ರಮೇಶ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ
Team Udayavani, Mar 4, 2021, 6:24 PM IST
ಹಾವೇರಿ: ರಮೇಶ ಜಾರಕಿಹೊಳಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಮೈಲಾರ ಮಹಾದೇವ ವೃತ್ತದಿಂದ ಹೊಸಮನಿ ಸಿದ್ಧಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಜಾರಕಿಹೊಳಿ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ, ರಮೇಶ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯುನೂಸ್, ಸವಣೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ನಗರಸಭೆ ಸದಸ್ಯ ದಾದಾಪೀರ ಚೂಡಿಗಾರ, ಸುನೀಲ ಜಮಾದಾರ, ಹಾವೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಉಮರ್ ಇನಾಮದಾರ, ಅಲ್ಪಾಜ್ ಹಾವೇರಿ, ಗಂಗಾಧರ ಕಾಗದ, ಉಮ್ಮಿàದ್ ನದಾಫ್, ಮಹಾಲಿಂಗಯ್ಯ ಹಿರೇಮಠ, ನದಾಫ್, ನವೀದ ವರ್ದಿ, ಮುದಸ್ಸರ ಸವಣೂರ, ರಾಜನಗೌಡ ಪಾಟೀಲ, ಆದರ್ಶ ನಾಯಕ ಇತರರು ಇದ್ದರು.