕ್ರಾಸ್‌ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಜಮೀನಿನಲ್ಲಿ ಕುಡಿದು ಬಾಟಲಿಗಳನ್ನು ಎಸೆದಿರುವುದು.

ರಾಣಿಬೆನ್ನೂರ: ತಾಲೂಕಿನ ಮಾಕನೂರು ಕ್ರಾಸ್‌ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಜಮೀನಿನಲ್ಲಿ ತೆರೆದಿರುವ ಸಿಎಲ್-2 ಮದ್ಯದ ಅಂಗಡಿಯಿಂದಾಗಿ ಅಕ್ಕ ಪಕ್ಕ ಇರುವ ಕವಲೆತ್ತು, ಕರೂರು, ಮಾಕನೂರು ಗ್ರಾಮದ ಕೆಲ ರೈತರ ಜಮೀನುಗಳಲ್ಲಿ ಕುಡಿದ ಬಾಟಲಿಗಳನ್ನು ಎಸೆಯುತ್ತಿದ್ದು ಇದರಿಂದ ಮುಂಗಾರು ಉಳುಮೆ ಮಾಡುವುದು ರೈತರಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ ಎಂದು ರೈತರು ಆರೋಪಿಸಿದ್ದಾರೆ.

ಅಸಮರ್ಪಕ ಮುಂಗಾರು ಮಳೆಯಿಂದಾಗಿ ಮೊದಲೇ ರೈತರು ಸಂಕಷ್ಟದಲ್ಲಿದ್ದಾರೆ ಆದರೆ, ಇಲ್ಲಿನ ರೈತರು ಮತ್ತೂಂದು ರೀತಿಯ ತೊಂದರೆ ಎದುರಿಸುವಂತಾಗಿದೆ. ಸಿಎಲ್-2 ಬಾರ್‌ ಅನ್ನು ತೆರೆಯಲು ಅನುಮತಿ ನೀಡಿರುವ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯವರ ನಿರ್ಲಕ್ಷ್ಯ ಧೋರಣೆಯಿಂದಾಗಿ ಜನರು ಕುಡಿದು ಸೀಸಗಳನ್ನು ಬಿಸಾಡಿದ್ದಾರೆ.

ಇನ್ನು ಸಂಜೆಯಾದ ಕೂಡಲೇ ಅಂಗಡಿಗೆ ಜಮಾಯಿಸುವ ಕೆಲವರು ಕುಡಿದ ಅಮಲಿನಲ್ಲಿ ಬಾಟಲಿಗಳನ್ನು ಜಮೀನಿನ ತುಂಬೆಲ್ಲಾ ಎಸೆದಿರುವುದಲ್ಲದೆ ಅಲ್ಲಲ್ಲಿ ಬಾಟಲಿಗಳನ್ನು ಒಡೆದು ಚೂರು ಮಾಡಲಾಗಿದೆ. ಇದರಿಂದಾಗಿ ಜಮೀನಿನಲ್ಲಿ ಉಳುಮೆ ಮಾಡಿ ಬಿತ್ತನೆ ಮಾಡುವ ವೇಳೆ ರೈತರ ಕಾಲುಗಳಿಗೆ ಚುಚ್ಚಲಿವೆ ಎಂದು ರೈತರು ಆತಂಕಗೊಂಡಿದ್ದಾರೆ.

ತಾಲೂಕಿನ ಮಾಕನೂರು ಕ್ರಾಸ್‌ ಹತ್ತಿರದ ಜಮೀನಿನಲ್ಲಿ ತೆರೆದಿರುವ ಸಿಎಲ್-2 ಮದ್ಯದ ಅಂಗಡಿಯಿಂದಾಗಿ ರೈತರಿಗೆ ತೊಂದರೆಯಾಗಿದ್ದು, ಜಿಲ್ಲಾಧಿಕಾರಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ರೈತರಿಗೆ ಅನುಕೂಲ ಮಾಡಬೇಕೆಂದು ಮನವಿ ಮಾಡಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವುದು ವಿಳಂಬವಾದಲ್ಲಿ ರೈತ ಹೋರಾಟಗಾರರು, ಸ್ತ್ರೀ-ಶಕ್ತಿ ಸಂಘಗಳು ಹಾಗೂ ಪರಿಸರ ಸ್ನೇಹಿ ಸಂಘಟನೆಗಳೊಂದಿಗೆ ಹೋರಾಟ ಮಾಡಲಾಗುವುದು.
•ಹನುಮಂತಪ್ಪ ಕಬ್ಟಾರ, ಅಧ್ಯಕ್ಷರು ತಾಲೂಕು ರೈತ ಸಂಘ ರಾಣಿಬೆನ್ನೂರ
ಮಾಕನೂರು ಕ್ರಾಸ್‌ ಹತ್ತಿರದ ಜಮೀನಿನಲ್ಲಿ ತೆರೆದಿರುವ ಮದ್ಯದ ಅಂಗಡಿ ಅಧಿಕೃತವಾಗಿದ್ದು, ಅಕ್ಕ ಪಕ್ಕದ ಕೆಲ ರೈತರ ಜಮೀನುಗಳಲ್ಲಿ ಕುಡಿದು ಬಾಟಲಿಗಳನ್ನು ಎಸೆದಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಕುಡಿದು ಎಲ್ಲೆಂದರಲ್ಲಿ ಎಸೆಯದಂತೆ ಕ್ರಮ ಕೈಗೊಳ್ಳಲಾಗುವುದು.•ಹನುಮಂತಪ್ಪ ವಜ್ರಮಟ್ಟಿ, ಅಬಕಾರಿ ನಿರೀಕ್ಷಕರು ರಾಣಿಬೆನ್ನೂರ
ಮಾಕನೂರು ಕ್ರಾಸ್‌ ಹತ್ತಿರದ ಜಮೀನಿನಲ್ಲಿ ತೆರೆದಿರುವ ಮದ್ಯದ ಅಂಗಡಿಗೆ ಕಟ್ಟಡ ಪರವಾನಗಿ ಪಡೆದಿದ್ದಾರೆ.•ಗೀತಾ ಪಿಡಿಓ ಗ್ರಾಪಂ ನದಿಹರಳಳ್ಳಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.